/newsfirstlive-kannada/media/post_attachments/wp-content/uploads/2024/10/ROHIT_SHARMA-2.jpg)
ಪರ್ತ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ 290ಕ್ಕೂ ಹೆಚ್ಚು ರನ್ಗಳಿಂದ ಗೆದ್ದು ವಿಶ್ವದಾಖಲೆ ಬರೆದಿದ್ದ ಟೀಮ್ ಇಂಡಿಯಾ 2ನೇ ಮ್ಯಾಚ್ನಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ಮುಗ್ಗರಿಸಿದೆ. ಅಡಿಲೇಡ್ನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ.
ಇನ್ನು, ಟೀಮ್ ಇಂಡಿಯಾ ಸೋಲಿನ ಬಳಿಕ ಕ್ಯಾಪ್ಟನ್ ರೋಹಿತ್ ಶರ್ಮಾ ಮಾತಾಡಿದ್ದಾರೆ. ಇದು ನಮಗೆ ನಿರಾಶಾದಾಯಕ ವಾರ. ನಾವು ಉತ್ತಮ ಪ್ರದರ್ಶನ ನೀಡಲಿಲ್ಲ. ಆಸ್ಟ್ರೇಲಿಯಾ ನಮಗಿಂತ ಚೆನ್ನಾಗಿ ಆಡಿದೆ. ಸಿಕ್ಕ ಅವಕಾಶ ಬಳಸಿಕೊಳ್ಳುವಲ್ಲಿ ವಿಫಲರಾಗಿದ್ದೇವೆ ಎಂದರು.
ಮೊದಲ ಟೆಸ್ಟ್ ಬಗ್ಗೆ ಏನಂದ್ರು ರೋಹಿತ್?
ಮೊದಲ ಟೆಸ್ಟ್ ಪಂದ್ಯದಲ್ಲಿ ನಾವು ವಿಶೇಷ ದಾಖಲೆ ಮಾಡಿದ್ದೆವು. ಪ್ರತಿ ಟೆಸ್ಟ್ ಪಂದ್ಯದಲ್ಲೂ ಹಲವಾರು ಸವಾಲುಗಳು ಇರುತ್ತವೆ. ಪಿಂಕ್ ಬಾಲ್ನೊಂದಿಗೆ ಆಡುವುದು ಸವಾಲಿನ ಆಟ ಎಂಬುದು ನಮಗೆ ಗೊತ್ತಿತ್ತು. ಗಬ್ಬಾದಲ್ಲಿ ನಡೆಯಲಿರೋ 3ನೇ ಟೆಸ್ಟ್ಗಾಗಿ ಎದುರು ನೋಡುತ್ತಿದ್ದೇವೆ ಎಂದರು.
ಸೋಲಿಗೆ ಕಾರಣ ಬಿಟ್ಟಿಟ್ಟ ರೋಹಿತ್
3ನೇ ಟೆಸ್ಟ್ನಲ್ಲಿ ಚೆನ್ನಾಗಿ ಆಡುವ ಭರವಸೆ ಹೊಂದಿದ್ದೇವೆ. ಪರ್ತ್ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕಾರಣದಿಂದಲೇ ಗೆದ್ದೆವು. ಅಡಿಲೇಡ್ನಲ್ಲಿ ಟೀಮ್ ಇಂಡಿಯಾದ ಆಟಗಾರರು ಚೆನ್ನಾಗಿ ಆಡಲಿಲ್ಲ. ಹಾಗಾಗಿ ಸೋತೆವು. ಇದರ ಕುರಿತು ಚರ್ಚೆ ಮಾಡುತ್ತೇವೆ ಎಂದರು.
ಭಾರತಕ್ಕೆ ಹೀನಾಯ ಸೋಲು
ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಬ್ಯಾಟ್ ಮಾಡಿದ ಭಾರತ 180 ರನ್ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಆಸ್ಟ್ರೇಲಿಯಾ 337 ರನ್ಗಳಿಸಿ 157 ರನ್ ಗಳ ಬೃಹತ್ ಮುನ್ನಡೆ ಸಾಧಿಸಿತ್ತು. 2ನೇ ಇನ್ನಿಂಗ್ಸ್ನಲ್ಲಿ ಭಾರತ 175 ರನ್ಗಳಿಗೆ ಆಲೌಟ್ ಆಗಿತ್ತು. ಆಸ್ಟ್ರೇಲಿಯಾ 19 ರನ್ಗಳ ಗುರಿಯನ್ನು ಕೇವಲ 3.1 ಓವರ್ನಲ್ಲಿ ಮುಟ್ಟಿತು.
ಇದನ್ನೂ ಓದಿ:ಒಂದು ಸೋಲು, 3ನೇ ಸ್ಥಾನಕ್ಕೆ ಕುಸಿದ ಟೀಮ್ ಇಂಡಿಯಾ.. ಫಸ್ಟ್, ಸೆಕೆಂಡ್ ಯಾವ ಟೀಮ್ ಇವೆ?
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ