ಮೃತದೇಹಗಳ ಗುರುತು ಸಿಗದಿದ್ದಕ್ಕೆ ಸಂಬಂಧಿಕರ ಗೋಳಾಟ
ಆಸ್ಪತ್ರೆಗೆ ಭೇಟಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ
ನಿನ್ನೆಯಿಂದಲೂ ಇದುವರೆಗೂ ರಕ್ಷಣೆ ಕಾರ್ಯ ಮಾಡಲಾಗ್ತಿದೆ
ಗಾಂಧಿನಗರ: ಗುಜರಾತ್ನ ರಾಜ್ಕೋಟ್ನ ಗೇಮಿಂಗ್ ಝೋನ್ನಲ್ಲಿ ಭಾರೀ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ ಮತ್ತೆ ಏರಿಕೆಯಾಗಿದೆ. 9 ಮಕ್ಕಳು ಸೇರಿ ಒಟ್ಟು 32 ಜನರು ಸಾವನ್ನಪ್ಪಿರುವ ಮಾಹಿತಿ ಇದೀಗ ತಿಳಿದು ಬಂದಿದೆ.
ಇದನ್ನೂ ಓದಿ: ಮಕ್ಕಳ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ.. ಪ್ರಪಂಚ ನೋಡೋ ಮುನ್ನವೇ 7 ನವಜಾತ ಶಿಶುಗಳು ಸಾವು
ಘಟನೆಯಲ್ಲಿ ಬೆಂಕಿಯಿಂದ ಸುಟ್ಟು ಹೋದವರ ಮೃತದೇಹಗಳನ್ನು ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಬೆಡ್ಶೀಟ್ ಹಾಗೂ ಮೂಟೆಯಲ್ಲಿ ಕಟ್ಟಿಕೊಂಡು ಹೊರಕ್ಕೆ ತಂದಿದ್ದರು. ಹೀಗಾಗಿ ಮೃತಪಟ್ಟವರು ಯಾರು ಯಾರು ಎಂದು ಸರಿಯಾಗಿ ಗೊತ್ತಾಗುತ್ತಿಲ್ಲ. ಎಲ್ಲ ಮೃತದೇಹಗಳ ಡಿಎನ್ಎ ಪರೀಕ್ಷೆ ಮಾಡಿ ಅವರವರ ಕುಟುಂಬಗಳಿಗೆ ಅಸ್ತಾಂತರ ಮಾಡಲಾಗುವುದು. ಇನ್ನು ಘಟನೆಯಲ್ಲಿ ಗಾಯಗೊಂಡವರ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ನಿನ್ನೆಯಿಂದಲೂ ರಕ್ಷಣಾ ಕಾರ್ಯ ಇದುವರೆಗೂ ನಡೆಯುತ್ತಿದೆ ಎಂದು ಎಸಿಪಿ ವಿನಾಯಕ ಪಟೇಲ್ ಹೇಳಿದ್ದಾರೆ.
ಇದನ್ನೂ ಓದಿ: 9 ಮಕ್ಕಳು ಸೇರಿ 27 ಜನ ಬೆಂಕಿಯಲ್ಲಿ ಸಜೀವ ದಹನ.. ಮೃತದೇಹಗಳನ್ನು ಮೂಟೆಯಲ್ಲಿ ಕಟ್ಟಿ ತಂದ ಸಿಬ್ಬಂದಿ
ಗುಜರಾತ್ ಸಿಎಂ ಭೂಪೆಂದ್ರಭಾಯ್ ಪಟೇಲ್ ಅವರು ನಾನಾ ಮಾವ ರಸ್ತೆಯಲ್ಲಿರುವ ಆಸ್ಪತ್ರೆಗೆ ಭೇಟಿ ನೀಡಿದ್ದು ಗಾಯಾಳುಗಳ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಇನ್ನೂ ಭೀಕರ ದುರಂತಕ್ಕೆ ಸಂಬಂಧಿಸಿದಂತೆ ಕಂಪನಿಯ ಮಾಲೀಕರು, ನಿರ್ದೇಶಕರು, ನಿರ್ವಹಣಾ ಸಿಬ್ಬಂದಿ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಈ ಬೆನ್ನಲ್ಲೇ ಟಿಆರ್ಪಿ ಗೇಮ್ ಝೋನ್ನ ಮಾಲೀಕರು ಮತ್ತು ವ್ಯವಸ್ಥಾಪಕ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇನ್ನು ವಿಷಯ ತಿಳಿದು ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 4 ಲಕ್ಷ ಪರಿಹಾರ ಮತ್ತು ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಘೋಷಿಸಿದ್ದಾರೆ. 65ಕ್ಕೂ ಅಧಿಕ ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ದುರಂತದಲ್ಲಿ ಸಾವಿನ ಸಂಖ್ಯೆ ಇನ್ನಷ್ಟು ಏರುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮೃತದೇಹಗಳ ಗುರುತು ಸಿಗದಿದ್ದಕ್ಕೆ ಸಂಬಂಧಿಕರ ಗೋಳಾಟ
ಆಸ್ಪತ್ರೆಗೆ ಭೇಟಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ
ನಿನ್ನೆಯಿಂದಲೂ ಇದುವರೆಗೂ ರಕ್ಷಣೆ ಕಾರ್ಯ ಮಾಡಲಾಗ್ತಿದೆ
ಗಾಂಧಿನಗರ: ಗುಜರಾತ್ನ ರಾಜ್ಕೋಟ್ನ ಗೇಮಿಂಗ್ ಝೋನ್ನಲ್ಲಿ ಭಾರೀ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ ಮತ್ತೆ ಏರಿಕೆಯಾಗಿದೆ. 9 ಮಕ್ಕಳು ಸೇರಿ ಒಟ್ಟು 32 ಜನರು ಸಾವನ್ನಪ್ಪಿರುವ ಮಾಹಿತಿ ಇದೀಗ ತಿಳಿದು ಬಂದಿದೆ.
ಇದನ್ನೂ ಓದಿ: ಮಕ್ಕಳ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ.. ಪ್ರಪಂಚ ನೋಡೋ ಮುನ್ನವೇ 7 ನವಜಾತ ಶಿಶುಗಳು ಸಾವು
ಘಟನೆಯಲ್ಲಿ ಬೆಂಕಿಯಿಂದ ಸುಟ್ಟು ಹೋದವರ ಮೃತದೇಹಗಳನ್ನು ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಬೆಡ್ಶೀಟ್ ಹಾಗೂ ಮೂಟೆಯಲ್ಲಿ ಕಟ್ಟಿಕೊಂಡು ಹೊರಕ್ಕೆ ತಂದಿದ್ದರು. ಹೀಗಾಗಿ ಮೃತಪಟ್ಟವರು ಯಾರು ಯಾರು ಎಂದು ಸರಿಯಾಗಿ ಗೊತ್ತಾಗುತ್ತಿಲ್ಲ. ಎಲ್ಲ ಮೃತದೇಹಗಳ ಡಿಎನ್ಎ ಪರೀಕ್ಷೆ ಮಾಡಿ ಅವರವರ ಕುಟುಂಬಗಳಿಗೆ ಅಸ್ತಾಂತರ ಮಾಡಲಾಗುವುದು. ಇನ್ನು ಘಟನೆಯಲ್ಲಿ ಗಾಯಗೊಂಡವರ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ನಿನ್ನೆಯಿಂದಲೂ ರಕ್ಷಣಾ ಕಾರ್ಯ ಇದುವರೆಗೂ ನಡೆಯುತ್ತಿದೆ ಎಂದು ಎಸಿಪಿ ವಿನಾಯಕ ಪಟೇಲ್ ಹೇಳಿದ್ದಾರೆ.
ಇದನ್ನೂ ಓದಿ: 9 ಮಕ್ಕಳು ಸೇರಿ 27 ಜನ ಬೆಂಕಿಯಲ್ಲಿ ಸಜೀವ ದಹನ.. ಮೃತದೇಹಗಳನ್ನು ಮೂಟೆಯಲ್ಲಿ ಕಟ್ಟಿ ತಂದ ಸಿಬ್ಬಂದಿ
ಗುಜರಾತ್ ಸಿಎಂ ಭೂಪೆಂದ್ರಭಾಯ್ ಪಟೇಲ್ ಅವರು ನಾನಾ ಮಾವ ರಸ್ತೆಯಲ್ಲಿರುವ ಆಸ್ಪತ್ರೆಗೆ ಭೇಟಿ ನೀಡಿದ್ದು ಗಾಯಾಳುಗಳ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಇನ್ನೂ ಭೀಕರ ದುರಂತಕ್ಕೆ ಸಂಬಂಧಿಸಿದಂತೆ ಕಂಪನಿಯ ಮಾಲೀಕರು, ನಿರ್ದೇಶಕರು, ನಿರ್ವಹಣಾ ಸಿಬ್ಬಂದಿ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಈ ಬೆನ್ನಲ್ಲೇ ಟಿಆರ್ಪಿ ಗೇಮ್ ಝೋನ್ನ ಮಾಲೀಕರು ಮತ್ತು ವ್ಯವಸ್ಥಾಪಕ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇನ್ನು ವಿಷಯ ತಿಳಿದು ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 4 ಲಕ್ಷ ಪರಿಹಾರ ಮತ್ತು ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಘೋಷಿಸಿದ್ದಾರೆ. 65ಕ್ಕೂ ಅಧಿಕ ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ದುರಂತದಲ್ಲಿ ಸಾವಿನ ಸಂಖ್ಯೆ ಇನ್ನಷ್ಟು ಏರುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ