Advertisment

Cauvery: ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ.. ಪುಣ್ಯ ಕ್ಷಣವನ್ನ ಕಣ್ತುಂಬಿಕೊಳ್ಳಲು ಸೇರಿರುವ ಸಹಸ್ರಾರು ಭಕ್ತಗಣ

author-image
AS Harshith
Updated On
Cauvery: ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ.. ಪುಣ್ಯ ಕ್ಷಣವನ್ನ ಕಣ್ತುಂಬಿಕೊಳ್ಳಲು ಸೇರಿರುವ ಸಹಸ್ರಾರು ಭಕ್ತಗಣ
Advertisment
  • ಇಂದು ಕರುನಾಡ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವ
  • ಒಂದು ತಿಂಗಳ ಕಾಲ ನಡೆಯುವ ಕಾವೇರಿ ತುಲಾ ಸಂಕ್ರಮಣ ಜಾತ್ರೆ
  • ಈ ಬಾರಿ ಕಲ್ಯಾಣಿಯಲ್ಲಿ ಪುಣ್ಯ ಸ್ನಾನಕ್ಕೆ ಅವಕಾಶ ಕಲ್ಪಿಸಲಾಗಿದೆಯಾ?

ಕರುನಾಡ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಅಕ್ಟೋಬರ್ 17ರ ಮುಂಜಾನೆ 7 ಗಂಟೆ 40 ನಿಮಿಷಕ್ಕೆ ತೀರ್ಥೋದ್ಭವ ಜರುಗಲಿದ್ದು, ಸಹಸ್ರಾರು ಭಕ್ತರು ಅ ಪುಣ್ಯ ಕ್ಷಣವನ್ನ ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ. ಇದರ ಅಂಗವಾಗಿ ಒಂದು ತಿಂಗಳ ಕಾಲ ನಡೆಯುವ ಕಾವೇರಿ ತುಲಾ ಸಂಕ್ರಮಣ ಜಾತ್ರೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದಿದೆ.

Advertisment

ಕೊಡಗಿನ ಕುಲದೇವತೆ ಕಾವೇರಿ. ಕನ್ನಡ ನಾಡಿನ ಜೀವನದಿ ಕಾವೇರಿ. ತಾಯಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಭರದಿಂದ ಸಾಗಿದ ಸಿದ್ಧತಾ ಕಾರ್ಯಗಳು. ನೂಕು ನುಗ್ಗಲು ತಡೆಯಲು ಬಿಗಿ ಬಂದೋಬಸ್ತ್. ಈ ಬಾರಿಯೂ ಕಲ್ಯಾಣಿಯಲ್ಲಿ ಪುಣ್ಯ ಸ್ನಾನಕ್ಕೆ ಅವಕಾಶ.

ದಕ್ಷಿಣ ಭಾರತದ ಗಂಗೆ ಅಂತಲೇ‌ ಪೂಜಿಸಲ್ಪಡುವ ಕನ್ನಡ ನಾಡಿನ ಜೀವ ನದಿ ಕಾವೇರಿ ತೀರ್ಥೋದ್ಭವಕ್ಕೆ ತಲಕಾವೇರಿ ಕ್ಷೇತ್ರದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ವರ್ಷಕ್ಕೊಮ್ಮೆ ಘಟಿಸುವ ಈ ವಿಸ್ಮಯವನ್ನ ಕಣ್ತುಂಬಿಕೊಳ್ಳಲು ರಾಜ್ಯ ಹಾಗೂ ಹೊರ ರಾಜ್ಯದಿಂದ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸಲಿದ್ದು ಇದಕ್ಕಾಗಿ ತಲಕಾವೇರಿ ಹಾಗೂ ತ್ರಿವೇಣಿ ಸಂಗಮ ಭಾಗಮಂಡಲ ಸಕಲ ರೀತಿಯಲ್ಲಿ ಸಿದ್ಧತೆ ನಡೆಯುತ್ತಿದೆ.

publive-image

ಇದನ್ನೂ ಓದಿ: ಕಾನೂನು ಕುರುಡಲ್ಲ; ನ್ಯಾಯದೇವತೆಯ ಕಪ್ಪುಪಟ್ಟಿ ತೆಗೆಸಿದ ಚೀಫ್​ ಜಸ್ಟೀಸ್​ ಆಫ್​ ಇಂಡಿಯಾ! 

Advertisment

ಹೆಚ್ಚು ಜನರು ಬರುತ್ತಿರುವ ಕಾರಣ ನೂಕು‌ ನುಗ್ಗಲು ಉಂಟಾಗದಂತೆ ಬ್ಯಾರಿಕೇಡ್ ಹಾಗೂ ಸಿಸಿ ಕ್ಯಾಮರಾಗಳ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಭಾಗಂಡಲದಿಂದ ತಲಕಾವೇರಿಗೆ ಆಗಮಿಸುವ ಭಕ್ತಾಧಿಗಳಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ರಾಜ್ಯ ಹೊರ ರಾಜ್ಯದಿಂದ ಹೆಚ್ಚಾಗಿ ಭಕ್ತಾದಿಗಳು ಆಗಮಿಸುವ ಹಿನ್ನೆಲೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ಶತ್ರುಗಳ ಕಾಟ; ಕೌಟುಂಬಿಕ ಸಮಸ್ಯೆ; ಮನೆವರಿಗೆಲ್ಲಾ ಅವಮಾನ; ಇಲ್ಲಿದೆ ಇಂದಿನ ಭವಿಷ್ಯ

publive-image

ಇಂದು ಮುಂಜಾನೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಪವಿತ್ರ ತೀರ್ಥೋಧ್ಭವ ಜರುಗಲಿದ್ದು, 17ರ ಮುಂಜಾನೆಯಿಂದಲೇ ಭಾಗಮಂಡಲ ಹಾಗೂ ತಲಕಾವೇರಿ ಕ್ಷೇತ್ರದಲ್ಲಿ‌ ಪೂಜಾ ಕೈಂಕರ್ಯಗಳು ನಡೆಯಲಿದೆ. ಅರ್ಚಕರ ತಂಡ ಕೂಡ ಕಾವೇರಿ ಮಾತೆಯ ಸ್ವಾಗತಕ್ಕೆ ಸಜ್ಜಾಗಿದೆ. ಮುಂಜಾನೆಯಿಂದಲೆ ವಿವಿಧ ಪೂಜಾ ಕೈಂಕರ್ಯಗಳು ಆರಂಭವಾಗಲಿದೆ. ಮಾತೆಯ ದರ್ಶನಕ್ಕೆ ಸಹಸ್ರ ಸಹಸ್ರ ಭಕ್ತರು ಲಗ್ಗೆಯಿಡುತ್ತಿದ್ದು, ಯಾವುದೇ ರೀತಿಯಲ್ಲಿ ನೂಕು ನುಗ್ಗಲು ಉಂಟಾಗದಂತೆ ಏಕಮುಖ ಸಂಚಾರದಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ತೀರ್ಥ ಸ್ವರೂಪಿಣಿಯಾದ ಕಾವೇರಿ ಮಾತೆಯ ದರ್ಶನಕ್ಕಾಗಿ ಭಕ್ತರು ಕಾಯುತ್ತಿದ್ದು, ಒಂದು ತಿಂಗಳ ಜಾತ್ರೆಗೆ ಜಿಲ್ಲಾಡಳಿತ ಸಕಲ ವ್ಯವಸ್ಥೆ ಮಾಡಿಕೊಂಡಿದೆ.

Advertisment

ಒಟ್ಟಿನಲ್ಲಿ, ಕೊಡಗಿನ ಕುಲದೇವತೆ, ತಾಯಿ ಕಾವೇರಿ ತೀರ್ಥ ರೂಪಿಣಿಯಾಗಿ ನಾಡಿನ ಜನತೆಗೆ ದರ್ಶನ ನೀಡಲು ಸಜ್ಜಾಗಿದ್ದಾಳೆ. ಈ ವಿಸ್ಮಯವನ್ನ ಕಣ್ತುಂಬಿಕೊಳ್ಳಲು ಭಕ್ತಗಣ ಕಾತರರಾಗಿ ಕಾಯುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment