ಯಲಹಂಕದ ಚೌಡೇಶ್ವರಿ ದೇವಾಲಯದಲ್ಲಿ ಕೊಂಡ ಹಾಯ್ದು ರಕ್ಷಾ ರಾಮಯ್ಯ
ಚಿಕ್ಕಬಳ್ಳಾಪುರ ಕ್ಷೇತ್ರದ ಜನತೆಗೆ ತಾಯಿ ಚೌಡೇಶ್ವರಿ ಸಕಲ ಸಮೃದ್ಧಿ ಕಲ್ಪಿಸಲಿ
ಕೈವಾರ ಯೋಗಿ ನಾರಾಯಣ ದೇವಾಲಯ, ಘಾಟಿ ಸುಬ್ರಮಣ್ಯಕ್ಕೆ ಭೇಟಿ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರು ಕೈವಾರದ ಯೋಗಿ ನಾರಾಯಣ ದೇವಾಲಯ, ಘಾಟಿ ಸುಬ್ರಮಣ್ಯ ಸೇರಿದಂತೆ ಹಲವು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಯಲಹಂಕದ ಚೌಡೇಶ್ವರಿ ದೇವಾಲಯದಲ್ಲಿ ಕೊಂಡ ಹಾಯ್ದ ರಕ್ಷಾ ರಾಮಯ್ಯ, ನಾಡಿನಲ್ಲಿ ಮಳೆ, ಬೆಳೆಯಾಗಿ ಸಮೃದ್ಧಿ ನೆಲಸಲಿ, ಚಿಕ್ಕಬಳ್ಳಾಪುರ ಕ್ಷೇತ್ರದ ಜನತೆಗೆ ತಾಯಿ ಚೌಡೇಶ್ವರಿ ಸಕಲ ಸಮೃದ್ಧಿ ಕಲ್ಪಿಸಲಿ ಎಂದು ಪ್ರಾರ್ಥಿಸಿದರು.
ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಮಧುರೆ ಶನೇಶ್ವರ ಸ್ವಾಮಿ ಸೇರಿ ವಿವಿಧ ದೇವಾಲಯಗಳಿಗೆ ತೆರಳಿ, ಚಿಕ್ಕಬಳ್ಳಾಪುರ ಕ್ಷೇತ್ರದ ಜನರ ಹಿತ ರಕ್ಷಣೆಗಾಗಿ ಪೂಜೆ ಸಲ್ಲಿಸಿದರು.
ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ತನ್ನದೇ ಆದ ಹೆಗ್ಗುರುತುಗಳನ್ನು ಮೂಡಿಸಿರುವ ಎಂ.ಎಸ್. ರಾಮಯ್ಯ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಎಂ.ಆರ್. ಜಯರಾಂ, ವಿಧಾನಪರಿಷತ್ ಸದಸ್ಯರಾದ ಎಂ.ಆರ್ ಸೀತಾರಾಂ ಅವರ ಜೊತೆಗೂಡಿ ಕೈವಾರದಲ್ಲಿ ಕಾಲಜ್ಞಾನಿ ಕೈವಾರ ತಾತಯ್ಯನವರ ಆಶೀರ್ವಾದ ಪಡೆದರು. ಯುಗಾದಿ ಹಬ್ಬದ ಪ್ರಯುಕ್ತ ಕೈವಾರಕ್ಕೆ ಭೇಟಿ ನೀಡಿ ನಾಡಿನ ಜನರ ಯೋಗ ಕ್ಷೇಮ ಕಾಪಾಡುವಂತೆ ಕೈವಾರ ತಾತಯ್ಯನವರಲ್ಲಿ ಪ್ರಾರ್ಥಿಸಿದರು. ನಂತರ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಇದನ್ನೂ ಓದಿ: ಶ್ರೀಗಳು ಬಂದೋರಿಗೆ ಆಶೀರ್ವಾದ ಮಾಡಿ ವಿಭೂತಿ ಇಡ್ತಾರೆ ಅಷ್ಟೇ -ಟಾಂಗ್ ಕೊಟ್ಟ ಡಿ.ಕೆ.ಶಿವಕುಮಾರ್
ಇಡೀ ದಿನ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ಸಂಚರಿಸಿ ಪಕ್ಷದ ಪ್ರಮುಖ ನಾಯಕರು, ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿದರು. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಬೇವು ಬೆಲ್ಲ ಸವಿದು ಕಷ್ಟ ಸುಖ ಸಮನಾಗಿರಲಿ ಎಂದು ಶುಭಾಶಯ ವಿನಿಯಮ ಮಾಡಿಕೊಂಡರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಾದ್ಯಂತ ರಕ್ಷಾ ರಾಮಯ್ಯ ಅವರಿಗೆ ಅಭೂತಪೂರ್ವ ಬೆಂಬಲ ದೊರೆಯುತ್ತಿದೆ. ಯುವ ಸಮೂಹ, ಮಹಿಳೆಯರು, ಹಿರಿಯ ನಾಗರಿಕರು ರಕ್ಷಾ ರಾಮಯ್ಯ ಅವರ ಜೊತೆ ಸೆಲ್ಪಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಯಲಹಂಕದ ಚೌಡೇಶ್ವರಿ ದೇವಾಲಯದಲ್ಲಿ ಕೊಂಡ ಹಾಯ್ದು ರಕ್ಷಾ ರಾಮಯ್ಯ
ಚಿಕ್ಕಬಳ್ಳಾಪುರ ಕ್ಷೇತ್ರದ ಜನತೆಗೆ ತಾಯಿ ಚೌಡೇಶ್ವರಿ ಸಕಲ ಸಮೃದ್ಧಿ ಕಲ್ಪಿಸಲಿ
ಕೈವಾರ ಯೋಗಿ ನಾರಾಯಣ ದೇವಾಲಯ, ಘಾಟಿ ಸುಬ್ರಮಣ್ಯಕ್ಕೆ ಭೇಟಿ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರು ಕೈವಾರದ ಯೋಗಿ ನಾರಾಯಣ ದೇವಾಲಯ, ಘಾಟಿ ಸುಬ್ರಮಣ್ಯ ಸೇರಿದಂತೆ ಹಲವು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಯಲಹಂಕದ ಚೌಡೇಶ್ವರಿ ದೇವಾಲಯದಲ್ಲಿ ಕೊಂಡ ಹಾಯ್ದ ರಕ್ಷಾ ರಾಮಯ್ಯ, ನಾಡಿನಲ್ಲಿ ಮಳೆ, ಬೆಳೆಯಾಗಿ ಸಮೃದ್ಧಿ ನೆಲಸಲಿ, ಚಿಕ್ಕಬಳ್ಳಾಪುರ ಕ್ಷೇತ್ರದ ಜನತೆಗೆ ತಾಯಿ ಚೌಡೇಶ್ವರಿ ಸಕಲ ಸಮೃದ್ಧಿ ಕಲ್ಪಿಸಲಿ ಎಂದು ಪ್ರಾರ್ಥಿಸಿದರು.
ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಮಧುರೆ ಶನೇಶ್ವರ ಸ್ವಾಮಿ ಸೇರಿ ವಿವಿಧ ದೇವಾಲಯಗಳಿಗೆ ತೆರಳಿ, ಚಿಕ್ಕಬಳ್ಳಾಪುರ ಕ್ಷೇತ್ರದ ಜನರ ಹಿತ ರಕ್ಷಣೆಗಾಗಿ ಪೂಜೆ ಸಲ್ಲಿಸಿದರು.
ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ತನ್ನದೇ ಆದ ಹೆಗ್ಗುರುತುಗಳನ್ನು ಮೂಡಿಸಿರುವ ಎಂ.ಎಸ್. ರಾಮಯ್ಯ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಎಂ.ಆರ್. ಜಯರಾಂ, ವಿಧಾನಪರಿಷತ್ ಸದಸ್ಯರಾದ ಎಂ.ಆರ್ ಸೀತಾರಾಂ ಅವರ ಜೊತೆಗೂಡಿ ಕೈವಾರದಲ್ಲಿ ಕಾಲಜ್ಞಾನಿ ಕೈವಾರ ತಾತಯ್ಯನವರ ಆಶೀರ್ವಾದ ಪಡೆದರು. ಯುಗಾದಿ ಹಬ್ಬದ ಪ್ರಯುಕ್ತ ಕೈವಾರಕ್ಕೆ ಭೇಟಿ ನೀಡಿ ನಾಡಿನ ಜನರ ಯೋಗ ಕ್ಷೇಮ ಕಾಪಾಡುವಂತೆ ಕೈವಾರ ತಾತಯ್ಯನವರಲ್ಲಿ ಪ್ರಾರ್ಥಿಸಿದರು. ನಂತರ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಇದನ್ನೂ ಓದಿ: ಶ್ರೀಗಳು ಬಂದೋರಿಗೆ ಆಶೀರ್ವಾದ ಮಾಡಿ ವಿಭೂತಿ ಇಡ್ತಾರೆ ಅಷ್ಟೇ -ಟಾಂಗ್ ಕೊಟ್ಟ ಡಿ.ಕೆ.ಶಿವಕುಮಾರ್
ಇಡೀ ದಿನ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ಸಂಚರಿಸಿ ಪಕ್ಷದ ಪ್ರಮುಖ ನಾಯಕರು, ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿದರು. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಬೇವು ಬೆಲ್ಲ ಸವಿದು ಕಷ್ಟ ಸುಖ ಸಮನಾಗಿರಲಿ ಎಂದು ಶುಭಾಶಯ ವಿನಿಯಮ ಮಾಡಿಕೊಂಡರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಾದ್ಯಂತ ರಕ್ಷಾ ರಾಮಯ್ಯ ಅವರಿಗೆ ಅಭೂತಪೂರ್ವ ಬೆಂಬಲ ದೊರೆಯುತ್ತಿದೆ. ಯುವ ಸಮೂಹ, ಮಹಿಳೆಯರು, ಹಿರಿಯ ನಾಗರಿಕರು ರಕ್ಷಾ ರಾಮಯ್ಯ ಅವರ ಜೊತೆ ಸೆಲ್ಪಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ