ರೆಬಲ್ ಸ್ಟಾರ್​ ಅಂಬಿಗೂ ಕರ್ನಾಟಕ ರತ್ನ ನೀಡುವಂತೆ ಆಗ್ರಹ

ವಿಷ್ಣುವರ್ಧನ್ ಆಯ್ತು, ಈಗ ರೆಬಲ್ ಸ್ಟಾರ್​ ಅಂಬರೀಶ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಅಂಬಿ ಅಭಿಮಾನಿಗಳು ಆಗ್ರಹಿಸಿದ್ದಾರೆ. ಇವತ್ತು ರೆಬಲ್ ಸ್ಟಾರ್​ ಅಭಿಮಾನಿಗಳ ಪರವಾಗಿ ಹಿರಿಯ ನಟಿ ತಾರಮ್ಮ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರು.

author-image
Ganesh Kerekuli
rebal star ambaish
Advertisment

ಇತ್ತಿಚೆಗೆ ಕರ್ನಾಟಕ ಸರ್ಕಾರ ಸಾಹಸ ಸಿಂಹ ವಿಷ್ಣುವರ್ಧನ್ (Vishnuvardhan) ಹಾಗೂ ಹಿರಿಯ ನಟಿ ಸರೋಜಾ ದೇವಿ (Saroja Devi)ಗೆ ಮರಣೋತ್ತರ ‘ಕರ್ನಾಟಕ ರತ್ನ’ ಗೌರವ ಘೋಷಣೆ ಮಾಡಿದೆ. ಬೆನ್ನಲ್ಲೇ ರೆಬೆಲ್​ ಸ್ಟಾರ್ ಅಂಬರೀಶ್​ (Ambarish) ಅವರಿಗೂ ‘ಕರ್ನಾಟಕ ರತ್ನ’ (karnataka rathan) ನೀಡುವಂತೆ ಕೂಗು ಕೇಳಿ ಬಂದಿದೆ.

ಇವತ್ತು ಹಿರಿಯ ನಟಿ ತಾರಾ ಅನುರಾಧ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿಯಾದರು. ಭೇಟಿ ವೇಳೆ ಅಂಬರೀಶ್ ಅವರಿಗೂ ಕರ್ನಾಟಕ ರತ್ನ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. 

dk shivakumar and Tara anuradha
ಅಂಬಿ ಫ್ಯಾನ್ಸ್​ ಪರ ತಾರಾ ಮನವಿ Photograph: (ಅಂಬಿ ಫ್ಯಾನ್ಸ್​ ಪರ ತಾರಾ ಮನವಿ)

ಅಂಬಿ ಫ್ಯಾನ್ಸ್​ ಪರ ತಾರಾ ಮನವಿ

ಅಂಬರೀಶ್​ಗೆ ಕರ್ನಾಟಕ ರತ್ನ ನೀಡಬೇಕು ಅನ್ನೋದು ಅಂಬಿ ಅಭಿಮಾನಿಗಳ ಒತ್ತಾಸೆ. ನೀವೂ ಕೂಡ (ಡಿಕೆ ಶಿವಕುಮಾರ್) ಅಂಬಿ ಅವರನ್ನ ತುಂಬಾ ಹತ್ತಿರದಿಂದ ಕಂಡಿದ್ದೀರಾ. ವಿಷ್ಣುವರ್ಧನ್​ ಹಾಗೂ ಸರೋಜಾದೇವಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿರೊದು ಬಹಳ ಸಂತೋಷದ ಸುದ್ದಿ. ಜೊತೆಗೆ ಅಂಬರೀಶ್​ಗೂ ಕರ್ನಾಟಕ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿ ಎಂದು ತಾರಾ ಅನುರಾಧ ಮನವಿ ಮಾಡಿಕೊಂಡಿದ್ದಾರೆ. 

ಇದನ್ನೂ ಓದಿ:8 ವರ್ಷಗಳ ವಿರಾಮದ ಬಳಿಕ ‘ಪೀಕಬೂ’ ಎಂದ ಗೋಲ್ಡನ್ ಕ್ವೀನ್.. VIDEO

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

karnataka ratna for rebel star ambarish rebel star ambarish Karnataka Ratna Vishnuvardhan Vishnuvardhan karnataka ratna award to actor VISHNUVARDHAN
Advertisment