ಕಾರು-ಗೂಡ್ಸ್ ಲಾರಿ ನಡುವೆ ಭೀಕರ ಅಪಘಾತ
ಇಂದು ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತ
ಲಾರಿ ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸಾವು
ಮಂಡ್ಯ: ಕಾರು-ಗೂಡ್ಸ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ರಾಮನಹಳ್ಳಿ ಗ್ರಾಮದ ಬಳಿ ನಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಇದೆಂಥಾ ದುರ್ಗತಿ! ಒಂದೇ ದಿನ 7 ಜನ ಸಾವು.. ಈ ಊರಲ್ಲಿ ಅಂತ್ಯಕ್ರಿಯೆ ಮಾಡಲು ಸ್ಮಶಾನವೇ ಇಲ್ಲ
ಇಂದು ಬೆಳಗಿನ ಜಾವ ನಾಗಮಂಗಲ-ಪಾಂಡವಪುರ ಹೆದ್ದಾರಿಯಲ್ಲಿ ನಡೆದಿರುವ ಅಪಘಾತ ಇದಾಗಿದೆ. ಕಾರಿನಲ್ಲಿದ್ದ ಸಿದ್ದೇಶ್, ಯುವರಾಜ್ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ತಿಪ್ಪೇಸ್ವಾಮಿ ಬೆಳ್ಳೂರು ಎಂಬವರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇದನ್ನೂ ಓದಿ: ಆನ್ಲೈನ್ ಗೇಮಿಂಗ್ ವ್ಯಾಮೋಹಕ್ಕೆ ವಿದ್ಯಾರ್ಥಿ ಬಲಿ.. ನೇಣು ಹಾಕಿಕೊಂಡು ಸಾವನ್ನಪ್ಪಿದ BE ಸ್ಟೂಡೆಂಟ್
ಮೃತರೆಲ್ಲರೂ ಚಿತ್ರದುರ್ಗ ಜಿಲ್ಲೆ ಮೂಲದವರಾಗಿದ್ದು, ನಾಗಮಂಗಲ ತಾಲೂಕು ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆದಿದೆ. ನಾಗಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕಾರು-ಗೂಡ್ಸ್ ಲಾರಿ ನಡುವೆ ಭೀಕರ ಅಪಘಾತ
ಇಂದು ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತ
ಲಾರಿ ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸಾವು
ಮಂಡ್ಯ: ಕಾರು-ಗೂಡ್ಸ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ರಾಮನಹಳ್ಳಿ ಗ್ರಾಮದ ಬಳಿ ನಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಇದೆಂಥಾ ದುರ್ಗತಿ! ಒಂದೇ ದಿನ 7 ಜನ ಸಾವು.. ಈ ಊರಲ್ಲಿ ಅಂತ್ಯಕ್ರಿಯೆ ಮಾಡಲು ಸ್ಮಶಾನವೇ ಇಲ್ಲ
ಇಂದು ಬೆಳಗಿನ ಜಾವ ನಾಗಮಂಗಲ-ಪಾಂಡವಪುರ ಹೆದ್ದಾರಿಯಲ್ಲಿ ನಡೆದಿರುವ ಅಪಘಾತ ಇದಾಗಿದೆ. ಕಾರಿನಲ್ಲಿದ್ದ ಸಿದ್ದೇಶ್, ಯುವರಾಜ್ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ತಿಪ್ಪೇಸ್ವಾಮಿ ಬೆಳ್ಳೂರು ಎಂಬವರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇದನ್ನೂ ಓದಿ: ಆನ್ಲೈನ್ ಗೇಮಿಂಗ್ ವ್ಯಾಮೋಹಕ್ಕೆ ವಿದ್ಯಾರ್ಥಿ ಬಲಿ.. ನೇಣು ಹಾಕಿಕೊಂಡು ಸಾವನ್ನಪ್ಪಿದ BE ಸ್ಟೂಡೆಂಟ್
ಮೃತರೆಲ್ಲರೂ ಚಿತ್ರದುರ್ಗ ಜಿಲ್ಲೆ ಮೂಲದವರಾಗಿದ್ದು, ನಾಗಮಂಗಲ ತಾಲೂಕು ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆದಿದೆ. ನಾಗಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ