newsfirstkannada.com

ಸ್ವಾಮೀಜಿ ಬಂಧನವಾದ್ರೆ ದೊಡ್ಡ-ದೊಡ್ಡವರ ಹೆಸರು ಬಹಿರಂಗ ಆಗಲಿದೆ- ಚೈತ್ರಾ ಕುಂದಾಪುರ ಸ್ಫೋಟಕ ಹೇಳಿಕೆ

Share :

14-09-2023

    ಸಿಸಿಬಿ ಅಧಿಕಾರಿಗಳಿಂದ ಇವತ್ತೂ ಕೂಡ ವಿಚಾರಣೆ

    ಕಚೇರಿಗೆ ಕರೆ ತರುವ ವೇಳೆ ಮಾಧ್ಯಮಗಳಿಗೆ ಚೈತ್ರಾ ಹೇಳಿಕೆ

    ಪ್ರಕರಣದಲ್ಲಿ ದೊಡ್ಡವರೂ ಇದ್ದಾರೆ ಎಂಬ ಶಂಕೆಗೆ ಮತ್ತಷ್ಟು ಪುಷ್ಟಿ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ವೇಳೆ ಉದ್ಯಮಿಯೊಬ್ಬರಿಗೆ ಟಿಕೆಟ್​ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದಾರೆ ಎಂಬ ಗಂಭೀರ ಆರೋಪ ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ಧ ಕೇಳಿ ಬಂದಿದೆ.

ಇದೇ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಅಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ ಇಂದು ಕಚೇರಿಗೆ ಕರೆದುಕೊಂಡು ಬಂದಿದ್ದಾರೆ. ಕಚೇರಿ ತಲುಪುವ ವೇಳೆ ಕಾರಿನಿಂದ ಇಳಿಯುವಾಗ, ಮಾಧ್ಯಮಗಳಿಗೆ ಹೇಳಿಕೆ ನೀಡಿದರು. ಈ ಪ್ರಕರಣದಲ್ಲಿ ಸ್ವಾಮೀಜಿ ಒಬ್ಬರಿದ್ದಾರೆ. ಅವರ ಬಂಧನವಾದ ಮೇಲೆ ಎಲ್ಲಾ ಸತ್ಯ ಹೊರಗಡೆ ಬರುತ್ತದೆ. ದೊಡ್ಡ-ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆ. ಇಂದಿರಾ ಕ್ಯಾಂಟೀನ್ ಬಿಲ್​ಗಾಗಿ ಈ ರೀತಿ ಷಡ್ಯಂತ್ರ ಮಾಡಿದ್ದಾರೆ ಎಂದು ಚೈತ್ರಾ ಕುಂದಾಪುರ ಆರೋಪಿಸಿದ್ದಾರೆ.

ಗೋವಿಂದ ಬಾಬು ಪೂಜಾರಿ ಮೇಲೆ ಚೈತ್ರಾ ಆರೋಪಿಸಿದ್ದಾರೆ. ಗೋವಿಂದ ಬಾಬು 2017 ರಿಂದ ಇಂದಿರಾ ಕ್ಯಾಂಟೀನ್​ ನಡೆಸುತ್ತಿದ್ದಾರೆ. ಸುಮಾರು 98 ಇಂದಿರಾ ಕ್ಯಾಂಟೀನ್​ಗಳನ್ನು ಗುತ್ತಿಗೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸ್ವಾಮೀಜಿ ಬಂಧನವಾದ್ರೆ ದೊಡ್ಡ-ದೊಡ್ಡವರ ಹೆಸರು ಬಹಿರಂಗ ಆಗಲಿದೆ- ಚೈತ್ರಾ ಕುಂದಾಪುರ ಸ್ಫೋಟಕ ಹೇಳಿಕೆ

https://newsfirstlive.com/wp-content/uploads/2023/09/CHAITRA.jpg

    ಸಿಸಿಬಿ ಅಧಿಕಾರಿಗಳಿಂದ ಇವತ್ತೂ ಕೂಡ ವಿಚಾರಣೆ

    ಕಚೇರಿಗೆ ಕರೆ ತರುವ ವೇಳೆ ಮಾಧ್ಯಮಗಳಿಗೆ ಚೈತ್ರಾ ಹೇಳಿಕೆ

    ಪ್ರಕರಣದಲ್ಲಿ ದೊಡ್ಡವರೂ ಇದ್ದಾರೆ ಎಂಬ ಶಂಕೆಗೆ ಮತ್ತಷ್ಟು ಪುಷ್ಟಿ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ವೇಳೆ ಉದ್ಯಮಿಯೊಬ್ಬರಿಗೆ ಟಿಕೆಟ್​ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದಾರೆ ಎಂಬ ಗಂಭೀರ ಆರೋಪ ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ಧ ಕೇಳಿ ಬಂದಿದೆ.

ಇದೇ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಅಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ ಇಂದು ಕಚೇರಿಗೆ ಕರೆದುಕೊಂಡು ಬಂದಿದ್ದಾರೆ. ಕಚೇರಿ ತಲುಪುವ ವೇಳೆ ಕಾರಿನಿಂದ ಇಳಿಯುವಾಗ, ಮಾಧ್ಯಮಗಳಿಗೆ ಹೇಳಿಕೆ ನೀಡಿದರು. ಈ ಪ್ರಕರಣದಲ್ಲಿ ಸ್ವಾಮೀಜಿ ಒಬ್ಬರಿದ್ದಾರೆ. ಅವರ ಬಂಧನವಾದ ಮೇಲೆ ಎಲ್ಲಾ ಸತ್ಯ ಹೊರಗಡೆ ಬರುತ್ತದೆ. ದೊಡ್ಡ-ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆ. ಇಂದಿರಾ ಕ್ಯಾಂಟೀನ್ ಬಿಲ್​ಗಾಗಿ ಈ ರೀತಿ ಷಡ್ಯಂತ್ರ ಮಾಡಿದ್ದಾರೆ ಎಂದು ಚೈತ್ರಾ ಕುಂದಾಪುರ ಆರೋಪಿಸಿದ್ದಾರೆ.

ಗೋವಿಂದ ಬಾಬು ಪೂಜಾರಿ ಮೇಲೆ ಚೈತ್ರಾ ಆರೋಪಿಸಿದ್ದಾರೆ. ಗೋವಿಂದ ಬಾಬು 2017 ರಿಂದ ಇಂದಿರಾ ಕ್ಯಾಂಟೀನ್​ ನಡೆಸುತ್ತಿದ್ದಾರೆ. ಸುಮಾರು 98 ಇಂದಿರಾ ಕ್ಯಾಂಟೀನ್​ಗಳನ್ನು ಗುತ್ತಿಗೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More