/newsfirstlive-kannada/media/post_attachments/wp-content/uploads/2025/05/Orissa-Vigilance-Raid-6.jpg)
ಅಬ್ಬಾ.. ದುಡ್ಡು, ದುಡ್ಡು, ದುಡ್ಡು. ಕಂತೆ, ಕಂತೆ ಹಣದ ರಾಶಿ. ಚಿನ್ನಾಭರಣ, ಬೆಲೆಬಾಳುವ ವಸ್ತುಗಳ ಖಜಾನೆಯೇ ಸಿಕ್ಕಿದೆ. ಇದು ಯಾವುದೋ ದೇವರ ಹುಂಡಿಯನ್ನ ತೆಗೆದು ಎಣಿಸುತ್ತಿರೋದಲ್ಲ. ಒಬ್ಬ ಚೀಫ್ ಇಂಜಿನಿಯರ್ ಮನೆಯಲ್ಲಿ ಸಿಕ್ಕಿರೋ ಅಪಾರ ಸಂಪತ್ತು.
/newsfirstlive-kannada/media/post_attachments/wp-content/uploads/2025/05/Orissa-Vigilance-Raid-2.jpg)
ಒಡಿಶಾದಲ್ಲಿ ಇಂದು ವಿಜಿಲೆನ್ಸ್ (ವಿಚಕ್ಷಣ) ಅಧಿಕಾರಿಗಳು ದಾಳಿ ಮಾಡಿದ್ದು, ದೊಡ್ಡ ತಿಮಿಂಗಿಲವನ್ನೇ ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದೆ. ಈ ಸರ್ಕಾರಿ ನೌಕರನ ಭುವನೇಶ್ವರದ ಫ್ಲಾಟ್ನಲ್ಲಿ ಒಂದು ಕೋಟಿ ರೂಪಾಯಿ ನಗದು ಜಪ್ತಿಯಾಗಿದ್ರೆ, ಇನ್ನೊಂದೆಡೆ ಅಂಗೂಲ್ ಜಾಗದ ಮನೆಯಲ್ಲಿ 1.1 ಕೋಟಿ ರೂಪಾಯಿ ನಗದು ಸಿಕ್ಕಿದೆ.
ಇದನ್ನೂ ಓದಿ: ಕ್ಷಮೆ ಕೇಳಲ್ಲ, ಕ್ಷಮೆ ಕೇಳಲ್ಲ.. ಮತ್ತೊಮ್ಮೆ ನಿರಾಕರಿಸಿದ ನಟ ಕಮಲ್ ಹಾಸನ್; ಈಗ ಏನಂದ್ರು?
/newsfirstlive-kannada/media/post_attachments/wp-content/uploads/2025/05/Orissa-Vigilance-Raid-3.jpg)
ಒಡಿಶಾದ ಗ್ರಾಮೀಣಾಭಿವೃದ್ದಿ ಇಲಾಖೆಯ ಮುಖ್ಯ ಇಂಜಿನಿಯರ್ ಬೈಕುನಾಥ್ ನಾಥ ಸಾರಂಗಿ ಮನೆ ಮೇಲೆ ವಿಜಿಲೆನ್ಸ್ ರೇಡ್ ಆಗಿದೆ. ಕೂಡಲೇ ಚೀಫ್ ಇಂಜಿನಿಯರ್ ಕೋಟ್ಯಾಂತರ ರೂಪಾಯಿ ನೋಟಿನ ಕಂತೆಯನ್ನು ಕಿಟಕಿ ಮೂಲಕ ಹೊರಗೆ ಎಸೆದಿದ್ದಾರೆ.
/newsfirstlive-kannada/media/post_attachments/wp-content/uploads/2025/05/Orissa-Vigilance-Raid-7.jpg)
ವಿಚಕ್ಷಣ ಅಧಿಕಾರಿಗಳ ರೇಡ್ ವೇಳೆ 500 ರೂಪಾಯಿ ನೋಟುಗಳ ಕಂತೆಯನ್ನು ಮುಖ್ಯ ಇಂಜಿನಿಯರ್ ಬೈಕುನಾಥ್ ನಾಥ ಸಾರಂಗಿ ಅವರು ಕಿಟಕಿಯಿಂದ ಹೊರಗೆ ಎಸೆದಿದ್ದು, ವಶಕ್ಕೆ ಪಡೆಯಲಾಗಿದೆ.
/newsfirstlive-kannada/media/post_attachments/wp-content/uploads/2025/05/Orissa-Vigilance-Raid-1.jpg)
ಚೀಫ್ ಇಂಜಿನಿಯರ್ ಪ್ಲ್ಯಾಟ್ನ ಕಿಟಕಿಯಿಂದ ಹೊರಗೆ ಎಸೆದ ಹಣವನ್ನು ವಿಜಿಲೆನ್ಸ್ ಅಧಿಕಾರಿಗಳು ಕೂಡಲೇ ವಶಪಡಿಸಿಕೊಂಡಿದ್ದಾರೆ. ಈಗ ಸುಮಾರು 2 ಕೋಟಿ ರೂಪಾಯಿ ನಗದು ಸೇರಿದಂತೆ ಪ್ಲ್ಯಾಟ್ ಮತ್ತು ಮನೆಯಲ್ಲಿ ಸಿಕ್ಕ ಹಣವನ್ನು ಎಣಿಸುವ ಕಾರ್ಯ ಮುಂದುವರಿದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us