/newsfirstlive-kannada/media/post_attachments/wp-content/uploads/2025/06/CMR_5_TIGER_NEW_1.jpg)
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ ಮಗನನ್ನು ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು ಅಜ್ಞಾತ ಸ್ಥಳದಲ್ಲಿಟ್ಟು ವಿಚಾರಣೆ ನಡೆಸುತ್ತಿದ್ದಾರೆ.
ಶಿವಣ್ಣ ಹಾಗೂ ಇವರ ಮಗ ಮಾದ ಈ ಇಬ್ಬರು ಸದ್ಯ ಅರಣ್ಯ ಅಧಿಕಾರಿಗಳ ವಶದಲ್ಲಿದ್ದಾರೆ. ತಾಯಿ ಹುಲಿ ಹಾಗೂ 4 ಮರಿಗಳು ಜೀವ ಕಳೆದುಕೊಂಡ ಕೇಸ್ಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಮಂದಿಯನ್ನು ತನಿಖಾ ತಂಡ ವಿಚಾರಣೆಗೆ ಒಳಪಡಿಸಿತ್ತು. ಇದರಲ್ಲಿ 7 ಜನರ ಹೆಸರನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿತ್ತು. ಈ ವೇಳೆ ಹುಲಿಗಳು ಜೀವ ಕಳೆದುಕೊಂಡ ಜಾಗದಲ್ಲಿ ಪತ್ತೆ ಆಗಿದ್ದ ಹಸುವಿನ ಮಾಲೀಕ ಪತ್ತೆ ಆಗಿದ್ದಾರೆ.
ಇದನ್ನೂ ಓದಿ:ಚಿನ್ನ ಖರೀದಿ ಮಾಡುವವರಿಗೆ ಗುಡ್ನ್ಯೂಸ್.. ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ!
ಶಿವಣ್ಣ ಎಂಬಾತನಿಗೆ ಹಸು ಸೇರಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಶಿವಣ್ಣ ಹಾಗೂ ಇವರ ಪುತ್ರ ಮಾದನನ್ನ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ನಿನ್ನೆಯೇ ಇಬ್ಬರನ್ನೂ ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿಟ್ಟು ವಿಚಾರಣೆ ನಡೆಸಲಾಗುತ್ತಿದೆ. ಮಗ ಮಾದ ವಿಷ ಇಟ್ಟಿರುವ ಕುರಿತು ಶಂಕೆ ವ್ಯಕ್ತಪಡಿಸಲಾಗಿದೆ. ಆದರೆ ನಿಖರವಾಗಿ ತಿಳಿದಿಲ್ಲ.
ಇದನ್ನೂ ಓದಿ: ಚಾಮರಾಜನಗರದಲ್ಲಿ 5 ಹುಲಿಗಳು ಉಸಿರು ಚೆಲ್ಲಿದ ಬೆನ್ನಲ್ಲೇ ಕಣ್ಮುಚ್ಚಿದ ಮತ್ತೊಂದು ಹುಲಿ
ಅನುಮಾನ ಇರುವುದರಿಂದ ಅಪ್ಪ-ಮಗನನ್ನ ವಶಕ್ಕೆ ಪಡೆದು ತೀವ್ರ ವಿಚಾರಣೆ ಮಾಡಲಾಗುತ್ತಿದೆ. ಮತ್ತೊಂದೆಡೆ ಜೀವ ಹೋಗಿರುವ ಹಸುವಿಗೆ ಬೇರೆಯವರು ವಿಷ ಬೆರೆಸಿರಬಹುದು ಎಂಬ ಅನುಮಾನ ಕೂಡ ಇದೆ. ಈ ಇಬ್ಬರ ಜೊತೆಗೆ ಮತ್ತೈದು ಜನರನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಹುಲಿ, ಚಿರತೆ ದಾಳಿಗೆ ಬಲಿಯಾದ ಜಾನುವಾರುಗಳ ಮಾಲೀಕರನ್ನು ಹಾಗೂ ಕಾಡಿಗೆ ಹಸು ಬಿಡುವವರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ