ಇಂದು ಚೆನ್ನೈಗೆ ತೆರಳಲಿರುವ ಮಾಜಿ ಸಿಎಂ ಹೆಚ್ಡಿಕೆ
ಹೃದಯ ಸಂಬಂಧಿ ಸಮಸ್ಯೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ಹೆಚ್.ಡಿ.ಕುಮಾರಸ್ವಾಮಿ
ಆರೋಗ್ಯ ದೃಷ್ಟಿಯಿಂದ ಇದೇ 21ರಂದು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲಿರುವ ಮಾಜಿ ಸಿಎಂ
ಬೆಂಗಳೂರು: ಒಂದೆಡೆ ಲೋಕಸಭಾ ಚುನಾವಣಾ ಕಾವು, ಮತ್ತೊಂದೆಡೆ ರಾಜಕೀಯ ಟೆನ್ಶನ್. ಇಸದರ ನಡುವೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಇಂದು ಚೆನ್ನೈ ತೆರಳುತ್ತಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಗೆ ಶಸ್ತ್ರಚಿಕಿತ್ಸೆಗೆ ಒಳಪಡಬೇಕಾಗಿರುವ ಹಿನ್ನೆಲೆಯಲ್ಲಿ ಚೆನ್ನೈಗೆ ಹೋಗುತ್ತಿದ್ದಾರೆ.
ಇಂದು ಬೆಳಗ್ಗೆ 10 ಗಂಟೆಗೆ ಹೆಚ್.ಡಿ.ಕುಮಾರಸ್ವಾಮಿ ಚೆನ್ನೈಗೆ ತೆರಳುತ್ತಿದ್ದು, ಅಲ್ಲಿ ಕೆಲವು ಪರೀಕ್ಷೆ ನಡೆಸಿದ ಬಳಿಕ ಇದೇ 21ರಂದು ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ. ಬಳಿಕ 24ರವರೆಗೆ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆದುಕೊಂಡು ರಾಜ್ಯಕ್ಕೆ ವಾಪಸ್ಸಾಗಲಿದ್ದಾರೆ.
ಸದ್ಯ ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಅತ್ತ ಮಗ ನಿಖಿಲ್ ಕುಮಾರಸ್ವಾಮಿ ಪ್ರಚಾರ ಕೈಗೊಂಡಿದ್ದಾರೆ. ಈ ಬಾರಿ ರಾಜ್ಯ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಜೆಡಿಎಸ್ ಸ್ಪರ್ಧಿಸುತ್ತಿದೆ. ಅತ್ತ ಹೆಚ್ಡಿಕೆ ಶಸ್ತ್ರಚಿಕಿತ್ಸೆಗೆ ಒಳಪಟ್ಟು ವಿಶ್ರಾಣತಿ ತೆಗೆದುಕೊಂಡು ಬಳಿಕ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಇಂದು ಚೆನ್ನೈಗೆ ತೆರಳಲಿರುವ ಮಾಜಿ ಸಿಎಂ ಹೆಚ್ಡಿಕೆ
ಹೃದಯ ಸಂಬಂಧಿ ಸಮಸ್ಯೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ಹೆಚ್.ಡಿ.ಕುಮಾರಸ್ವಾಮಿ
ಆರೋಗ್ಯ ದೃಷ್ಟಿಯಿಂದ ಇದೇ 21ರಂದು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲಿರುವ ಮಾಜಿ ಸಿಎಂ
ಬೆಂಗಳೂರು: ಒಂದೆಡೆ ಲೋಕಸಭಾ ಚುನಾವಣಾ ಕಾವು, ಮತ್ತೊಂದೆಡೆ ರಾಜಕೀಯ ಟೆನ್ಶನ್. ಇಸದರ ನಡುವೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಇಂದು ಚೆನ್ನೈ ತೆರಳುತ್ತಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಗೆ ಶಸ್ತ್ರಚಿಕಿತ್ಸೆಗೆ ಒಳಪಡಬೇಕಾಗಿರುವ ಹಿನ್ನೆಲೆಯಲ್ಲಿ ಚೆನ್ನೈಗೆ ಹೋಗುತ್ತಿದ್ದಾರೆ.
ಇಂದು ಬೆಳಗ್ಗೆ 10 ಗಂಟೆಗೆ ಹೆಚ್.ಡಿ.ಕುಮಾರಸ್ವಾಮಿ ಚೆನ್ನೈಗೆ ತೆರಳುತ್ತಿದ್ದು, ಅಲ್ಲಿ ಕೆಲವು ಪರೀಕ್ಷೆ ನಡೆಸಿದ ಬಳಿಕ ಇದೇ 21ರಂದು ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ. ಬಳಿಕ 24ರವರೆಗೆ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆದುಕೊಂಡು ರಾಜ್ಯಕ್ಕೆ ವಾಪಸ್ಸಾಗಲಿದ್ದಾರೆ.
ಸದ್ಯ ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಅತ್ತ ಮಗ ನಿಖಿಲ್ ಕುಮಾರಸ್ವಾಮಿ ಪ್ರಚಾರ ಕೈಗೊಂಡಿದ್ದಾರೆ. ಈ ಬಾರಿ ರಾಜ್ಯ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಜೆಡಿಎಸ್ ಸ್ಪರ್ಧಿಸುತ್ತಿದೆ. ಅತ್ತ ಹೆಚ್ಡಿಕೆ ಶಸ್ತ್ರಚಿಕಿತ್ಸೆಗೆ ಒಳಪಟ್ಟು ವಿಶ್ರಾಣತಿ ತೆಗೆದುಕೊಂಡು ಬಳಿಕ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ