Advertisment

‘ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ..’ ಜೈಲಿನಿಂದಲೇ ಭಾವನಾತ್ಮಕವಾಗಿ ಪತ್ರ ಬರೆದ ದರ್ಶನ್

ಡಿಸೆಂಬರ್ 11 ರಂದು ದರ್ಶನ್ ನಟನೆಯ ‘ದಿ ಡೆವಿಲ್’ ಚಿತ್ರ ರಿಲೀಸ್ ಆಗ್ತಿದೆ. ದರ್ಶನ್ ಅಭಿಮಾನಿಗಳಿಗೆ ಹಬ್ಬದ ಸಡಗರ. ಆದರೆ ತಮ್ಮ ನೆಚ್ಚಿನ ನಟ ಜೈಲಲ್ಲಿ ಇರೋದು ತುಂಬಾನೇ ಬೇಸರ ಇದೆ. ಇದೇ ಕಾರಣಕ್ಕೆ ಅಭಿಮಾನಿಗಳನ್ನ ಹುರಿದುಂಬಿಸುವ ಉದ್ದೇಶದಿಂದ ದರ್ಶನ್ ಪತ್ರ ಭಾವನಾತ್ಮಕವಾಗಿ ಬರೆದಿದ್ದಾರೆ.

author-image
Ganesh Kerekuli
Darshan (3)
Advertisment

ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ (Actor Darshan) ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ಮಧ್ಯೆ ಡಿಸೆಂಬರ್ 11 ರಂದು ‘ದಿ ಡೆವಿಲ್’ (The Devil) ಸಿನಿಮಾ ರಿಲೀಸ್ ಆಗಲಿದೆ. ದರ್ಶನ್ ಅನುಪಸ್ಥಿತಿಯಲ್ಲಿ ಡೆವಿಲ್ ಚಿತ್ರ ರಿಲೀಸ್ ಆಗ್ತಿದ್ದು, ಅವರ ಅಭಿಮಾನಿಗಳಲ್ಲಿ ಬೇಸರ ಮೂಡಿದೆ. 

Advertisment

ಹೀಗಾಗಿ ಜೈಲಿನಿಂದಲೇ ದರ್ಶನ್ ತಮ್ಮ ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ. ದರ್ಶನ್ ತಮ್ಮ ಪತ್ನಿ ವಿಜಯಲಕ್ಷ್ಮೀ ಮೂಲಕ ಅಭಿಮಾನಿಗಳಿಗೆ ಭಾವನಾತ್ಮಕ ಪತ್ರವನ್ನು ತಲುಪಿಸಿದ್ದಾರೆ. ಅದನ್ನು ವಿಜಯಲಕ್ಷ್ಮೀ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿದ್ದಾರೆ. 

ಇದನ್ನೂ ಓದಿ:ಶಿರಡಿ ಸಾಯಿಬಾಬಾಗೆ ಚಿನ್ನದ ಕಿರೀಟ ನೀಡಿದ ನಟಿ ಮಾಲಾಶ್ರೀ

Darshan (2)

ಪತ್ರದಲ್ಲಿ ಏನಿದೆ..? 

ನನ್ನ ಹೃದಯದಿಂದ ಈ ಸಂದೇಶ ಕಳುಹಿಸುತ್ತಿದ್ದೇನೆ.. ವಿಜಿ ನಿಮ್ಮೆಲ್ಲರಿಗೂ ನನ್ನ ಸಂದೇಶವನ್ನು ತಲುಪಿಸುತ್ತಾಳೆ.. ನಿಮ್ಮೆಲ್ಲರ ಪ್ರೀತಿ, ಕಾಳಜಿ, ಬೆಂಬಲ, ನನ್ನ ಸಿನಿಮಾ ಪ್ರಚಾರ ಬಗ್ಗೆ ಪ್ರತಿ ಬಾರಿಯೂ ವಿಜಿ ತಿಳಿಸುತ್ತಿದ್ದಾಳೆ. ದೂರ ಇದ್ದರೂ ಪ್ರತಿ ಕ್ಷಣವೂ ನಿಮ್ಮ ಉಪಸ್ಥಿತಿಯನ್ನು ನಾನು ಅನುಭವಿಸುತ್ತೇನೆ.

ನಾನು ಹೇಳೋದು ಏನೆಂದರೆ ಯಾರು ಏನೇ ಹೇಳಿದರೂ ಚಿಂತಿಸಬೇಡಿ. ಯಾವುದೇ ವದಂತಿ, ನೆಗೆಟಿವಿಟಿಗೆ ಕಿವಿಕೊಡಬೇಡಿ. ನೀವು ನನ್ನ ಶಕ್ತಿ, ನೀವು ನನ್ನ ಕುಟುಂಬ. ನೀವು ನನ್ನ ಮೇಲೆ ಇಟ್ಟಿರುವ ನಂಬಿಕೆಯಿಂದಾಗಿ ನಾನು ನಿಂತಿದ್ದೇನೆ. ನನ್ನ ಜೀವನದ ಈ ಹಂತದಲ್ಲಿ,  ದೊಡ್ಡ ಶಕ್ತಿ ನೀವೇ. ಈ ಸಮಯದಲ್ಲಿ ನಾನು ಬಯಸುವುದು ಒಂದೇ. ನಮ್ಮ ಡೆವಿಲ್‌ ಸಿನಿಮಾ ಕಡೆಗೆ ಗಮನ ಹರಿಸಬೇಕು. ನನಗೆ ತೋರಿಸಿದ ಪ್ರೀತಿಯನ್ನು ಡೆವಿಲ್​ಗೂ ತೋರಿಸಿ. 

ನನ್ನ ಅನುಪಸ್ಥಿತಿಯಲ್ಲಿಯೂ ಸಹ, ನೀವು ಪ್ರತಿಯೊಂದು ಪ್ರಶ್ನೆಗೆ, ಅನುಮಾನಕ್ಕೆ, ಧ್ವನಿಗೆ ಉತ್ತರಿಸಬೇಕು. ನನ್ನ ಸಿನಿಮಾಗೆ ನೀವು ಮಾಡ್ತಿರೋ ಪ್ರಚಾರ, ಶ್ರಮ ಮತ್ತು ನಿಮ್ಮ ಒಗ್ಗಟ್ಟಿನ ಬಗ್ಗೆ ಕೇಳಿದಾಗ ನನಗೆ ಹೆಮ್ಮೆ ಮತ್ತು ಭಾವುಕನಗುತ್ತೇನೆ. ನಿಮ್ಮನ್ನೆಲ್ಲ ಮತ್ತೆ ಭೇಟಿಯಾಗುವ ದಿನಕ್ಕಾಗಿ ಕಾಯುತ್ತಿರೋದೇ ಖುಷಿ ಕೊಡ್ತಿದೆ.

ನನ್ನ ಸುತ್ತಲೂ ಗೋಡೆಯಂತೆ ನಿಂತಿದ್ದಕ್ಕಾಗಿ ಧನ್ಯವಾದಗಳು. ನೀವು ನನ್ನನ್ನು ಎಷ್ಟು ನಂಬುತ್ತಿರೋ ನಾನು ನನ್ನ ಸೆಲೆಬ್ರಿಟಿಗಳನ್ನ ಅಷ್ಟೇ ನಂಬುತ್ತಿನಿ. ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಎಲ್ಲವನ್ನೂ ಉತ್ತರಿಸುತ್ತದೆ. ಅಲ್ಲಿವರೆಗೂ ತಲೆಯನ್ನೆತ್ತಿ, ಹೃದಯ ಬಲವಾಗಿರಲಿ, ಪ್ರೀತಿ ಅಚಲವಾಗಿರಲಿ.

ನಿಮ್ಮ ಪ್ರೀತಿಯ ದಾಸ, ದರ್ಶನ್

ಜೈಲಿನಲ್ಲಿ ದರ್ಪ ಆರೋಪ ಸುಳ್ಳು ಎಂದ ವಿಜಯಲಕ್ಷ್ಮೀ

ದರ್ಶನ್ ಮೇಲಿನ ಆರೋಪಗಳು ನಕಲಿ, ಆಧಾರರಹಿತ ಮತ್ತು ದುರುದ್ದೇಶಪೂರಿತವಾಗಿದೆ. ನಾನೇ ಖುದ್ದಾಗಿ ಜೈಲಿಗೆ ತೆರಳಿ ಈ ಬಗ್ಗೆ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ ಅಂತ ವಿಜಯಲಕ್ಷ್ಮಿ ಸ್ಪಷ್ಟಪಡಿಸಿದ್ದಾರೆ. ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್​ ಹಾಕಿರುವ ವಿಜಯಲಕ್ಷ್ಮಿ, ಸತ್ಯವು ಸ್ವಲ್ಪ ಸಮಯದವರೆಗೆ ಮೌನವಾಗಿರಬಹುದು, ಆದರೆ ಅದು ಎಂದಿಗೂ ತಲೆಬಾಗುವುದಿಲ್ಲ. ಸುಳ್ಳುಗಳು ಜೋರಾಗಿ ಇರುತ್ತವೆ. ಆದರೆ ಅದು ಕೆಲವು ಸಮಯ ಅಂತ ವಿರೋಧಿಗಳಿಗೆ ವಿಜಯಲಕ್ಷ್ಮಿ ತಿರುಗೇಟು ನೀಡಿದ್ದಾರೆ. ರೇಣುಕಾಸ್ವಾಮಿ ಕೇಸ್‌ನಲ್ಲಿ ಆರೋಪಿಗಳಾಗಿರುವ ಅನುಕುಮಾರ್, ಜಗ್ಗ, ನಾಗರಾಜು, ಪ್ರದೋಶ್, ಲಕ್ಷ್ಮಣ್ ಅವರ ಮೇಲೆ ದರ್ಪ ತೋರುತ್ತಿದ್ದಾರೆ ಎಂದು ವರದಿಯಾಗಿತ್ತು.

Advertisment

ಇದನ್ನೂ ಓದಿ: ದರ್ಶನ್ ವಿರುದ್ಧ ಹಲ್ಲೆ ಆರೋಪ - ವಿಜಯಲಕ್ಷ್ಮೀ ದಿಢೀರ್​ ಜೈಲಿಗೆ ಭೇಟಿ, ಬಳಿಕ ಹೇಳಿದ್ದೇನು?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Actor Darshan Devil Movie Vijayalakshmi darshan devil film Devil trailer
Advertisment
Advertisment
Advertisment