ಆಂಧ್ರದ ಡಿಸಿಎಂ ಆಗಿ ಉತ್ತಮ ಕೆಲಸ ಮಾಡುತ್ತಿರೋ ಪವನ್ ಕಲ್ಯಾಣ್
ಪೀಠಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರೋ ಸ್ಟಾರ್ ನಟ ಪವನ್
ಜನಸೇನಾ ಮುಖ್ಯಸ್ಥ ನಟ ಪವನ್ ಕಲ್ಯಾಣ್ ಹತ್ಯೆಗೆ ಹಂತಕರಿಂದ ಸ್ಕೆಚ್!
ಇತ್ತೀಚೆಗೆ ನಡೆದ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಜಗನ್ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ಸನ್ನು ಸೋಲಿಸಿ ಜನಸೇನಾ, ಟಿಡಿಪಿ ಮೈತ್ರಿಕೂಟ ಅಧಿಕಾರಕ್ಕೆ ಬಂದಿದೆ. ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಅವರು ಪೀಠಪುರಂ ವಿಧಾನಸಭಾ ಕ್ಷೇತ್ರದಿಂದ ಜನಸೇನಾ ಪಾರ್ಟಿಯಿಂದ ಗೆದ್ದು ಈಗ ಡಿಸಿಎಂ ಆಗಿದ್ದಾರೆ. ಸದ್ಯ ಡಿಸಿಎಂ ಆಗಿ ಉತ್ತಮ ಕೆಲಸ ಮಾಡುತ್ತಿರೋ ಜನಸೇನಾ ಮುಖ್ಯಸ್ಥ ನಟ ಪವನ್ ಕಲ್ಯಾಣ್ ಅವರಿಗೆ ಕೇಂದ್ರ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿವೆ. ಪವನ್ ಕಲ್ಯಾಣ್ ಹತ್ಯೆಗೆ ಸ್ಕೆಚ್ ಆಗಿದ್ದು, ಇವರ ಜೀವಕ್ಕೆ ಅಪಾಯವಿದೆ ಎಂದು ತಿಳಿಸಿವೆ.
ಡಿಸಿಎಂ ಪವನ್ ಕಲ್ಯಾಣ್ ಹತ್ಯೆಗೆ ಸಂಚು ನಡೆಸಲಾಗಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಹಾಗಾಗಿ ಪವನ್ ಕಲ್ಯಾಣ್ ಅಭಿಮಾನಿಗಳು ಭಾರೀ ಆತಂಕಕ್ಕೆ ಒಳಗಾಗಿದ್ದಾರೆ. ಅಷ್ಟೇ ಅಲ್ಲದೆ ಕೇಂದ್ರದಿಂದ ಪವನ್ ಕಲ್ಯಾಣ್ ಅವರಿಗೆ ಸ್ಪೆಷಲ್ ಸೆಕ್ಯೂರಿಟಿ ಕೂಡ ನೀಡಲಾಗಿದೆ ಎಂದು ವರದಿಯಾಗಿದೆ. ಈ ಸುದ್ದಿ ಇಡೀ ಆಂಧ್ರವನ್ನೇ ಬೆಚ್ಚಿಬೀಳಿಸಿದೆ.
ಕೇಂದ್ರ ಗುಪ್ತಚರ ಸಂಸ್ಥೆ ಕೊಟ್ಟ ಎಚ್ಚರಿಕೆಯೇನು?
ಪವನ್ ಕಲ್ಯಾಣ್ ಅವರ ಹತ್ಯೆಗೆ ಸಂಚು ರೂಪಿಸಲಾಗಿದೆ. ಈ ಬಗ್ಗೆ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಕೇಂದ್ರ ಗುಪ್ತಚರ ದಳದ ಟ್ರ್ಯಾಕಿಂಗ್ ವೇಳೆ ಪವನ್ ಜೀವಕ್ಕೆ ಅಪಾಯ ಇರುವುದು ಕಂಡು ಬಂದಿದೆ. ಹಾಗಾಗಿ ಪವನ್ ಕಲ್ಯಾಣ್ ಎಚ್ಚರಿಕೆಯಿಂದ ಇರಬೇಕು ಎಂದು ಕೇಂದ್ರ ಗುಪ್ತಚರ ಮೂಲಗಳು ಸೂಚಿಸಿವೆ.
ಇದನ್ನೂ ಓದಿ: Budget2024: ಬಜೆಟ್ ಬಳಿಕ ಯಾವುದರ ಬೆಲೆ ಏರಿಕೆ? ಯಾವುದೆಲ್ಲಾ ಇಳಿಕೆ? ಇಲ್ಲಿದೆ ಮಾಹಿತಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಆಂಧ್ರದ ಡಿಸಿಎಂ ಆಗಿ ಉತ್ತಮ ಕೆಲಸ ಮಾಡುತ್ತಿರೋ ಪವನ್ ಕಲ್ಯಾಣ್
ಪೀಠಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರೋ ಸ್ಟಾರ್ ನಟ ಪವನ್
ಜನಸೇನಾ ಮುಖ್ಯಸ್ಥ ನಟ ಪವನ್ ಕಲ್ಯಾಣ್ ಹತ್ಯೆಗೆ ಹಂತಕರಿಂದ ಸ್ಕೆಚ್!
ಇತ್ತೀಚೆಗೆ ನಡೆದ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಜಗನ್ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ಸನ್ನು ಸೋಲಿಸಿ ಜನಸೇನಾ, ಟಿಡಿಪಿ ಮೈತ್ರಿಕೂಟ ಅಧಿಕಾರಕ್ಕೆ ಬಂದಿದೆ. ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಅವರು ಪೀಠಪುರಂ ವಿಧಾನಸಭಾ ಕ್ಷೇತ್ರದಿಂದ ಜನಸೇನಾ ಪಾರ್ಟಿಯಿಂದ ಗೆದ್ದು ಈಗ ಡಿಸಿಎಂ ಆಗಿದ್ದಾರೆ. ಸದ್ಯ ಡಿಸಿಎಂ ಆಗಿ ಉತ್ತಮ ಕೆಲಸ ಮಾಡುತ್ತಿರೋ ಜನಸೇನಾ ಮುಖ್ಯಸ್ಥ ನಟ ಪವನ್ ಕಲ್ಯಾಣ್ ಅವರಿಗೆ ಕೇಂದ್ರ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿವೆ. ಪವನ್ ಕಲ್ಯಾಣ್ ಹತ್ಯೆಗೆ ಸ್ಕೆಚ್ ಆಗಿದ್ದು, ಇವರ ಜೀವಕ್ಕೆ ಅಪಾಯವಿದೆ ಎಂದು ತಿಳಿಸಿವೆ.
ಡಿಸಿಎಂ ಪವನ್ ಕಲ್ಯಾಣ್ ಹತ್ಯೆಗೆ ಸಂಚು ನಡೆಸಲಾಗಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಹಾಗಾಗಿ ಪವನ್ ಕಲ್ಯಾಣ್ ಅಭಿಮಾನಿಗಳು ಭಾರೀ ಆತಂಕಕ್ಕೆ ಒಳಗಾಗಿದ್ದಾರೆ. ಅಷ್ಟೇ ಅಲ್ಲದೆ ಕೇಂದ್ರದಿಂದ ಪವನ್ ಕಲ್ಯಾಣ್ ಅವರಿಗೆ ಸ್ಪೆಷಲ್ ಸೆಕ್ಯೂರಿಟಿ ಕೂಡ ನೀಡಲಾಗಿದೆ ಎಂದು ವರದಿಯಾಗಿದೆ. ಈ ಸುದ್ದಿ ಇಡೀ ಆಂಧ್ರವನ್ನೇ ಬೆಚ್ಚಿಬೀಳಿಸಿದೆ.
ಕೇಂದ್ರ ಗುಪ್ತಚರ ಸಂಸ್ಥೆ ಕೊಟ್ಟ ಎಚ್ಚರಿಕೆಯೇನು?
ಪವನ್ ಕಲ್ಯಾಣ್ ಅವರ ಹತ್ಯೆಗೆ ಸಂಚು ರೂಪಿಸಲಾಗಿದೆ. ಈ ಬಗ್ಗೆ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಕೇಂದ್ರ ಗುಪ್ತಚರ ದಳದ ಟ್ರ್ಯಾಕಿಂಗ್ ವೇಳೆ ಪವನ್ ಜೀವಕ್ಕೆ ಅಪಾಯ ಇರುವುದು ಕಂಡು ಬಂದಿದೆ. ಹಾಗಾಗಿ ಪವನ್ ಕಲ್ಯಾಣ್ ಎಚ್ಚರಿಕೆಯಿಂದ ಇರಬೇಕು ಎಂದು ಕೇಂದ್ರ ಗುಪ್ತಚರ ಮೂಲಗಳು ಸೂಚಿಸಿವೆ.
ಇದನ್ನೂ ಓದಿ: Budget2024: ಬಜೆಟ್ ಬಳಿಕ ಯಾವುದರ ಬೆಲೆ ಏರಿಕೆ? ಯಾವುದೆಲ್ಲಾ ಇಳಿಕೆ? ಇಲ್ಲಿದೆ ಮಾಹಿತಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ