ಜನವರಿ 22 ರಂದು ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ
ಆಹ್ವಾನ ಸ್ವೀಕರಿಸಿದ ಐವರು ನ್ಯಾಯಮೂರ್ತಿಗಳು ಯಾರು?
2019, ನವೆಂಬರ್ನಲ್ಲಿ ಐತಿಹಾಸಿಕ ತೀರ್ಪು ಪ್ರಕಟವಾಗಿತ್ತು
ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಭಾಗಿಯಾಗುವಂತೆ ಕೋರಿ ಸುಪ್ರೀಂ ಕೋರ್ಟ್ನ ಐವರು ನ್ಯಾಯಮೂರ್ತಿಗಳಿಗೆ ಆಹ್ವಾನ ನೀಡಲಾಗಿದೆ.
ಚೀಫ್ ಜಸ್ಟೀಸ್ ಆಫ್ ಇಂಡಿಯಾ ಚಂದ್ರಚೂಡ್, ನಿವೃತ್ತ ಚೀಫ್ ಜಸ್ಟೀಸ್ ಆಫ್ ಇಂಡಿಯಾದ ರಂಜನ್ ಗೊಗೊಯಿ, ಎಸ್ಎ ಬೋಬ್ಡೆ, ನಿವೃತ್ತ ನ್ಯಾಯಮೂರ್ತಿಗಳಾದ ಅಶೋಬ್ ಭೂಷಣ್, ಎಸ್, ಅಬ್ದುಲ್ ನಜೀರ್ ಅವರಿಗೆ ಆಯೋಧ್ಯೆ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ ನೀಡಲಾಗಿದೆ. ವಿವಾದಿತ ಅಯೋಧ್ಯೆ ರಾಮ ಜನ್ಮಭೂಮಿ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ನ ಸಾಂವಿಧಾನಿಕ ಪೀಠವು 2019, ನವೆಂಬರ್ 9 ರಂದು ಐತಿಹಾಸಿಕ ತೀರ್ಪು ನೀಡಿತ್ತು. ಈ ಪೀಠದಲ್ಲಿದ್ದ ಐವರು ನ್ಯಾಯಮೂರ್ತಿಗಳಿಗೆ ಆಹ್ವಾನ ನೀಡಲಾಗಿದೆ.
ರಾಮ ಮಂದಿರ ನಿರ್ಮಾಣ ಮಾಡಲು ಸರ್ಕಾರ ರಚಿಸಿದ್ದ ಟ್ರಸ್ಟ್ಗೆ ಇವರು ನೀಡಿದ್ದ ತೀರ್ಪು ಪ್ರೇರಣೆ ಆಯಿತು. ವಿವಾದಿತ ಜಾಗದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಹಾಗೂ ಮಸೀದಿ ನಿರ್ಮಿಸಲು ಪರ್ಯಾಯ ಭೂಮಿ ನೀಡಲು ಅಂದು ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ರಾಮ ಮಂದಿರ ನಿರ್ಮಾಣ ಮಾಡಲು ಟ್ರಸ್ಟ್ ರಚಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಕೋರ್ಟ್ ಸೂಚಿಸಿತ್ತು. ಮಂದಿರ ನಿರ್ಮಾಣದ ಹೊಣೆ ಸರ್ಕಾರಕ್ಕೆ, ಅದನ್ನು ನಿರ್ವಹಣೆ ಮಾಡಬೇಕಾದ ಹೊಣೆಯನ್ನು ಟ್ರಸ್ಟ್ಗೆ ಸುಪ್ರೀಂ ಕೋರ್ಟ್ ನೀಡಿತ್ತು. ಈ ಮೂಲಕ ವಿವಾದಿತ ಜಮೀನು ರಾಮಲಲ್ಲಾಗೆ ಸೇರಿದ್ದು, ಮಂದಿರ ನಿರ್ಮಾಣಕ್ಕೆ ನಿಯಮ ರೂಪಿಸಿ ಎಂದು ಸಾಂವಿಧಾನಿಕ ಪೀಠ ಆದೇಶ ನೀಡಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಜನವರಿ 22 ರಂದು ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ
ಆಹ್ವಾನ ಸ್ವೀಕರಿಸಿದ ಐವರು ನ್ಯಾಯಮೂರ್ತಿಗಳು ಯಾರು?
2019, ನವೆಂಬರ್ನಲ್ಲಿ ಐತಿಹಾಸಿಕ ತೀರ್ಪು ಪ್ರಕಟವಾಗಿತ್ತು
ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಭಾಗಿಯಾಗುವಂತೆ ಕೋರಿ ಸುಪ್ರೀಂ ಕೋರ್ಟ್ನ ಐವರು ನ್ಯಾಯಮೂರ್ತಿಗಳಿಗೆ ಆಹ್ವಾನ ನೀಡಲಾಗಿದೆ.
ಚೀಫ್ ಜಸ್ಟೀಸ್ ಆಫ್ ಇಂಡಿಯಾ ಚಂದ್ರಚೂಡ್, ನಿವೃತ್ತ ಚೀಫ್ ಜಸ್ಟೀಸ್ ಆಫ್ ಇಂಡಿಯಾದ ರಂಜನ್ ಗೊಗೊಯಿ, ಎಸ್ಎ ಬೋಬ್ಡೆ, ನಿವೃತ್ತ ನ್ಯಾಯಮೂರ್ತಿಗಳಾದ ಅಶೋಬ್ ಭೂಷಣ್, ಎಸ್, ಅಬ್ದುಲ್ ನಜೀರ್ ಅವರಿಗೆ ಆಯೋಧ್ಯೆ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ ನೀಡಲಾಗಿದೆ. ವಿವಾದಿತ ಅಯೋಧ್ಯೆ ರಾಮ ಜನ್ಮಭೂಮಿ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ನ ಸಾಂವಿಧಾನಿಕ ಪೀಠವು 2019, ನವೆಂಬರ್ 9 ರಂದು ಐತಿಹಾಸಿಕ ತೀರ್ಪು ನೀಡಿತ್ತು. ಈ ಪೀಠದಲ್ಲಿದ್ದ ಐವರು ನ್ಯಾಯಮೂರ್ತಿಗಳಿಗೆ ಆಹ್ವಾನ ನೀಡಲಾಗಿದೆ.
ರಾಮ ಮಂದಿರ ನಿರ್ಮಾಣ ಮಾಡಲು ಸರ್ಕಾರ ರಚಿಸಿದ್ದ ಟ್ರಸ್ಟ್ಗೆ ಇವರು ನೀಡಿದ್ದ ತೀರ್ಪು ಪ್ರೇರಣೆ ಆಯಿತು. ವಿವಾದಿತ ಜಾಗದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಹಾಗೂ ಮಸೀದಿ ನಿರ್ಮಿಸಲು ಪರ್ಯಾಯ ಭೂಮಿ ನೀಡಲು ಅಂದು ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ರಾಮ ಮಂದಿರ ನಿರ್ಮಾಣ ಮಾಡಲು ಟ್ರಸ್ಟ್ ರಚಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಕೋರ್ಟ್ ಸೂಚಿಸಿತ್ತು. ಮಂದಿರ ನಿರ್ಮಾಣದ ಹೊಣೆ ಸರ್ಕಾರಕ್ಕೆ, ಅದನ್ನು ನಿರ್ವಹಣೆ ಮಾಡಬೇಕಾದ ಹೊಣೆಯನ್ನು ಟ್ರಸ್ಟ್ಗೆ ಸುಪ್ರೀಂ ಕೋರ್ಟ್ ನೀಡಿತ್ತು. ಈ ಮೂಲಕ ವಿವಾದಿತ ಜಮೀನು ರಾಮಲಲ್ಲಾಗೆ ಸೇರಿದ್ದು, ಮಂದಿರ ನಿರ್ಮಾಣಕ್ಕೆ ನಿಯಮ ರೂಪಿಸಿ ಎಂದು ಸಾಂವಿಧಾನಿಕ ಪೀಠ ಆದೇಶ ನೀಡಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ