ಬಿಜೆಪಿ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ; ಭೀಕರ ಅಪಘಾತ

author-image
Ganesh Nachikethu
Updated On
ಬಿಜೆಪಿ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ; ಭೀಕರ ಅಪಘಾತ
Advertisment
  • ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ
  • ಭೀಕರ ಅಪಘಾತದಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರು
  • ಚಿಕ್ಕಮಗಳೂರಿನಿಂದ ಶಿಖಾರಿಪುರ ತೆರಳುವ ವೇಳೆ ಆ್ಯಕ್ಸಿಡೆಂಟ್​

ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಲಾರಿ ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರು ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕ ಸೇರಿದಂತೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಡ್ರೈವರ್​ ವಿರುದ್ಧ ಕೇಸ್​ ಮಾಡಿದ್ದಾರೆ.

ಇನ್ನು, ಪಕ್ಷದ ಕಡೆಯಿಂದ ವಿಜಯೇಂದ್ರ ಅವರಿಗೆ ನೀಡಲಾದ ಅಧಿಕೃತ ಕಾರು ಇದಾಗಿತ್ತು. ವಿಜಯೇಂದ್ರ ಅವರು ತಮ್ಮ ಪರ್ಸನಲ್​ ಕಾರಿನಲ್ಲಿ ಇದ್ದರು. ಪಕ್ಷ ನೀಡಿದ್ದ ಕಾರಿನಲ್ಲಿ ವಿಜಯೇಂದ್ರ ಅವರ ಫೋಟೋಗ್ರಾಫರ್​​ ಮತ್ತು ಪಿಎ ಸಂಚರಿಸುತ್ತಿದ್ದರು. ಚಿಕ್ಕಮಗಳೂರಿನಿಂದ ಶಿಖಾರಿಪುರ ತೆರಳುವ ವೇಳೆ ಆ್ಯಕ್ಸಿಡೆಂಟ್​ ಆಗಿದೆ.

ಇದನ್ನೂ ಓದಿ:ಎಲ್ಲ ಉತ್ಪನ್ನಗಳ ಮೇಲೂ ಕನ್ನಡ ಕಡ್ಡಾಯ; CM ಸಿದ್ದರಾಮಯ್ಯ ಸರ್ಕಾರ ಮಹತ್ವದ ಆದೇಶ

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ ಫಸ್ಟ್‌ ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment