/newsfirstlive-kannada/media/post_attachments/wp-content/uploads/2024/04/Chitradurga-3.jpg)
ಚಿತ್ರದುರ್ಗ: ಚುನಾವಣಾ ಕರ್ತವ್ಯದ ವೇಳೆ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮೇಗಳ ಗೊಲ್ಲರ ಹಟ್ಟಿಯಲ್ಲಿ ನಡೆದಿದೆ. ಸಾವನ್ನಪ್ಪಿದ ಸಿಬ್ಬಂದಿಯನ್ನು APRO ಯಶೋಧ (55) ಎಂದು ಗುರುತಿಸಲಾಗಿದೆ.
ಯಶೋಧ ಮತಗಟ್ಟೆ ಸಂಖ್ಯೆ 202 ರಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದರು. ಈ ವೇಳೆ APRO ಯಶೋದಮ್ಮ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಮತದಾನ ಮಾಡಿ ಮತಗಟ್ಟೆಯಿಂದ ಹೊರ ಬರುತ್ತಿದ್ದಂತೆ ವೃದ್ಧೆ ಸಾವು
ಯಶೋಧಮ್ಮ ಬೊಮ್ಮಸಮುದ್ರ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಚಳ್ಳಕೆರೆ ತಾಲ್ಲೂಕು ಆಸ್ಪತ್ರೆಗೆ ಯಶೋಧಮ್ಮ ಮೃತದೇಹ ರವಾನಿಸಲಾಗಿದೆ. ಶಾಸಕ ರಘುಮೂರ್ತಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us