Advertisment

ಲಕ್ಷ್ಮಿ ಹೆಬ್ಬಾಳ್ಕರ್ ಇಲಾಖೆಯಲ್ಲಿ ಕೋಟಿ ಕೋಟಿ ಭ್ರಷ್ಟಾಚಾರ.. ಈ ಬಗ್ಗೆ ಚನ್ನರಾಜ್ ಹಟ್ಟಿಹೊಳಿ ಏನಂದ್ರು ಗೊತ್ತಾ?

author-image
Veena Gangani
Updated On
ಲಕ್ಷ್ಮಿ ಹೆಬ್ಬಾಳ್ಕರ್ ಇಲಾಖೆಯಲ್ಲಿ ಕೋಟಿ ಕೋಟಿ ಭ್ರಷ್ಟಾಚಾರ.. ಈ ಬಗ್ಗೆ ಚನ್ನರಾಜ್ ಹಟ್ಟಿಹೊಳಿ ಏನಂದ್ರು ಗೊತ್ತಾ?
Advertisment
  • ಸರ್ಕಾರದ ವಿರುದ್ಧ ಮತ್ತೊಂದು ಭ್ರಷ್ಟಾಚಾರದ ಆರೋಪ
  • ಲಕ್ಷ್ಮಿ ಹೆಬ್ಬಾಳ್ಕರ್ ‘ವಿಶೇಷ’ ಕರ್ತವ್ಯ ಅಧಿಕಾರಿಯಿಂದ ಅಕ್ರಮ
  • ದಾಖಲೆಗಳ ಸಮೇತ ರಾಜ್ಯಪಾಲರು, ಲೋಕಾಯುಕ್ತಕ್ಕೆ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ ನಡೆದಿರೋ ಗಂಭೀರ ಆರೋಪ ಕೇಳಿ ಬಂದಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿಶೇಷ ಕರ್ತವ್ಯ ಅಧಿಕಾರಿ ಬಿ.ಹೆಚ್.ನಿಶ್ಚಲ್ ಅವರು ಭಾರೀ ಹಗರಣ ಮಾಡಿ ಕೋಟಿ, ಕೋಟಿ ರೂಪಾಯಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ.

Advertisment

ಇನ್ನು, ಈ ಕೇಸ್​ ಸಂಬಂಧ ನ್ಯೂಸ್​ ಫಸ್ಟ್​ನೊಂದಿಗೆ ಮಾತಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ವಿಧಾನ ಪರಿಷತ್​ ಸದಸ್ಯ ಚನ್ನರಾಜ​ ಹಟ್ಟಿಹೊಳಿ, ಈ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ. ನಿಶ್ಚಲ್ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವಿಶೇಷ ಕರ್ತವ್ಯ ಅಧಿಕಾರಿ ಆಗಿದ್ದಾರೆ. ನಿಶ್ಚಲ್ ಅವರು ನನಗೆ ಪರಿಚಯ ಇದ್ದಾರೆ. ಆದರೆ ಈ ರೀತಿ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ. ಅದರ ಬಗ್ಗೆ ತನಿಖೆ ಮಾಡಿ ಪ್ರತಿಕ್ರಿಯೆ ನೀಡುತ್ತೇನೆ ಎಂದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

Advertisment
Advertisment
Advertisment