/newsfirstlive-kannada/media/post_attachments/wp-content/uploads/2024/06/Meerut-1.jpg)
ಕಾರೊಂದು ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಮೀರತ್​ನ ದೆಹಲಿ-ಡೆಹ್ರಾಡೂನ್​ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ.
ಹರಿದ್ವಾರದಿಂದ ಬರುತ್ತಿದ್ದ ಕಾರೊಂದು ವಲೀದ್​​​ಪುರ ಗ್ರಾಮದ ಮುಂಭಾಗದ ರಸ್ತೆ ಬದಿ ನಿಂತಿದ್ದ ಬಸ್​ಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ. ಪಂಚರ್​ ಆಗಿದ್ದ ಬಸ್​ ಟೈರ್​ ಬದಲಿಸುವ ವೇಳೆ ಅಪಘಾತ ಸಂಭವಿಸಿದೆ. ಪರಿಣಾಮ ಕಾರು ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದವರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ರೈತರಿಗೆ ಸಂತಸದ ಸುದ್ದಿ.. ಬ್ಯಾಂಕ್​ ಖಾತೆಗೆ 101.61 ಕೋಟಿ ರೂಪಾಯಿ ಬೆಳೆ ವಿಮೆ ಹಣ ಜಮಾ
ಸಾವನ್ನಪ್ಪಿದ್ದ ಮಗನ ಚಿತಾಭಸ್ಮವನ್ನು ಹರಿದ್ವಾರದಲ್ಲಿ ಬಿಟ್ಟು ಕಾರಿನಲ್ಲಿ ಹಿಂತಿರುಗುತ್ತಿದ್ದರು. ರಾತ್ರಿ ಬರುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾರಿನಲ್ಲಿದ್ದವರು ದೆಹಲಿ ಮೂಲಕ ವಿಜಯ್​ ಪಾರ್ಕ್​ನ ಮೌಜ್​ಪುರದವರು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. 6 ತಿಂಗಳ ಬಾಲಕಿಯೊಬ್ಬಳು ಯಾವುದೇ ಪ್ರಾಣಪಾಯದಿಂದ ಬಚಾವ್​ ಆಗಿದ್ದಾಳೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us