ತಾಯಿ ಕೊಲೆ, ತಂದೆ ಜೈಲಿಗೆ 10 ತಿಂಗಳ ಹೆಣ್ಣು ಮಗುವಿನ ಕಥೆ?
ಗ್ರಾಮದಲ್ಲಿ ಜಮೀನನ್ನು ಗುತ್ತಿಗೆ ಪಡೆದು ಕೃಷಿ ಮಾಡ್ತಿದ್ದ ದಂಪತಿ
ಯಾವುದೋ ಹಣದ ವಿಚಾರಕ್ಕೆ ದಂಪತಿ ನಡುವೆ ಜಗಳ, ಕೊಲೆ
ಚಾಮರಾಜನಗರ: ಹಣಕಾಸಿಗೆ ಸಂಬಂಧಿಸಿದಂತೆ ಜಗಳ ನಡೆದಿದ್ದಾಗ ಗಂಡ ಬಲವಾದ ಆಯುಧದಿಂದ ಹೆಂಡತಿಗೆ ಹೊಡೆದು ಹತ್ಯೆ ಮಾಡಿರುವ ಘಟನೆ ಚಾಮರಾಜನಗರ ತಾಲೂಕಿನ ಮಂಗಲ ಹೊಸೂರು ಗ್ರಾಮದಲ್ಲಿ ನಡೆದಿದೆ.
ತಮಿಳುನಾಡು ಮೂಲದ ರಾಧಿಕಾ (22) ಮೃತರು ಗೃಹಿಣಿ. ಕೃತ್ಯ ವೆಸಗಿದ ಪತಿ ಕಾರ್ತಿಕ್, ಸದ್ಯ ಪೊಲೀಸರ ವಶದಲ್ಲಿದ್ದಾನೆ. ಈ ದಂಪತಿಗೆ 10 ತಿಂಗಳ ಹೆಣ್ಣು ಮಗುವಿದೆ. ಮಂಗಲ ಹೊಸೂರು ಗ್ರಾಮದಲ್ಲಿ ಜಮೀನು ಅನ್ನು ಗುತ್ತಿಗೆ ಪಡೆದುಕೊಂಡು ವ್ಯವಸಾಯವನ್ನು ಮಾಡುತ್ತಿದ್ದರು. ಆದ್ರೆ ನಿನ್ನೆ ರಾತ್ರಿ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಜಗಳ ನಡೆದಿದೆ.
ಈ ವೇಳೆ ಕೋಪದಲ್ಲಿದ್ದ ಗಂಡ ಯಾವುದೋ ಬಲವಾದ ಆಯುಧದಿಂದ ಹೆಂಡತಿಯ ತಲೆಗೆ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾಳೆ. ಈ ಸಂಬಂಧ ಡಿವೈಎಸ್ಪಿ ಲಕ್ಷ್ಮಯ್ಯ, ಸರ್ಕಲ್ ಇನ್ಸ್ಪೆಕ್ಟರ್ ಬಸವರಾಜ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ತಾಯಿ ಕೊಲೆ, ತಂದೆ ಜೈಲಿಗೆ 10 ತಿಂಗಳ ಹೆಣ್ಣು ಮಗುವಿನ ಕಥೆ?
ಗ್ರಾಮದಲ್ಲಿ ಜಮೀನನ್ನು ಗುತ್ತಿಗೆ ಪಡೆದು ಕೃಷಿ ಮಾಡ್ತಿದ್ದ ದಂಪತಿ
ಯಾವುದೋ ಹಣದ ವಿಚಾರಕ್ಕೆ ದಂಪತಿ ನಡುವೆ ಜಗಳ, ಕೊಲೆ
ಚಾಮರಾಜನಗರ: ಹಣಕಾಸಿಗೆ ಸಂಬಂಧಿಸಿದಂತೆ ಜಗಳ ನಡೆದಿದ್ದಾಗ ಗಂಡ ಬಲವಾದ ಆಯುಧದಿಂದ ಹೆಂಡತಿಗೆ ಹೊಡೆದು ಹತ್ಯೆ ಮಾಡಿರುವ ಘಟನೆ ಚಾಮರಾಜನಗರ ತಾಲೂಕಿನ ಮಂಗಲ ಹೊಸೂರು ಗ್ರಾಮದಲ್ಲಿ ನಡೆದಿದೆ.
ತಮಿಳುನಾಡು ಮೂಲದ ರಾಧಿಕಾ (22) ಮೃತರು ಗೃಹಿಣಿ. ಕೃತ್ಯ ವೆಸಗಿದ ಪತಿ ಕಾರ್ತಿಕ್, ಸದ್ಯ ಪೊಲೀಸರ ವಶದಲ್ಲಿದ್ದಾನೆ. ಈ ದಂಪತಿಗೆ 10 ತಿಂಗಳ ಹೆಣ್ಣು ಮಗುವಿದೆ. ಮಂಗಲ ಹೊಸೂರು ಗ್ರಾಮದಲ್ಲಿ ಜಮೀನು ಅನ್ನು ಗುತ್ತಿಗೆ ಪಡೆದುಕೊಂಡು ವ್ಯವಸಾಯವನ್ನು ಮಾಡುತ್ತಿದ್ದರು. ಆದ್ರೆ ನಿನ್ನೆ ರಾತ್ರಿ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಜಗಳ ನಡೆದಿದೆ.
ಈ ವೇಳೆ ಕೋಪದಲ್ಲಿದ್ದ ಗಂಡ ಯಾವುದೋ ಬಲವಾದ ಆಯುಧದಿಂದ ಹೆಂಡತಿಯ ತಲೆಗೆ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾಳೆ. ಈ ಸಂಬಂಧ ಡಿವೈಎಸ್ಪಿ ಲಕ್ಷ್ಮಯ್ಯ, ಸರ್ಕಲ್ ಇನ್ಸ್ಪೆಕ್ಟರ್ ಬಸವರಾಜ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ