ಶೆಡ್ನಲ್ಲಿ ನಿಲ್ಲಿಸಿದ ರಥದಲ್ಲಿ ಕಾಣಿಸಿಕೊಂಡ ಬೆಂಕಿ
ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾದ ರಥ
ನೂರಾರು ವರ್ಷ ಇತಿಹಾಸವಿರುವ ದೇವಸ್ಥಾನದ ತೇರು
ತುಮಕೂರು: ನೂರಾರು ವರ್ಷ ಇತಿಹಾಸವಿರುವ ದೇವಸ್ಥಾನದ ತೇರು ಬೆಂಕಿಯ ಕೆನ್ನಾಲಿಗೆ ಹೊತ್ತಿ ಉರಿದ ಘಟನೆ ಪುರ ಗ್ರಾಮದ ಕಲ್ಲೇಶ್ವರ ದೇವಸ್ಥಾನದಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನಲ್ಲಿರುವ ಪುರ ಗ್ರಾಮದ ಶ್ರೀಕಲ್ಲೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಶೆಡ್ ಮಾಡಿ ರಥವನ್ನು ನಿಲ್ಲಿಸಲಾಗಿತ್ತು, ಮಧ್ಯಾಹ್ನ ಏಕಾಏಕಿ ಕಾಣಿಸಿಕೊಂಡ ಬೆಂಕಿಯ ಕೆನ್ನಾಲಿಗೆಗೆ ತೇರು ಸಂಪೂರ್ಣ ಆಹುತಿಯಾಗಿದೆ.
ಮೇಲ್ನೋಟಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ಯಾ ಅಥವಾ ಕಿಡಿಗೇಡಿಗಳು ಬೆಂಕಿ ಹಚ್ಚಿದ್ರಾ ಎಂಬ ಶಂಕೆ ವ್ಯಕ್ತವಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಗ್ನಿಶಾಮಕ ದಳ ಧಾವಿಸುವ ವೇಳೆಗೆ ರಥ ಸಂಪೂರ್ಣವಾಗಿ ಸುಟ್ಟು ಕರುಕಲಾಗಿದೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಶೆಡ್ನಲ್ಲಿ ನಿಲ್ಲಿಸಿದ ರಥದಲ್ಲಿ ಕಾಣಿಸಿಕೊಂಡ ಬೆಂಕಿ
ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾದ ರಥ
ನೂರಾರು ವರ್ಷ ಇತಿಹಾಸವಿರುವ ದೇವಸ್ಥಾನದ ತೇರು
ತುಮಕೂರು: ನೂರಾರು ವರ್ಷ ಇತಿಹಾಸವಿರುವ ದೇವಸ್ಥಾನದ ತೇರು ಬೆಂಕಿಯ ಕೆನ್ನಾಲಿಗೆ ಹೊತ್ತಿ ಉರಿದ ಘಟನೆ ಪುರ ಗ್ರಾಮದ ಕಲ್ಲೇಶ್ವರ ದೇವಸ್ಥಾನದಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನಲ್ಲಿರುವ ಪುರ ಗ್ರಾಮದ ಶ್ರೀಕಲ್ಲೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಶೆಡ್ ಮಾಡಿ ರಥವನ್ನು ನಿಲ್ಲಿಸಲಾಗಿತ್ತು, ಮಧ್ಯಾಹ್ನ ಏಕಾಏಕಿ ಕಾಣಿಸಿಕೊಂಡ ಬೆಂಕಿಯ ಕೆನ್ನಾಲಿಗೆಗೆ ತೇರು ಸಂಪೂರ್ಣ ಆಹುತಿಯಾಗಿದೆ.
ಮೇಲ್ನೋಟಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ಯಾ ಅಥವಾ ಕಿಡಿಗೇಡಿಗಳು ಬೆಂಕಿ ಹಚ್ಚಿದ್ರಾ ಎಂಬ ಶಂಕೆ ವ್ಯಕ್ತವಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಗ್ನಿಶಾಮಕ ದಳ ಧಾವಿಸುವ ವೇಳೆಗೆ ರಥ ಸಂಪೂರ್ಣವಾಗಿ ಸುಟ್ಟು ಕರುಕಲಾಗಿದೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ