ಮಧ್ಯ ವಯಸ್ಕರು, ವಿಧವೆಯರು, ಆಂಟಿಯರೇ ಇವನ ಟಾರ್ಗೆಟ್
ಡಾಕ್ಟರ್ ಎಂದು ನಂಬಿಸಿ ಮಹಿಳೆಯನ್ನು ಮದುವೆಯಾಗುತ್ತಿದ್ದ ಆಸಾಮಿ
15 ಲಕ್ಷ ಕ್ಯಾಶ್ ಹಾಗೂ ಒಡವೆಗಳೊಂದಿಗೆ ಪರಾರಿಯಾದ ಮಹೇಶ್
ಬೆಂಗಳೂರು: ಮಧ್ಯವಯಸ್ಸಿನ ಹಾಗೂ ವಿಧವಾ ಮಹಿಳೆಯರನ್ನ ನಂಬಿಸಿ ಮದುವೆಯಾಗಿ ನಗದು ಹಾಗೂ ಚಿನ್ನಾಭರಣಗಳೊಂದಿಗೆ ಎಸ್ಕೇಪ್ ಆಗುತ್ತಿದ್ದ ಖತರ್ನಾಕ್ ಆರೋಪಿಯನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ಬನಶಂಕರಿ ಬಡಾವಣೆ ನಿವಾಸಿ ಮಹೇಶ್ (35) ಬಂಧಿತ ಆರೋಪಿ. ಈತನಿಂದ 2 ಲಕ್ಷ ನಗದು, 2 ಕಾರ್, ಒಂದು ಬ್ರೇಸ್ ಲೈಟ್, ಒಂದು ಉಂಗುರ, ಎರಡು ಚಿನ್ನದ ಬಳೆ, ಒಂದು ನೆಕ್ಲೆಸ್ ಹಾಗೂ 7 ಮೊಬೈಲ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.
15 ಮಹಿಳೆಯರಿಗೆ ದೋಖಾ
ಮೈಸೂರಿನ ನಿವಾಸಿ ಹೇಮಲತಾ ಎಂಬುವರಿಗೆ ತಾನು ಡಾಕ್ಟರ್ ಎಂದು ಹೇಳಿಕೊಂಡು ಶಾದಿ ಡಾ.ಕಾಂ ನಲ್ಲಿ ಪರಿಚಯಿಸಿಕೊಂಡು ನಂಬಿಸಿ ನಂತರ ಮದುವೆಯಾಗಿ ನಗದು ಹಾಗೂ ಚಿನ್ನಾಭರಣಗಳೊಂದಿಗೆ ಎಸ್ಕೇಪ್ ಆಗಿದ್ದ. ಹೇಮಲತಾ ರವರು ಕುವೆಂಪುನಗರ ಪೊಲೀಸರಿಗೆ ದೂರು ನೀಡಿದ್ದು ಈತನನ್ನ ಬಂಧಿಸಲಾಗಿದೆ. ವಿಚಾರಣೆ ವೇಳೆ ಈತ ತಾನು ಡಾಕ್ಟರ್, ಇಂಜಿನಿಯರ್, ಸಿವಿಲ್ ಕಂಟ್ರಾಕ್ಟರ್ ಎಂದು ಹೇಳಿಕೊಂಡು ಸುಮಾರು 15 ಮಹಿಳೆಯರಿಗೆ ದೋಖಾ ಮಾಡಿರುವುದು ಬೆಳಕಿಗೆ ಬಂದಿದೆ.
15 ಲಕ್ಷ ಕ್ಯಾಶ್ ಹಾಗೂ ಒಡವೆಗಳೊಂದಿಗೆ ಪರಾರಿ
ಶಾಧಿ.ಡಾ.ಕಾಂ ಮೂಲಕ ಹೇಮಲತಾ ರವರನ್ನ ಕಾಂಟ್ಯಾಕ್ಟ್ ಮಾಡಿದ ಮಹೇಶ್ ಮೈಸೂರಿನ ವಿಜಯನಗರದಲ್ಲಿರುವ ಮನೆ ತೋರಿಸಿ ನಂಬಿಸಿದ್ದಾನೆ. ಈತನ ಬೋಗಸ್ ಮಾತುಗಳನ್ನ ನಂಬಿದ ಹೇಮಲತಾ ಜನವರಿ 1, 2023 ರಲ್ಲಿ ವಿಶಾಖಪಟ್ನಂ ನಲ್ಲಿ ಮದುವೆಯಾಗಿದ್ದಾರೆ. ನಂತರ ಮೈಸೂರಿನ ಮನೆಗೆ ಬಂದು ನೆಲೆಸಿದ್ದಾರೆ. ತಾನು ಕ್ಲಿನಿಕ್ ಓಪನ್ ಮಾಡಬೇಕು ಎಂದು ಕಾರಣ ನೀಡಿ 70 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದಾನೆ. ಹಣ ಕೊಡಲು ಹೇಮಲತಾ ಒಪ್ಪದೇ ಇದ್ದಾಗ ಕೊಲೆ ಬೆದರಿಕೆ ಹಾಕಿದ್ದಾನೆ. ನಂತರ ಹೇಮಲತಾ ಮನೆಯಲ್ಲಿ ಇಲ್ಲದಿರುವ ಸಮಯ ನೋಡಿಕೊಂಡು 15 ಲಕ್ಷ ಕ್ಯಾಶ್ ಹಾಗೂ ಒಡವೆಗಳೊಂದಿಗೆ ಪರಾರಿಯಾಗಿದ್ದಾನೆ. ನಂತರ ಈತ ಮನೆಗೆ ಹಿಂದಿರುಗಿಲ್ಲ. ಕೆಲವೇ ದಿನಗಳಲ್ಲಿ ಬೆಂಗಳೂರಿನ ದಿವ್ಯಾ ಎಂಬುವರು ಹೇಮಲತಾ ರವರನ್ನ ಸಂಪರ್ಕಿಸಿ ತನನ್ನೂ ಮದುವೆ ಆಗಿದ್ದಾರೆಂದು ಮಾಹಿತಿ ತಿಳಿಸಿದ್ದಾರೆ. ಮಹೇಶ್ ವಂಚನೆಗೆ ಬೇಸತ್ತ ಹೇಮಲತಾ ನ್ಯಾಯಕ್ಕಾಗಿ ಕುವೆಂಪುನಗರ ಪೊಲೀಸರ ಮೊರೆ ಹೋಗಿದ್ದಾರೆ. ದೂರು ದಾಖಲಿಸಿಕೊಂಡ ಠಾಣೆ ಇನ್ಸ್ಪೆಕ್ಟರ್ ಅರುಣ್ ರವರು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ಹಾಗೂ ಕೆ.ಆರ್.ವಿಭಾಗದ ಎಸಿಪಿ ಗಂಗಾಧರ ಸ್ವಾಮಿ ಉಸ್ತುವಾರಿಯಲ್ಲಿ ವಿಶೇಷ ತಂಡ ರಚಿಸಿದ್ದಾರೆ. ಮಹಿಳೆಯರನ್ನ ಏಮಾರಿಸಿ ವಂಚಿಸುತ್ತಿದ್ದ ಖತರ್ನಾಕ್ ಮಹೇಶ್ನನ್ನು ಹೆಡೆಮುರಿ ಕಟ್ಟಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮಧ್ಯ ವಯಸ್ಕರು, ವಿಧವೆಯರು, ಆಂಟಿಯರೇ ಇವನ ಟಾರ್ಗೆಟ್
ಡಾಕ್ಟರ್ ಎಂದು ನಂಬಿಸಿ ಮಹಿಳೆಯನ್ನು ಮದುವೆಯಾಗುತ್ತಿದ್ದ ಆಸಾಮಿ
15 ಲಕ್ಷ ಕ್ಯಾಶ್ ಹಾಗೂ ಒಡವೆಗಳೊಂದಿಗೆ ಪರಾರಿಯಾದ ಮಹೇಶ್
ಬೆಂಗಳೂರು: ಮಧ್ಯವಯಸ್ಸಿನ ಹಾಗೂ ವಿಧವಾ ಮಹಿಳೆಯರನ್ನ ನಂಬಿಸಿ ಮದುವೆಯಾಗಿ ನಗದು ಹಾಗೂ ಚಿನ್ನಾಭರಣಗಳೊಂದಿಗೆ ಎಸ್ಕೇಪ್ ಆಗುತ್ತಿದ್ದ ಖತರ್ನಾಕ್ ಆರೋಪಿಯನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ಬನಶಂಕರಿ ಬಡಾವಣೆ ನಿವಾಸಿ ಮಹೇಶ್ (35) ಬಂಧಿತ ಆರೋಪಿ. ಈತನಿಂದ 2 ಲಕ್ಷ ನಗದು, 2 ಕಾರ್, ಒಂದು ಬ್ರೇಸ್ ಲೈಟ್, ಒಂದು ಉಂಗುರ, ಎರಡು ಚಿನ್ನದ ಬಳೆ, ಒಂದು ನೆಕ್ಲೆಸ್ ಹಾಗೂ 7 ಮೊಬೈಲ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.
15 ಮಹಿಳೆಯರಿಗೆ ದೋಖಾ
ಮೈಸೂರಿನ ನಿವಾಸಿ ಹೇಮಲತಾ ಎಂಬುವರಿಗೆ ತಾನು ಡಾಕ್ಟರ್ ಎಂದು ಹೇಳಿಕೊಂಡು ಶಾದಿ ಡಾ.ಕಾಂ ನಲ್ಲಿ ಪರಿಚಯಿಸಿಕೊಂಡು ನಂಬಿಸಿ ನಂತರ ಮದುವೆಯಾಗಿ ನಗದು ಹಾಗೂ ಚಿನ್ನಾಭರಣಗಳೊಂದಿಗೆ ಎಸ್ಕೇಪ್ ಆಗಿದ್ದ. ಹೇಮಲತಾ ರವರು ಕುವೆಂಪುನಗರ ಪೊಲೀಸರಿಗೆ ದೂರು ನೀಡಿದ್ದು ಈತನನ್ನ ಬಂಧಿಸಲಾಗಿದೆ. ವಿಚಾರಣೆ ವೇಳೆ ಈತ ತಾನು ಡಾಕ್ಟರ್, ಇಂಜಿನಿಯರ್, ಸಿವಿಲ್ ಕಂಟ್ರಾಕ್ಟರ್ ಎಂದು ಹೇಳಿಕೊಂಡು ಸುಮಾರು 15 ಮಹಿಳೆಯರಿಗೆ ದೋಖಾ ಮಾಡಿರುವುದು ಬೆಳಕಿಗೆ ಬಂದಿದೆ.
15 ಲಕ್ಷ ಕ್ಯಾಶ್ ಹಾಗೂ ಒಡವೆಗಳೊಂದಿಗೆ ಪರಾರಿ
ಶಾಧಿ.ಡಾ.ಕಾಂ ಮೂಲಕ ಹೇಮಲತಾ ರವರನ್ನ ಕಾಂಟ್ಯಾಕ್ಟ್ ಮಾಡಿದ ಮಹೇಶ್ ಮೈಸೂರಿನ ವಿಜಯನಗರದಲ್ಲಿರುವ ಮನೆ ತೋರಿಸಿ ನಂಬಿಸಿದ್ದಾನೆ. ಈತನ ಬೋಗಸ್ ಮಾತುಗಳನ್ನ ನಂಬಿದ ಹೇಮಲತಾ ಜನವರಿ 1, 2023 ರಲ್ಲಿ ವಿಶಾಖಪಟ್ನಂ ನಲ್ಲಿ ಮದುವೆಯಾಗಿದ್ದಾರೆ. ನಂತರ ಮೈಸೂರಿನ ಮನೆಗೆ ಬಂದು ನೆಲೆಸಿದ್ದಾರೆ. ತಾನು ಕ್ಲಿನಿಕ್ ಓಪನ್ ಮಾಡಬೇಕು ಎಂದು ಕಾರಣ ನೀಡಿ 70 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದಾನೆ. ಹಣ ಕೊಡಲು ಹೇಮಲತಾ ಒಪ್ಪದೇ ಇದ್ದಾಗ ಕೊಲೆ ಬೆದರಿಕೆ ಹಾಕಿದ್ದಾನೆ. ನಂತರ ಹೇಮಲತಾ ಮನೆಯಲ್ಲಿ ಇಲ್ಲದಿರುವ ಸಮಯ ನೋಡಿಕೊಂಡು 15 ಲಕ್ಷ ಕ್ಯಾಶ್ ಹಾಗೂ ಒಡವೆಗಳೊಂದಿಗೆ ಪರಾರಿಯಾಗಿದ್ದಾನೆ. ನಂತರ ಈತ ಮನೆಗೆ ಹಿಂದಿರುಗಿಲ್ಲ. ಕೆಲವೇ ದಿನಗಳಲ್ಲಿ ಬೆಂಗಳೂರಿನ ದಿವ್ಯಾ ಎಂಬುವರು ಹೇಮಲತಾ ರವರನ್ನ ಸಂಪರ್ಕಿಸಿ ತನನ್ನೂ ಮದುವೆ ಆಗಿದ್ದಾರೆಂದು ಮಾಹಿತಿ ತಿಳಿಸಿದ್ದಾರೆ. ಮಹೇಶ್ ವಂಚನೆಗೆ ಬೇಸತ್ತ ಹೇಮಲತಾ ನ್ಯಾಯಕ್ಕಾಗಿ ಕುವೆಂಪುನಗರ ಪೊಲೀಸರ ಮೊರೆ ಹೋಗಿದ್ದಾರೆ. ದೂರು ದಾಖಲಿಸಿಕೊಂಡ ಠಾಣೆ ಇನ್ಸ್ಪೆಕ್ಟರ್ ಅರುಣ್ ರವರು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ಹಾಗೂ ಕೆ.ಆರ್.ವಿಭಾಗದ ಎಸಿಪಿ ಗಂಗಾಧರ ಸ್ವಾಮಿ ಉಸ್ತುವಾರಿಯಲ್ಲಿ ವಿಶೇಷ ತಂಡ ರಚಿಸಿದ್ದಾರೆ. ಮಹಿಳೆಯರನ್ನ ಏಮಾರಿಸಿ ವಂಚಿಸುತ್ತಿದ್ದ ಖತರ್ನಾಕ್ ಮಹೇಶ್ನನ್ನು ಹೆಡೆಮುರಿ ಕಟ್ಟಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ