/newsfirstlive-kannada/media/media_files/2025/08/30/darshna-2025-08-30-10-39-16.jpg)
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನವಂಬರ್ 3 ರಂದು ನಟ ದರ್ಶನ್, ಪವಿತ್ರಾಗೌಡ ಹಾಗೂ ಉಳಿದ ಆರೋಪಿಗಳ ವಿರುದ್ಧ ದೋಷಾರೋಪ ಹೊರಿಸಲಾಗುತ್ತೆ. ಇಂದು ರೇಣುಕಾಸ್ವಾಮಿ ಕೊಲೆ ಕೇಸ್ ನ ಆರೋಪಿಗಳೆಲ್ಲಾ ಜೈಲಿನಿಂದಲೇ ವಿಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು . ಕೋರ್ಟ್ ಜಡ್ಜ್ ಇಂದೇ ಆರೋಪಿಗಳ ವಿರುದ್ಧ ದೋಷಾರೋಪ ಹೊರಿಸುವುದಾಗಿ ಹೇಳಿದ್ದರು. ಆದರೇ, ನಟ ದರ್ಶನ್ ಪರ ವಕೀಲ ಸುನೀಲ್ ಕುಮಾರ್ , ಸ್ಪಲ್ಪ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದರು. ಇದರಿಂದಾಗಿ ನವಂಬರ್ 3 ರಂದು ಆರೋಪಿಗಳ ವಿರುದ್ಧ ದೋಷಾರೋಪ ಹೊರಿಸುವುದಾಗಿ ಕೋರ್ಟ್ ಹೇಳಿದೆ. ನವಂಬರ್ 3 ರಂದು ಜೈಲಿನಿಂದ ಹೊರಗೆ ಜಾಮೀನಿನ ಮೇಲೆ ಇರುವ ಆರೋಪಿಗಳು ಕೂಡ ಕಡ್ಡಾಯವಾಗಿ ಖುದ್ದಾಗಿ ಕೋರ್ಟ್ ವಿಚಾರಣೆಗೆ ಹಾಜರಾಗಬೇಕು. ನವಂಬರ್ 3 ರಂದು ವಿಚಾರಣೆಗೆ ಹಾಜರಾಗದಿದ್ದರೇ, ಆರೋಪಿಗಳ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗುತ್ತೆ ಎಂದು ಕೋರ್ಟ್ ಹೇಳಿದೆ. ನವಂಬರ್ 3ರ ಸೋಮವಾರ ನಟ ದರ್ಶನ್ ಹಾಗೂ ಪವಿತ್ರಾಗೌಡ , ಉಳಿದ ಆರೋಪಿಗಳ ವಿರುದ್ಧ ಯಾವ್ಯಾವ ಸೆಕ್ಷನ್ ಗಳಡಿ ವಿಚಾರಣೆ ನಡೆಯಬೇಕೆಂದು ಕೋರ್ಟ್ ನಿರ್ಧರಿಸಿ, ಆರೋಪ ಹೊರಿಸಲಾಗುತ್ತೆ. ನಟ ದರ್ಶನ್ , ಪವಿತ್ರಾಗೌಡ ವಿರುದ್ಧ ಕೊಲೆ , ಹಲ್ಲೆ, ಕಿಡ್ನ್ಯಾಪ್, ಸಾಕ್ಷ್ಯನಾಶ, ಷಡ್ಯಂತ್ರ ಸೇರಿದಂತೆ ವಿವಿಧ ಆರೋಪಗಳನ್ನು ಹೊರಿಸುವ ಸಾಧ್ಯತೆ ಇದೆ. ಇವುಗಳ ಬಗ್ಗೆ ಮುಂದೆ ಕೋರ್ಟ್ ನಲ್ಲಿ ಪರ - ವಿರೋಧ ವಾದ-ಪ್ರತಿವಾದ ನಡೆಯಲಿದೆ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us