/newsfirstlive-kannada/media/post_attachments/wp-content/uploads/2024/09/Chaithra-kundapura2.jpg)
ಉದ್ಯಮಿ ಒಬ್ಬರಿಗೆ 7 ಕೋಟಿ ಪಂಗನಾಮ ಹಾಕಿದ್ದ ಆರೋಪದಲ್ಲಿ ಜೈಲು ಸೇರಿದ್ದವರು ಚೈತ್ರಾ ಕುಂದಾಪುರ. ಜೈಲಿನಿಂದ ರಿಲೀಸ್​ ಆದ ಮೇಲೆ ಚೈತ್ರಾ ಕುಂದಾಪುರ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಈಗ ಅಚ್ಚರಿ ಎನ್ನುವಂತೆ ದಿಢೀರ್​​ ಬಿಗ್​ಬಾಸ್​ ಮನೆಗೆ ಎಂಟ್ರಿ ನೀಡಿದ್ದಾರೆ.
ಕಲರ್ಸ್ ಕನ್ನಡ ವಾಹಿನಿ ಚೈತ್ರಾ ಕುಂದಾಪುರ ಬಗ್ಗೆ ಪ್ರೋಮೋ ಒಂದು ರಿಲೀಸ್​ ಮಾಡಿದೆ. ಕಲರ್ಸ್​​ ಕನ್ನಡ ಶೇರ್​​ ಮಾಡಿರೋ ಪ್ರೋಮೋದಲ್ಲಿ ಚೈತ್ರಾ ನೋಡುವಷ್ಟು ನೋಡಿದ್ದೇವೆ. ಸಹಿಸುವಷ್ಟು ಸಹಿಸಿದ್ದೇವೆ, ಇದು ನಿಮಗೆ ಕೊನೆ ಎಚ್ಚರಿಕೆ ಎಂದು ವಾರ್ನಿಂಗ್​ ಕೊಟ್ಟಿದ್ದಾರೆ.
ನಂತರ ಮಾತಾಡಿರೋ ಚೈತ್ರಾ ನಾನು ಸಾಮಾನ್ಯ ಹಾಲು ಮಾರುವನ ಮಗಳು. ಹಿಂದುತ್ವ ನನ್ನ ರಕ್ತದಲ್ಲೇ ಇದೆ. ನನ್ನನ್ನ ಗಟ್ಟಿ ಮಾಡಿರೋದೇ ವಿರೋಧಿಗಳು. ನಾನು ಅರೆಸ್ಟ್ ಆಗಿದ್ದಾಗ ನನ್ನನ್ನ ನೋಡಲು ಉತ್ತರ ಕರ್ನಾಟಕದಿಂದ ಜನ ಬಂದಿದ್ದರು. ಅವರಿಗೆಲ್ಲಾ ನಾನು ಚಿರಋಣಿ ಎಂದರು.
ಕೇಸ್, ಕೋರ್ಟ್, ಕಾನೂನು ಎಲ್ಲವನ್ನೂ ಎದುರಿಸುತ್ತಿದ್ದೇನೆ. ಇವೆಲ್ಲವೂ ನನ್ನನ್ನು ಕುಗ್ಗಿಸುವುದಿಲ್ಲ. ನಾನು ಜೈಲಿನಿಂದ ಹೊರ ಬಂದಾಗಲೇ ಬಿಗ್​ಬಾಸ್​ ಬಗ್ಗೆ ಕೇಳಿದ್ದೆ. ನನಗೆ ಬಿಗ್​ಬಾಸ್ ಟೀಮ್​ನಿಂದ ಕಾಲ್​ ಬಂದಾಗ ಗೊಂಗಲದಲ್ಲಿದ್ದೆ. ಬಳಿಕ ಅವರು ಒಪ್ಪಿಸಿದ್ದು ಖುಷಿಯಾಯ್ತು ಎಂದರು.
ಯಾರು ಚೈತ್ರಾ ಕುಂದಾಪುರ?
ಚೈತ್ರಾ ಕುಂದಾಪುರ ಪ್ರಖರ ಭಾಷಣಗಾರ್ತಿ. ಇವರು ಉಡುಪಿ ಜಿಲ್ಲೆ ಕುಂದಾಪುರದವರು. ಕುಂದಾಪುರದಲ್ಲಿ ಪಿಯುಸಿವರೆಗೆ ವ್ಯಾಸಂಗ ಮಾಡಿದ ಚೈತ್ರಾ, ಕೊಣಾಜೆಯಲ್ಲಿ ಪದವಿ ಪೂರ್ಣಗೊಳಿಸಿದರು. ಮಂಗಳೂರು ವಿಶ್ವ ವಿದ್ಯಾಲಯದ ಪದವೀಧರೆಯಾದ ಚೈತ್ರಾ ಕುಂದಾಪುರ, ಕೆಲ ಕಾಲ ಬೆಂಗಳೂರಿನಲ್ಲಿ ಖಾಸಗಿ ವಾಹಿನಿಯಲ್ಲಿ ಕೆಲಸ ಮಾಡಿದ್ದರು.​ ಉಡುಪಿಯ ಸ್ಪಂದನ ಟಿವಿಯ ನಿರೂಪಕಿಯಾಗಿದ್ದ ಇವರು ಉದಯವಾಣಿ ಪತ್ರಿಕೆಯಲ್ಲಿ ಉಪಸಂಪಾದಕಿ ಆಗಿದ್ದರು. ಕಾಲೇಜು ದಿನಗಳಿಂದಲೇ ಎಬಿವಿಪಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಪತ್ರಕರ್ತೆಯಾಗಿ, ನಿರೂಪಕಿಯಾಗಿ ಭಾಷಣಕಾರರಾಗಿ ಗಮನ ಸೆಳೆದಿರೋ ಇವರು ಪ್ರೇಮ ಪಾಶ ಅನ್ನೋ ಚೊಚ್ಚಲ ಕೃತಿ ಬರೆದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us