ಸೇತುವೆಯಿಂದ ಪಲ್ಟಿ ಹೊಡೆದ 40 ಜನರಿದ್ದ ಬಸ್
ಮದುವೆಯಿಂದ ಹಿಂತಿರುಗುತ್ತಿದ್ದ ವೇಳೆ ಪಲ್ಟಿ ಹೊಡೆದ ಬಸ್
ಬಸ್ ಪಲ್ಟಿ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಆರಂಭಿಸಿದ ಪೊಲೀಸರು
ಸೇತುವೆಯಿಂದ ಬಸ್ ಪಲ್ಟಿಯಾಗಿ 20 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಒಡಿಶಾದ ಜಗತ್ಸಿಂಗ್ಪುರದಲ್ಲಿ ನಡೆದಿದೆ. ಬಸ್ 10 ಮಹಿಳೆಯರು ಮತ್ತು 7 ಮಕ್ಕಳು ಸೇರಿದಂತೆ 35 ಕ್ಕೂ ಹೆಚ್ಚು ಜನರನ್ನು ಹೊತ್ತು ಸಾಗಿಸುತ್ತಿತ್ತು. ಈ ವೇಳೆ ದುರ್ಘಟನೆ ಸಂಭವಿಸಿದೆ.
ಬಸ್ ಧನುರಬೆಳರಿಯಲ್ಲಿ ಮದುವೆ ಕಾರ್ಯಕ್ರಮದಿಂದ ಬಲಿಕುಡದ ಬೂದಿಸಾಹಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಕೂಡಲೇ ಗಾಯಾಳುಗಳನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಭೀಕರ ಮಳೆಗೆ ಡ್ಯಾಂ ಕುಸಿತ.. ಅಲ್ಲಿ 155, ಇಲ್ಲಿ 40 ಮಂದಿ ಸಾವು.. ಪ್ರವಾಹದಿಂದ ಜೀವ ಉಳಿಸಿಕೊಳ್ಳಲು ಜನರ ಪರದಾಟ
ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ಆರಂಭಿಸಿದ್ದಾರೆ. ಸದ್ಯ ಗಾಯಾಳುಗಳು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸೇತುವೆಯಿಂದ ಪಲ್ಟಿ ಹೊಡೆದ 40 ಜನರಿದ್ದ ಬಸ್
ಮದುವೆಯಿಂದ ಹಿಂತಿರುಗುತ್ತಿದ್ದ ವೇಳೆ ಪಲ್ಟಿ ಹೊಡೆದ ಬಸ್
ಬಸ್ ಪಲ್ಟಿ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಆರಂಭಿಸಿದ ಪೊಲೀಸರು
ಸೇತುವೆಯಿಂದ ಬಸ್ ಪಲ್ಟಿಯಾಗಿ 20 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಒಡಿಶಾದ ಜಗತ್ಸಿಂಗ್ಪುರದಲ್ಲಿ ನಡೆದಿದೆ. ಬಸ್ 10 ಮಹಿಳೆಯರು ಮತ್ತು 7 ಮಕ್ಕಳು ಸೇರಿದಂತೆ 35 ಕ್ಕೂ ಹೆಚ್ಚು ಜನರನ್ನು ಹೊತ್ತು ಸಾಗಿಸುತ್ತಿತ್ತು. ಈ ವೇಳೆ ದುರ್ಘಟನೆ ಸಂಭವಿಸಿದೆ.
ಬಸ್ ಧನುರಬೆಳರಿಯಲ್ಲಿ ಮದುವೆ ಕಾರ್ಯಕ್ರಮದಿಂದ ಬಲಿಕುಡದ ಬೂದಿಸಾಹಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಕೂಡಲೇ ಗಾಯಾಳುಗಳನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಭೀಕರ ಮಳೆಗೆ ಡ್ಯಾಂ ಕುಸಿತ.. ಅಲ್ಲಿ 155, ಇಲ್ಲಿ 40 ಮಂದಿ ಸಾವು.. ಪ್ರವಾಹದಿಂದ ಜೀವ ಉಳಿಸಿಕೊಳ್ಳಲು ಜನರ ಪರದಾಟ
ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ಆರಂಭಿಸಿದ್ದಾರೆ. ಸದ್ಯ ಗಾಯಾಳುಗಳು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ