ರಸ್ತೆ ದಾಟುತ್ತಿದ್ದಾಗ ವಿದ್ಯಾರ್ಥಿನಿಗೆ ಏಕಾಏಕಿ ಡಿಕ್ಕಿ ಹೊಡೆದ ಕಾರು
ಮುಧೋಳ ತಹಶೀಲ್ದಾರ್ ಕಚೇರಿ ಬಳಿ ನಡೆದ ಭೀಕರ ಅಪಘಾತ
ಪವಾಡ ಸದೃಶ ರೀತಿಯಲ್ಲಿ ಬಚಾವ್ ಆದ ವಿದ್ಯಾರ್ಥಿನಿ ರೇಣುಕಾ
ಬಾಗಲಕೋಟೆ: ಇತ್ತೀಚಿಗೆ ರಾಜ್ಯದ ಹಲವೆಡೆ ಅಪಘಾತದ ಸಂಖ್ಯೆ ಹೆಚ್ಚಾಗುತ್ತಲೇ ಇವೆ. ಭೀಕರ ಅಪಘಾತದಲ್ಲಿ ಸಾಕಷ್ಟು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಅದರಲ್ಲಿ ಇನ್ನು ಕೆಲವರು ಸಾವಿನ ದವಡೆಯಿಂದ ಪಾರಾಗಿ ಬರುತ್ತಾರೆ. ಹೀಗೆ ರಸ್ತೆ ದಾಟುತ್ತಿದ್ದಾಗ ವಿದ್ಯಾರ್ಥಿನಿಗೆ ಆಕಸ್ಮಿಕವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಈ ಘಟನೆಯು ಜಿಲ್ಲೆಯ ಮುಧೋಳ ತಹಶೀಲ್ದಾರ್ ಕಚೇರಿ ಬಳಿ ಸಂಭವಿಸಿದೆ.
ವಿದ್ಯಾರ್ಥಿನಿಯು ರಸ್ತೆ ಮೇಲೆ ಓಡಿಕೊಂಡು ಹೋಗುತ್ತಿದ್ದಾಗ ಏಕಾಏಕಿ ಬಂದ ಕಾರು ಆಕೆಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ಹಾರಿ ರಸ್ತೆ ಬದಿ ಬಿದ್ದಿದ್ದಾಳೆ. ಸದ್ಯ ಈ ಅಪಘಾತದಲ್ಲಿ ಬದುಕುಳಿದ ವಿದ್ಯಾರ್ಥಿನಿ ರೇಣುಕಾಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಈ ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ರಸ್ತೆ ದಾಟುತ್ತಿದ್ದಾಗ ಆಕಸ್ಮಿಕವಾಗಿ ಕಾರೊಂದು ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದ ಘಟನೆ ಜಿಲ್ಲೆಯ ಮುಧೋಳ ತಹಶೀಲ್ದಾರ್ ಕಚೇರಿ ಬಳಿ ಸಂಭವಿಸಿದೆ. ಸದ್ಯ ವಿದ್ಯಾರ್ಥಿನಿ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.#newsfirstkannada #kannadanews #newsfirstlive #Accidente #cctv #student #bagalkot pic.twitter.com/k8uE8M3t94
— NewsFirst Kannada (@NewsFirstKan) July 4, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ರಸ್ತೆ ದಾಟುತ್ತಿದ್ದಾಗ ವಿದ್ಯಾರ್ಥಿನಿಗೆ ಏಕಾಏಕಿ ಡಿಕ್ಕಿ ಹೊಡೆದ ಕಾರು
ಮುಧೋಳ ತಹಶೀಲ್ದಾರ್ ಕಚೇರಿ ಬಳಿ ನಡೆದ ಭೀಕರ ಅಪಘಾತ
ಪವಾಡ ಸದೃಶ ರೀತಿಯಲ್ಲಿ ಬಚಾವ್ ಆದ ವಿದ್ಯಾರ್ಥಿನಿ ರೇಣುಕಾ
ಬಾಗಲಕೋಟೆ: ಇತ್ತೀಚಿಗೆ ರಾಜ್ಯದ ಹಲವೆಡೆ ಅಪಘಾತದ ಸಂಖ್ಯೆ ಹೆಚ್ಚಾಗುತ್ತಲೇ ಇವೆ. ಭೀಕರ ಅಪಘಾತದಲ್ಲಿ ಸಾಕಷ್ಟು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಅದರಲ್ಲಿ ಇನ್ನು ಕೆಲವರು ಸಾವಿನ ದವಡೆಯಿಂದ ಪಾರಾಗಿ ಬರುತ್ತಾರೆ. ಹೀಗೆ ರಸ್ತೆ ದಾಟುತ್ತಿದ್ದಾಗ ವಿದ್ಯಾರ್ಥಿನಿಗೆ ಆಕಸ್ಮಿಕವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಈ ಘಟನೆಯು ಜಿಲ್ಲೆಯ ಮುಧೋಳ ತಹಶೀಲ್ದಾರ್ ಕಚೇರಿ ಬಳಿ ಸಂಭವಿಸಿದೆ.
ವಿದ್ಯಾರ್ಥಿನಿಯು ರಸ್ತೆ ಮೇಲೆ ಓಡಿಕೊಂಡು ಹೋಗುತ್ತಿದ್ದಾಗ ಏಕಾಏಕಿ ಬಂದ ಕಾರು ಆಕೆಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ಹಾರಿ ರಸ್ತೆ ಬದಿ ಬಿದ್ದಿದ್ದಾಳೆ. ಸದ್ಯ ಈ ಅಪಘಾತದಲ್ಲಿ ಬದುಕುಳಿದ ವಿದ್ಯಾರ್ಥಿನಿ ರೇಣುಕಾಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಈ ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ರಸ್ತೆ ದಾಟುತ್ತಿದ್ದಾಗ ಆಕಸ್ಮಿಕವಾಗಿ ಕಾರೊಂದು ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದ ಘಟನೆ ಜಿಲ್ಲೆಯ ಮುಧೋಳ ತಹಶೀಲ್ದಾರ್ ಕಚೇರಿ ಬಳಿ ಸಂಭವಿಸಿದೆ. ಸದ್ಯ ವಿದ್ಯಾರ್ಥಿನಿ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.#newsfirstkannada #kannadanews #newsfirstlive #Accidente #cctv #student #bagalkot pic.twitter.com/k8uE8M3t94
— NewsFirst Kannada (@NewsFirstKan) July 4, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ