ಮರಕ್ಕೆ ಡಿಕ್ಕಿ ಹೊಡೆದ ಕಾರು.. ಭಾರತದ ಇಬ್ಬರು ವಿದ್ಯಾರ್ಥಿಗಳ ದುರಂತ ಅಂತ್ಯ

author-image
Gopal Kulkarni
Updated On
ಮರಕ್ಕೆ ಡಿಕ್ಕಿ ಹೊಡೆದ ಕಾರು.. ಭಾರತದ ಇಬ್ಬರು ವಿದ್ಯಾರ್ಥಿಗಳ ದುರಂತ ಅಂತ್ಯ
Advertisment
  • ಐರ್ಲೆಂಡ್​ನಲ್ಲಿ ಭಾರತದ ವಿದ್ಯಾರ್ಥಿಗಳ ಜೀವ ಕಸಿದ ಕಾರು ಅಪಘಾತ
  • ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಜೀವ ಬಿಟ್ಟು ವಿದ್ಯಾರ್ಥಿಗಳು
  • ನಾಲ್ಕು ಜನರಲ್ಲಿ ನಿಂತ ಇಬ್ಬರ ಜೀವ, ಉಳಿದ ಇನ್ನಿಬ್ಬರ ಪರಿಸ್ಥಿತಿ ಗಂಭೀರ

ಐರ್ಲೆಂಡ್​ನಲ್ಲಿ ಕಾರ್​ ಅಪಘಾತ ಸಂಭವಿಸಿ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಜೀವ ಕಳೆದುಕೊಂಡ ಘಟನೆ ನಡೆದಿದೆ. ಭಾರತೀಯ ಮೂಲದ ಭಾರ್ಗವ್​ ಚಿತ್ತೂರಿ ಹಾಗೂ ಸುರೇಶ ಚೆರುಕುರಿ ಎಂಬ ವಿದ್ಯಾರ್ಥಿಗಳ ಭೀಕರ ಕಾರು ಅಪಘಾತದಲ್ಲಿ ಉಸಿರು ಚೆಲ್ಲಿದ್ದಾರೆ.

ಈ ಒಂದು ಕಾರು ಅಪಘಾತ ಜನವರಿ 31 ರಂದು ನಡೆದಿದೆ ರಾಥಿಯೋದ ಲೀಗ್ಹ್​ ಎಂಬಲ್ಲಿ ರೋಡಿನ ಪಕ್ಕದಲ್ಲಿದ್ದ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಜೀವ ಕಳೆದುಕೊಂಡಿದ್ದಾರೆ. ಸ್ಥಳೀಯ ಮಾಧ್ಯಮಗಳು ವರದಿ ಮಾಡಿರುವ ಪ್ರಕಾರ ಕಾರಿನಲ್ಲಿ ಈ ಇಬ್ಬರನ್ನು ಹೊರತು ಪಡಿಸಿ ಇನ್ನಿಬ್ಬರು ಇದ್ದರಂತೆ ಒಬ್ಬ ಹುಡುಗ ಮತ್ತು ಒಬ್ಬಳು 20 ವರ್ಷದ ಹುಡುಗಿ. ಅವರಿಬ್ಬರೂ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಅವರನ್ನು ಲುಕೇ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಇದನ್ನೂ ಓದಿ:ಟೇಕ್​ಆಫ್​ ಆಗುತ್ತಿದ್ದಂತೆ ಹೊತ್ತಿ ಉರಿದ ವಿಮಾನ; ಆಮೇಲಾಗಿದ್ದೇನು?VIDEO

ಇನ್ನು ಡಬ್ಲಿನ್​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಿಂದ ವಿದ್ಯಾರ್ಥಿಗಳಿಗೆ ಶೃದ್ಧಾಂಜಲಿಯನ್ನು ಅರ್ಪಿಸಲಾಗಿದೆ. ಐರ್ಲೆಂಡ್​ನಲ್ಲಿರುವ ಭಾರತದ ಮೂಲದವರಿಂದ ಕಳೆಬರಹವನ್ನು ಸಾಗಿಸುವುದಕ್ಕಾಗಿ ನಿಧಿ ಸಂಗ್ರಹಿಸಲಾಗಿದೆ. ಒಟ್ಟು 25 ಸಾವಿರ ಯುರೋ ಸಂಗ್ರಹಿಸಿ ಮೃತರ ಕುಟುಂಬಕ್ಕೆ ನೆರವು ನೀಡಿದ್ದಾರೆ. ಆಡಿ ಎ6 ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭಿವಿಸಿದೆ. ಅಪಘಾತದಲ್ಲಿ ಭಾರತದ ವಿದ್ಯಾರ್ಥಿಗಳು ದುರಂತ ಅಂತ್ಯ ಕಂಡಿದ್ಕ್ಕೆ ಐರ್ಲೆಂಡ್​ ಪ್ರಧಾನಿ ಆಘಾತ ವ್ಯಕ್ತಪಡಿಸಿದ್ದು. ಸಂತಾಪ ಸೂಚಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment