ಭಾರತದ ಐತಿಹಾಸಿಕ ಸಾಧನೆಗೆ ಇನ್ನೊಂದೇ ದಿನ ಬಾಕಿ
‘ವಿಕ್ರಂ’ನ ಸಾಫ್ಟ್ ಲ್ಯಾಂಡಿಂಗ್ಗಾಗಿ ಕಾಯುತ್ತಿದೆ ಭೂಮಿ
ಸಾಫ್ಟ್ ಲ್ಯಾಂಡಿಂಗ್ ಆಗುತ್ತಾ..? ಪೋಸ್ಟ್ಪೋನ್ ಆಗುತ್ತಾ?
ಆಗಸ್ಟ್ -23 ಭಾರತದ ಪಾಲಿಗೆ ಅತ್ಯಂತ ಮಹತ್ವದ ದಿನ. 40 ದಿನಗಳಿಂದ ಇಡೀ ಭಾರತವೇ ಚಾತಕ ಪಕ್ಷಿಯಂತೆ ಎದುರು ನೋಡುತ್ತ ಕುಳಿತಿದೆ. ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿರುವ ವಿಕ್ರಮ್ ಲ್ಯಾಂಡರ್ ಇನ್ನೇನಿದ್ದರೂ ಚಂದ್ರನ ಮೇಲೆ ಕಾಲು ಇಡೋದೊಂದೇ ಬಾಕಿ. ಈ ಐತಿಹಾಸಿಕ ಕ್ಷಣಕ್ಕಾಗಿ ಇಡೀ ವಿಶ್ವವೇ ಭಾರತದತ್ತ ಕಣ್ಣರಳಿಸಿ ನೋಡುತ್ತಿದೆ. ಅದರಲ್ಲೂ ರಷ್ಯಾದ ಲೂನಾ-25 ಚಂದ್ರಯಾನ ವಿಫಲವಾದ ಬಳಿಕ, ಭಾರತದ ಚಂದ್ರಯಾನ-3 ಯೋಜನೆ ಎಲ್ಲರಲ್ಲೂ ಕುತೂಹಲ ಮೂಡಿಸಿದೆ.
ಟೆನ್ಷನ್ ಹೆಚ್ಚಿಸಿದ ಇಸ್ರೋ ವಿಜ್ಞಾನಿಯೊಬ್ಬರ ಅಚ್ಚರಿ ಹೇಳಿಕೆ
ಸದ್ಯ ಚಂದ್ರನ ಮೇಲ್ಮೈನ 25 ಕಿ.ಮೀ. ದೂರದಲ್ಲಿರುವ ವಿಕ್ರಮ್ ಲ್ಯಾಂಡರ್ಅನ್ನು ಸುರಕ್ಷಿತವಾಗಿ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡ್ ಮಾಡಿಸಲು ಇಸ್ರೋ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಸೂರ್ಯೋದಯಕ್ಕಾಗಿ ಕಾಯುತ್ತಿದೆ. ಒಂದು ವೇಳೆ ಆಗಸ್ಟ್ 23 ರಂದು ಚಂದ್ರನ ಮೇಲ್ಮೈಯಲ್ಲಿ ವಿಕ್ರಮ್ ಲ್ಯಾಂಡರ್ನ ಲ್ಯಾಂಡಿಂಗ್ಗೆ ಪೂರಕ ವಾತಾವರಣ ಇರದಿದ್ದರೆ, ಆಗಸ್ಟ್ 27 ರಂದು ಮರಳಿ ಪ್ರಯತ್ನ ಮಾಡಲಾಗುವುದು ಎಂದು ಇಸ್ರೋ ತಿಳಿಸಿದೆ.
ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ಎರಡು ಗಂಟೆಗಳ ಮೊದಲು ಅದರ ಸ್ಥಿತಿಗತಿ ಪರಿಶೀಲಿಸಲಾಗವುದು. ಈ ವೇಳೆ ಲ್ಯಾಡಿಂಗ್ ಮಾಡಬೇಕೇ ಅಥವಾ ಆ ಕ್ಷಣದಲ್ಲಿ ಸೂಕ್ತವಲ್ಲವೇ ಎಂದು ತೀರ್ಮಾನ ಕೈಗೊಳ್ಳಲಾಗುವುದು. ಅನುಕೂಲಕರ ಪರಿಸ್ಥಿತಿ ಇಲ್ಲದಿದ್ದರೆ ಆಗಸ್ಟ್ 27ಕ್ಕೆ ಮುಂದೂಡಿಕೆ ಮಾಡಿ ಮತ್ತೊಂದು ಪ್ರಯತ್ನ ಮಾಡಲಾಗುವುದು ಎಂದು ಇಸ್ರೋದ ಬಾಹ್ಯಾಕಾಶ ಅಪ್ಲಿಕೇಶನ್ ಕೇಂದ್ರದ ನಿರ್ದೇಶಕ ನಿಲೇಶ್ ಎಂ ದೇಸಾಯಿ ತಿಳಿಸಿದ್ದಾರೆ
ವಿಕ್ರಮ್ ಸೇಫ್ ಲ್ಯಾಂಡ್ಗಾಗಿ ದೇಶದೆಲ್ಲೆಡೆ ವಿಶೇಷ ಪ್ರಾರ್ಥನೆ
ಚಂದ್ರಯಾನ-3 ಯಶಸ್ವಿಯಾಗಲೆಂದು ದೇಶದೆಲ್ಲೆಡೆ ವಿಶೇಷ ಪ್ರಾರ್ಥನೆ ಮಾಡಲಾಗುತ್ತಿದೆ. ಅದೇ ರೀತಿ ದಕ್ಷಿಣ ಕಾಶಿ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲೂ ಶಾಲಾ ವಿದ್ಯಾರ್ಥಿಗಳು ವಿಭಿನ್ನವಾಗಿ ಪ್ರಾರ್ಥಿಸಿದ್ದಾರೆ. ನಂಜನಗೂಡಿನ A9 ಆರ್ಟ್ ಸ್ಟುಡಿಯೋ ಚಿತ್ರಕಲಾ ಶಾಲೆಯಲ್ಲಿ ತರಬೇತಿ ಪಡೆಯುತ್ತಿರುವ ವಿವಿಧ ಶಾಲೆಗಳ ವಿದ್ಯಾರ್ಥಿಗಳು, ವಿಕ್ರಮ್ ಸೇಫಾ ಲ್ಯಾಂಡ್ ಆಗಿರುವ ಮಾದರಿ ತ್ರಿ ಡಿ ಎಫೆಕ್ಟ್ ಚಿತ್ರವನ್ನು ಶ್ರೀಕಂಠೇಶ್ವರ ದೇಗುಲದ ಮುಂಭಾಗದಲ್ಲಿ ಬಿಡಿ ಗಮನ ಸೆಳೆದಿದ್ದಾರೆ.
ಒಟ್ಟಾರೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಹೊಸ ಇತಿಹಾಸ ಸೃಷ್ಟಿಗೆ ಕೌಂಟ್ಡೌನ್ ಶುರುವಾಗಿದೆ. ಇಡೀ ವಿಶ್ವವೇ ಆಗಸ್ಟ್ 23ರ ದಿನವನ್ನು ಎದುರು ನೋಡ್ತಿದೆ. ನಾಳೆ, ವಿಕ್ರಮ್ ಸಾಫ್ಟ್ ಲ್ಯಾಂಡ್ ಆಗಲಿ ಎಂದು ಇಡೀ ದೇಶವೇ ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಭಾರತದ ಐತಿಹಾಸಿಕ ಸಾಧನೆಗೆ ಇನ್ನೊಂದೇ ದಿನ ಬಾಕಿ
‘ವಿಕ್ರಂ’ನ ಸಾಫ್ಟ್ ಲ್ಯಾಂಡಿಂಗ್ಗಾಗಿ ಕಾಯುತ್ತಿದೆ ಭೂಮಿ
ಸಾಫ್ಟ್ ಲ್ಯಾಂಡಿಂಗ್ ಆಗುತ್ತಾ..? ಪೋಸ್ಟ್ಪೋನ್ ಆಗುತ್ತಾ?
ಆಗಸ್ಟ್ -23 ಭಾರತದ ಪಾಲಿಗೆ ಅತ್ಯಂತ ಮಹತ್ವದ ದಿನ. 40 ದಿನಗಳಿಂದ ಇಡೀ ಭಾರತವೇ ಚಾತಕ ಪಕ್ಷಿಯಂತೆ ಎದುರು ನೋಡುತ್ತ ಕುಳಿತಿದೆ. ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿರುವ ವಿಕ್ರಮ್ ಲ್ಯಾಂಡರ್ ಇನ್ನೇನಿದ್ದರೂ ಚಂದ್ರನ ಮೇಲೆ ಕಾಲು ಇಡೋದೊಂದೇ ಬಾಕಿ. ಈ ಐತಿಹಾಸಿಕ ಕ್ಷಣಕ್ಕಾಗಿ ಇಡೀ ವಿಶ್ವವೇ ಭಾರತದತ್ತ ಕಣ್ಣರಳಿಸಿ ನೋಡುತ್ತಿದೆ. ಅದರಲ್ಲೂ ರಷ್ಯಾದ ಲೂನಾ-25 ಚಂದ್ರಯಾನ ವಿಫಲವಾದ ಬಳಿಕ, ಭಾರತದ ಚಂದ್ರಯಾನ-3 ಯೋಜನೆ ಎಲ್ಲರಲ್ಲೂ ಕುತೂಹಲ ಮೂಡಿಸಿದೆ.
ಟೆನ್ಷನ್ ಹೆಚ್ಚಿಸಿದ ಇಸ್ರೋ ವಿಜ್ಞಾನಿಯೊಬ್ಬರ ಅಚ್ಚರಿ ಹೇಳಿಕೆ
ಸದ್ಯ ಚಂದ್ರನ ಮೇಲ್ಮೈನ 25 ಕಿ.ಮೀ. ದೂರದಲ್ಲಿರುವ ವಿಕ್ರಮ್ ಲ್ಯಾಂಡರ್ಅನ್ನು ಸುರಕ್ಷಿತವಾಗಿ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡ್ ಮಾಡಿಸಲು ಇಸ್ರೋ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಸೂರ್ಯೋದಯಕ್ಕಾಗಿ ಕಾಯುತ್ತಿದೆ. ಒಂದು ವೇಳೆ ಆಗಸ್ಟ್ 23 ರಂದು ಚಂದ್ರನ ಮೇಲ್ಮೈಯಲ್ಲಿ ವಿಕ್ರಮ್ ಲ್ಯಾಂಡರ್ನ ಲ್ಯಾಂಡಿಂಗ್ಗೆ ಪೂರಕ ವಾತಾವರಣ ಇರದಿದ್ದರೆ, ಆಗಸ್ಟ್ 27 ರಂದು ಮರಳಿ ಪ್ರಯತ್ನ ಮಾಡಲಾಗುವುದು ಎಂದು ಇಸ್ರೋ ತಿಳಿಸಿದೆ.
ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ಎರಡು ಗಂಟೆಗಳ ಮೊದಲು ಅದರ ಸ್ಥಿತಿಗತಿ ಪರಿಶೀಲಿಸಲಾಗವುದು. ಈ ವೇಳೆ ಲ್ಯಾಡಿಂಗ್ ಮಾಡಬೇಕೇ ಅಥವಾ ಆ ಕ್ಷಣದಲ್ಲಿ ಸೂಕ್ತವಲ್ಲವೇ ಎಂದು ತೀರ್ಮಾನ ಕೈಗೊಳ್ಳಲಾಗುವುದು. ಅನುಕೂಲಕರ ಪರಿಸ್ಥಿತಿ ಇಲ್ಲದಿದ್ದರೆ ಆಗಸ್ಟ್ 27ಕ್ಕೆ ಮುಂದೂಡಿಕೆ ಮಾಡಿ ಮತ್ತೊಂದು ಪ್ರಯತ್ನ ಮಾಡಲಾಗುವುದು ಎಂದು ಇಸ್ರೋದ ಬಾಹ್ಯಾಕಾಶ ಅಪ್ಲಿಕೇಶನ್ ಕೇಂದ್ರದ ನಿರ್ದೇಶಕ ನಿಲೇಶ್ ಎಂ ದೇಸಾಯಿ ತಿಳಿಸಿದ್ದಾರೆ
ವಿಕ್ರಮ್ ಸೇಫ್ ಲ್ಯಾಂಡ್ಗಾಗಿ ದೇಶದೆಲ್ಲೆಡೆ ವಿಶೇಷ ಪ್ರಾರ್ಥನೆ
ಚಂದ್ರಯಾನ-3 ಯಶಸ್ವಿಯಾಗಲೆಂದು ದೇಶದೆಲ್ಲೆಡೆ ವಿಶೇಷ ಪ್ರಾರ್ಥನೆ ಮಾಡಲಾಗುತ್ತಿದೆ. ಅದೇ ರೀತಿ ದಕ್ಷಿಣ ಕಾಶಿ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲೂ ಶಾಲಾ ವಿದ್ಯಾರ್ಥಿಗಳು ವಿಭಿನ್ನವಾಗಿ ಪ್ರಾರ್ಥಿಸಿದ್ದಾರೆ. ನಂಜನಗೂಡಿನ A9 ಆರ್ಟ್ ಸ್ಟುಡಿಯೋ ಚಿತ್ರಕಲಾ ಶಾಲೆಯಲ್ಲಿ ತರಬೇತಿ ಪಡೆಯುತ್ತಿರುವ ವಿವಿಧ ಶಾಲೆಗಳ ವಿದ್ಯಾರ್ಥಿಗಳು, ವಿಕ್ರಮ್ ಸೇಫಾ ಲ್ಯಾಂಡ್ ಆಗಿರುವ ಮಾದರಿ ತ್ರಿ ಡಿ ಎಫೆಕ್ಟ್ ಚಿತ್ರವನ್ನು ಶ್ರೀಕಂಠೇಶ್ವರ ದೇಗುಲದ ಮುಂಭಾಗದಲ್ಲಿ ಬಿಡಿ ಗಮನ ಸೆಳೆದಿದ್ದಾರೆ.
ಒಟ್ಟಾರೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಹೊಸ ಇತಿಹಾಸ ಸೃಷ್ಟಿಗೆ ಕೌಂಟ್ಡೌನ್ ಶುರುವಾಗಿದೆ. ಇಡೀ ವಿಶ್ವವೇ ಆಗಸ್ಟ್ 23ರ ದಿನವನ್ನು ಎದುರು ನೋಡ್ತಿದೆ. ನಾಳೆ, ವಿಕ್ರಮ್ ಸಾಫ್ಟ್ ಲ್ಯಾಂಡ್ ಆಗಲಿ ಎಂದು ಇಡೀ ದೇಶವೇ ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ