ಪ್ರವಾಸಕ್ಕೆಂದು ಹೊರಟ್ಟಿದ್ದ ಕಾರು ನಡು ರಸ್ತೆಯಲ್ಲೇ ಧಗಧಗ
ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ದುರ್ಘಟನೆ
ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ
ದಕ್ಷಿಣ ಕನ್ನಡ: ಪ್ರವಾಸಕ್ಕೆಂದು ಹೊರಟ್ಟಿದ್ದ ಕಾರು ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದಿರೋ ಘಟನೆ ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ಸಂಭವಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮುರುಡೇಶ್ವರದಿಂದ ಗೋವಾಗೆ ತೆರಳುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಕಾರು ಧಗಧಗನೆ ಹೊತ್ತಿ ಉರಿದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಕಾರು ಸಂಪೂರ್ಣವಾಗಿ ಭಸ್ಮವಾಗಿದೆ. ಈ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಪ್ರವಾಸಕ್ಕೆಂದು ಹೊರಟ್ಟಿದ್ದ ಕಾರು ನಡು ರಸ್ತೆಯಲ್ಲೇ ಧಗಧಗ
ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ದುರ್ಘಟನೆ
ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ
ದಕ್ಷಿಣ ಕನ್ನಡ: ಪ್ರವಾಸಕ್ಕೆಂದು ಹೊರಟ್ಟಿದ್ದ ಕಾರು ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದಿರೋ ಘಟನೆ ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ಸಂಭವಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮುರುಡೇಶ್ವರದಿಂದ ಗೋವಾಗೆ ತೆರಳುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಕಾರು ಧಗಧಗನೆ ಹೊತ್ತಿ ಉರಿದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಕಾರು ಸಂಪೂರ್ಣವಾಗಿ ಭಸ್ಮವಾಗಿದೆ. ಈ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ