ಕೊಡಗಿನಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ
25 ದಿನಗಳಿಂದ ತಾಯಿಗಾಗಿ ಕಾಡು-ಊರು ಅಲೆಯುತ್ತಿತ್ತು
ಅರಣ್ಯ ಇಲಾಖೆ ರಕ್ಷಣೆ ಮಾಡಿ ಮರಿಯಾನೆಗೆ ಆರೈಕೆ ಮಾಡ್ತಿತ್ತು
ಕೊಡಗು: ತಾಯಿಯಿಂದ ಬೇರ್ಪಟ್ಟು ತಬ್ಬಲಿಯಾಗಿದ್ದ ಮರಿಯಾನೆ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ.
5 ತಿಂಗಳ ಮರಿಯಾನೆ ತಾಯಿಗಾಗಿ ಅಲೆದು, ಅಲೆದು ನಿತ್ರಾಣಗೊಂಡಿತ್ತು. ಇದನ್ನು ಗಮನಿಸಿದ್ದ ಅರಣ್ಯ ಸಿಬ್ಬಂದಿ ಮರಿಯಾನೆಯನ್ನು ರಕ್ಷಿಸಿ ದುಬಾರೆ ಶಿಬಿರಕ್ಕೆ ಶಿಫ್ಟ್ ಮಾಡಿದ್ದರು. ಗಂಜಿ, ಹಾಲು ನೀಡಿ ಆರೈಕೆ ಮಾಡುತ್ತಿದ್ದರು. ವನ್ಯಜೀವಿ ವೈದ್ಯ ಡಾ.ಚೆಟ್ಟಿಯಪ್ಪ ಚಿಕಿತ್ಸೆ ನೀಡುತ್ತಿದ್ದರು.
ಇದನ್ನೂ ಓದಿ:ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ; ನಟನ ಕೊಲೆ ಮಾಡಲು ಬಂದವರು ಅಂತಿಂಥ ಜನ ಅಲ್ಲ..!
ಕೊಂಚ ಚೇತರಿಸಿಕೊಂಡಿದ್ದ ಮರಿಯಾನೆ ಬೆಳಗ್ಗೆ ಸಾವನ್ನಪ್ಪಿದೆ. ಅರಣ್ಯ ಇಲಾಖೆಯಿಂದ ಮೃತ ಆನೆ ಮರಿಯ ಅಂತ್ಯಸಂಸ್ಕಾರ ನಡೆದಿದೆ. 25 ದಿನಗಳಿಂದ ತಾಯಿಗಾಗಿ ಕಾಡು-ಊರು ಅಲೆಯುತ್ತಿತ್ತು. ಎಲ್ಲಿಯೂ ತಾಯಿ ಸಿಗದ ಹಿನ್ನಲೆ ಮರಿಯಾನೆ ಉಂಟಿಯಾಗಿತ್ತು. ರಕ್ಷಣೆಯಾದರೂ ಕೂಡ ಬದುಕುಳಿಯದ ದುರಂತ ಅಂತ್ಯ ಕಂಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕೊಡಗಿನಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ
25 ದಿನಗಳಿಂದ ತಾಯಿಗಾಗಿ ಕಾಡು-ಊರು ಅಲೆಯುತ್ತಿತ್ತು
ಅರಣ್ಯ ಇಲಾಖೆ ರಕ್ಷಣೆ ಮಾಡಿ ಮರಿಯಾನೆಗೆ ಆರೈಕೆ ಮಾಡ್ತಿತ್ತು
ಕೊಡಗು: ತಾಯಿಯಿಂದ ಬೇರ್ಪಟ್ಟು ತಬ್ಬಲಿಯಾಗಿದ್ದ ಮರಿಯಾನೆ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ.
5 ತಿಂಗಳ ಮರಿಯಾನೆ ತಾಯಿಗಾಗಿ ಅಲೆದು, ಅಲೆದು ನಿತ್ರಾಣಗೊಂಡಿತ್ತು. ಇದನ್ನು ಗಮನಿಸಿದ್ದ ಅರಣ್ಯ ಸಿಬ್ಬಂದಿ ಮರಿಯಾನೆಯನ್ನು ರಕ್ಷಿಸಿ ದುಬಾರೆ ಶಿಬಿರಕ್ಕೆ ಶಿಫ್ಟ್ ಮಾಡಿದ್ದರು. ಗಂಜಿ, ಹಾಲು ನೀಡಿ ಆರೈಕೆ ಮಾಡುತ್ತಿದ್ದರು. ವನ್ಯಜೀವಿ ವೈದ್ಯ ಡಾ.ಚೆಟ್ಟಿಯಪ್ಪ ಚಿಕಿತ್ಸೆ ನೀಡುತ್ತಿದ್ದರು.
ಇದನ್ನೂ ಓದಿ:ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ; ನಟನ ಕೊಲೆ ಮಾಡಲು ಬಂದವರು ಅಂತಿಂಥ ಜನ ಅಲ್ಲ..!
ಕೊಂಚ ಚೇತರಿಸಿಕೊಂಡಿದ್ದ ಮರಿಯಾನೆ ಬೆಳಗ್ಗೆ ಸಾವನ್ನಪ್ಪಿದೆ. ಅರಣ್ಯ ಇಲಾಖೆಯಿಂದ ಮೃತ ಆನೆ ಮರಿಯ ಅಂತ್ಯಸಂಸ್ಕಾರ ನಡೆದಿದೆ. 25 ದಿನಗಳಿಂದ ತಾಯಿಗಾಗಿ ಕಾಡು-ಊರು ಅಲೆಯುತ್ತಿತ್ತು. ಎಲ್ಲಿಯೂ ತಾಯಿ ಸಿಗದ ಹಿನ್ನಲೆ ಮರಿಯಾನೆ ಉಂಟಿಯಾಗಿತ್ತು. ರಕ್ಷಣೆಯಾದರೂ ಕೂಡ ಬದುಕುಳಿಯದ ದುರಂತ ಅಂತ್ಯ ಕಂಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ