/newsfirstlive-kannada/media/media_files/2025/09/15/rebal-star-ambaish-2025-09-15-12-55-24.jpg)
ಇತ್ತಿಚೆಗೆ ಕರ್ನಾಟಕ ಸರ್ಕಾರ ಸಾಹಸ ಸಿಂಹ ವಿಷ್ಣುವರ್ಧನ್ (Vishnuvardhan) ಹಾಗೂ ಹಿರಿಯ ನಟಿ ಸರೋಜಾ ದೇವಿ (Saroja Devi)ಗೆ ಮರಣೋತ್ತರ ‘ಕರ್ನಾಟಕ ರತ್ನ’ ಗೌರವ ಘೋಷಣೆ ಮಾಡಿದೆ. ಬೆನ್ನಲ್ಲೇ ರೆಬೆಲ್​ ಸ್ಟಾರ್ ಅಂಬರೀಶ್​ (Ambarish) ಅವರಿಗೂ ‘ಕರ್ನಾಟಕ ರತ್ನ’ (karnataka rathan) ನೀಡುವಂತೆ ಕೂಗು ಕೇಳಿ ಬಂದಿದೆ.
ಇವತ್ತು ಹಿರಿಯ ನಟಿ ತಾರಾ ಅನುರಾಧ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿಯಾದರು. ಭೇಟಿ ವೇಳೆ ಅಂಬರೀಶ್ ಅವರಿಗೂ ಕರ್ನಾಟಕ ರತ್ನ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
/filters:format(webp)/newsfirstlive-kannada/media/media_files/2025/09/15/dk-shivakumar-and-tara-anuradha-2025-09-15-13-08-31.jpg)
ಅಂಬಿ ಫ್ಯಾನ್ಸ್​ ಪರ ತಾರಾ ಮನವಿ
ಅಂಬರೀಶ್​ಗೆ ಕರ್ನಾಟಕ ರತ್ನ ನೀಡಬೇಕು ಅನ್ನೋದು ಅಂಬಿ ಅಭಿಮಾನಿಗಳ ಒತ್ತಾಸೆ. ನೀವೂ ಕೂಡ (ಡಿಕೆ ಶಿವಕುಮಾರ್) ಅಂಬಿ ಅವರನ್ನ ತುಂಬಾ ಹತ್ತಿರದಿಂದ ಕಂಡಿದ್ದೀರಾ. ವಿಷ್ಣುವರ್ಧನ್​ ಹಾಗೂ ಸರೋಜಾದೇವಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿರೊದು ಬಹಳ ಸಂತೋಷದ ಸುದ್ದಿ. ಜೊತೆಗೆ ಅಂಬರೀಶ್​ಗೂ ಕರ್ನಾಟಕ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿ ಎಂದು ತಾರಾ ಅನುರಾಧ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:8 ವರ್ಷಗಳ ವಿರಾಮದ ಬಳಿಕ ‘ಪೀಕಬೂ’ ಎಂದ ಗೋಲ್ಡನ್ ಕ್ವೀನ್.. VIDEO
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us