/newsfirstlive-kannada/media/media_files/2025/08/28/anushree11-2025-08-28-11-40-20.jpg)
ಕನ್ನಡದ ನಿರೂಪಕಿ ಅನುಶ್ರೀ ಅವರು ಅದ್ಧೂರಿಯಾಗಿ ದಾಂಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಷ್ಟು ದಿನ ಅಭಿಮಾನಿಗಳು ಅಕ್ಕ ನಿಮ್ಮ ಮದುವೆ ಯಾವಾಗ ಅಂತ ಪ್ರಶ್ನೆ ಕೇಳುತ್ತಲೇ ಇದ್ದರು.
ಇದೀಗ ನಿರೂಪಕಿ ಅನುಶ್ರೀ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಚಟಪಟ ಅಂತ ಮಾತನಾಡುವ ಅನುಶ್ರೀ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.
ಇದನ್ನೂ ಓದಿ: ಅರಿಶಿಣ ಶಾಸ್ತ್ರದಲ್ಲಿ ಮಿಂದೆದ್ದ ಸ್ಟಾರ್ ನಿರೂಪಕಿ ಅನುಶ್ರಿ-ರೋಷನ್; PHOTOS
ಮದುವೆ ಬಗ್ಗೆ ಹೆಚ್ಚಾಗಿ ಎಲ್ಲಿಯೂ ಮಾತನಾಡದ ಅನುಶ್ರೀ ಈಗ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಇಂದು ಬೆಳಗ್ಗೆ 10.56ಕ್ಕೆ ರೋಷನ್ ಅನುಶ್ರೀಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ.
ಈ ಇಬ್ಬರ ಮದುವೆಯೂ ಬೆಂಗಳೂರಿನ ಹೊರವಲಯದ ಸಂಭ್ರಮ ಬೈ ಸ್ವಾನ್ಲೈನ್ಸ್ ಸ್ಟುಡಿಯೋಸ್ ತಿಟ್ಟಹಳ್ಳಿ, ಕಗ್ಗಲಿಪುರದಲ್ಲಿ ನಡೆಯುತ್ತಿದೆ. ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ಅವರ ಪುತ್ರ ರೋಷನ್ ಜೊತೆ ಅನುಶ್ರೀ ವಿವಾಹ ಆಗಿದ್ದಾರೆ.
ಇನ್ನೂ, ನಿರೂಪಕಿ ಅನುಶ್ರೀ ಹಾಗೂ ರೋಷನ್ ಅದ್ಧೂರಿ ಮದುವೆಗೆ ರಾಜ್ ಬಿ ಶೆಟ್ಟಿ, ನೆನಪಿರಲಿ ಪ್ರೇಮ್, ಕಾವ್ಯ ಶಾ, ಸೋನಲ್ ಮೊಂಥೆರೋ, ನಟ ನಾಗಭೂಷಣ್, ಚೈತ್ರಾ ಜೆ ಆಚಾರ್, ನಟ ಶರಣ್ ಸೇರಿದಂತೆ ಸಾಕಷ್ಟು ಸ್ಟಾರ್ ಸೆಲೆಬ್ರಿಟಿಗಳು ಬಂದು ನವಜೋಡಿಗೆ ಶುಭ ಹಾರೈಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ