2014 ಲೋಕಸಭಾ ಚುನಾವಣೆ; ಬಿಜೆಪಿ ಪ್ರಣಾಳಿಕೆಯಲ್ಲಿನ ಅಂಶ
ಒನ್ ನೇಷನ್, ಒನ್ ಎಲೆಕ್ಷನ್ನಿಂದ ಆಗುವ ಉಪಯೋಗಗಳು ಏನು?
ದೇಶದಲ್ಲಿ ಒಂದೇ ಬಾರಿ ಲೋಕಸಭೆ, ವಿಧಾನಸಭೆ ಎಲೆಕ್ಷನ್ ಸಾಧ್ಯನಾ?
ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆಯ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚನೆ ಮಾಡಿದೆ.
ಪ್ರಧಾನಿ ಮೋದಿ ಸರ್ಕಾರ ನಿನ್ನೆಯಷ್ಟೇ ದಿಢೀರನೇ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದೆ. ಸೆಪ್ಟೆಂಬರ್ 18 ರಿಂದ 22ರವರೆಗೆ ನಡೆಯಲಿರುವ ವಿಶೇಷ ಅಧಿವೇಶನದಲ್ಲಿ ಈ ಒನ್ ನೇಷನ್ ಒನ್ ಎಲೆಕ್ಷನ್ನ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡನೆ ಮಾಡುವ ಸಾಧ್ಯತೆ ಇದೆ. ಆದ್ರೆ ವಿರೋಧ ಪಕ್ಷಗಳಲ್ಲಿ ಈ ಮಸೂದೆ ಬಗ್ಗೆ ಸಹಮತವಿಲ್ಲ. ಬೇರೆ ಬೇರೆ ಸಮಯಗಳಲ್ಲಿ ರಾಜ್ಯಗಳ ವಿಧಾನಸಭೆ ಮುಗಿಯುತ್ತವೆ. ಹೀಗಾಗಿ ಇದು ಕಾರ್ಯಸಾಧುವಲ್ಲ ಎಂದು ವಿಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿವೆ.
ಒನ್ ನೇಷನ್, ಒನ್ ಎಲೆಕ್ಷನ್ ಎಂದರೆ ದೇಶಾದ್ಯಂತ ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವುದಾಗಿದೆ. ಈ ಬಗ್ಗೆ ಪ್ರಧಾನಿ ಮೋದಿಯವರು ಹಲವಾರು ಸಂದರ್ಭಗಳಲ್ಲಿ ಈ ವಿಷಯವನ್ನು ಪ್ರಸ್ತಾಪ ಮಾಡಿದ್ದಾರೆ. ಅಲ್ಲದೇ 2014 ರ ಲೋಕಸಭೆ ಚುನಾವಣೆ ವೇಳೆ ಬಿಜೆಪಿಯ ಪ್ರಣಾಳಿಕೆಯಲ್ಲಿಯೂ ಈ ಅಂಶವಿತ್ತು. ಒನ್ ನೇಷನ್, ಒನ್ ಎಲೆಕ್ಷನ್ನಿಂದ ಉಪಯೋಗ ಜಾಸ್ತಿ ಇದೆ ಎನ್ನಲಾಗಿದೆ. ಇದರಿಂದ ಸಮಯ, ಖರ್ಚುಗಳನ್ನು ಕಡಿಮೆ ಮಾಡಬಹುದು. ದುಂದುವೆಚ್ಚಗಳನ್ನು ತಡೆಯಬಹದು ಎಂದು ಈಗಾಗಲೇ ಸಾಕಷ್ಟು ಬಾರಿ ಕೇಂದ್ರ ಸರ್ಕಾರ ಈ ಬಗ್ಗೆ ಹೇಳಿದೆ.
ಇನ್ನು ಒನ್ ನೇಷನ್, ಒನ್ ಎಲೆಕ್ಷನ್ ಸಮಿತಿಗೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ರನ್ನ ಅಧ್ಯಕ್ಷರನ್ನಾಗಿ ನೇಮಕ ಮಾಡುತ್ತಿದ್ದಂತೆ ಅವರ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ ನೀಡಿ ಹೂಗುಚ್ಚ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
2014 ಲೋಕಸಭಾ ಚುನಾವಣೆ; ಬಿಜೆಪಿ ಪ್ರಣಾಳಿಕೆಯಲ್ಲಿನ ಅಂಶ
ಒನ್ ನೇಷನ್, ಒನ್ ಎಲೆಕ್ಷನ್ನಿಂದ ಆಗುವ ಉಪಯೋಗಗಳು ಏನು?
ದೇಶದಲ್ಲಿ ಒಂದೇ ಬಾರಿ ಲೋಕಸಭೆ, ವಿಧಾನಸಭೆ ಎಲೆಕ್ಷನ್ ಸಾಧ್ಯನಾ?
ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆಯ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚನೆ ಮಾಡಿದೆ.
ಪ್ರಧಾನಿ ಮೋದಿ ಸರ್ಕಾರ ನಿನ್ನೆಯಷ್ಟೇ ದಿಢೀರನೇ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದೆ. ಸೆಪ್ಟೆಂಬರ್ 18 ರಿಂದ 22ರವರೆಗೆ ನಡೆಯಲಿರುವ ವಿಶೇಷ ಅಧಿವೇಶನದಲ್ಲಿ ಈ ಒನ್ ನೇಷನ್ ಒನ್ ಎಲೆಕ್ಷನ್ನ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡನೆ ಮಾಡುವ ಸಾಧ್ಯತೆ ಇದೆ. ಆದ್ರೆ ವಿರೋಧ ಪಕ್ಷಗಳಲ್ಲಿ ಈ ಮಸೂದೆ ಬಗ್ಗೆ ಸಹಮತವಿಲ್ಲ. ಬೇರೆ ಬೇರೆ ಸಮಯಗಳಲ್ಲಿ ರಾಜ್ಯಗಳ ವಿಧಾನಸಭೆ ಮುಗಿಯುತ್ತವೆ. ಹೀಗಾಗಿ ಇದು ಕಾರ್ಯಸಾಧುವಲ್ಲ ಎಂದು ವಿಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿವೆ.
ಒನ್ ನೇಷನ್, ಒನ್ ಎಲೆಕ್ಷನ್ ಎಂದರೆ ದೇಶಾದ್ಯಂತ ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವುದಾಗಿದೆ. ಈ ಬಗ್ಗೆ ಪ್ರಧಾನಿ ಮೋದಿಯವರು ಹಲವಾರು ಸಂದರ್ಭಗಳಲ್ಲಿ ಈ ವಿಷಯವನ್ನು ಪ್ರಸ್ತಾಪ ಮಾಡಿದ್ದಾರೆ. ಅಲ್ಲದೇ 2014 ರ ಲೋಕಸಭೆ ಚುನಾವಣೆ ವೇಳೆ ಬಿಜೆಪಿಯ ಪ್ರಣಾಳಿಕೆಯಲ್ಲಿಯೂ ಈ ಅಂಶವಿತ್ತು. ಒನ್ ನೇಷನ್, ಒನ್ ಎಲೆಕ್ಷನ್ನಿಂದ ಉಪಯೋಗ ಜಾಸ್ತಿ ಇದೆ ಎನ್ನಲಾಗಿದೆ. ಇದರಿಂದ ಸಮಯ, ಖರ್ಚುಗಳನ್ನು ಕಡಿಮೆ ಮಾಡಬಹುದು. ದುಂದುವೆಚ್ಚಗಳನ್ನು ತಡೆಯಬಹದು ಎಂದು ಈಗಾಗಲೇ ಸಾಕಷ್ಟು ಬಾರಿ ಕೇಂದ್ರ ಸರ್ಕಾರ ಈ ಬಗ್ಗೆ ಹೇಳಿದೆ.
ಇನ್ನು ಒನ್ ನೇಷನ್, ಒನ್ ಎಲೆಕ್ಷನ್ ಸಮಿತಿಗೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ರನ್ನ ಅಧ್ಯಕ್ಷರನ್ನಾಗಿ ನೇಮಕ ಮಾಡುತ್ತಿದ್ದಂತೆ ಅವರ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ ನೀಡಿ ಹೂಗುಚ್ಚ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ