ಸಾಹಸಸಿಂಹ ವಿಷ್ಣುವರ್ಧನ್ ಫ್ಯಾನ್ಸ್​ಗೆ ಹೈಕೋರ್ಟ್​ ಬಿಗ್ ಶಾಕ್​.. ‘ಯಜಮಾನ’ರ ಜಯಂತೋತ್ಸವ ಎಲ್ಲಿ..?

ಸಾಹಸಸಿಂಹ ವಿಷ್ಣುವರ್ಧನ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಇದೇ ಖುಷಿಯಲ್ಲಿ ವಿಷ್ಣುವರ್ಧನ್ ಅವರ 75ನೇ ವರ್ಷದ ಹುಟ್ಟುಹಬ್ಬವನ್ನು ಅಭಿಮಾನ್ ಸ್ಟುಡಿಯೋದಲ್ಲಿ ಅದ್ಧೂರಿಯಾಗಿ ಆಚರಣೆ ಮಾಡಲು ಅಭಿಮಾನಿಗಳು ಸಿದ್ಧವಾಗಿದ್ದರು. ಆದರೆ..

author-image
Bhimappa
Vishnuvardhan_PHOTO
Advertisment

ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಇದೇ ಖುಷಿಯಲ್ಲಿ ವಿಷ್ಣುವರ್ಧನ್ ಅವರ 75ನೇ ವರ್ಷದ ಹುಟ್ಟುಹಬ್ಬವನ್ನು ಅಭಿಮಾನ್ ಸ್ಟುಡಿಯೋದಲ್ಲಿ ಅದ್ಧೂರಿಯಾಗಿ ಆಚರಣೆ ಮಾಡಲು ಅಭಿಮಾನಿಗಳು ಸಿದ್ಧವಾಗಿದ್ದರು. ಆದರೆ ಇದಕ್ಕೆ ಕರ್ನಾಟಕ ಹೈಕೋರ್ಟ್ ಬ್ರೇಕ್ ಹಾಕಿದೆ. 

ಸೆಪ್ಟೆಂಬರ್​ 18 ರಂದು ವಿಷ್ಣುವರ್ಧನ್ ಅವರ ಜಯಂತೋತ್ಸವವನ್ನು ಉದ್ಯಾನ ನಗರಿಯ ಕಂಗೇರಿ ಬಳಿಯ ಉತ್ತರಹಳ್ಳಿ ಮೇನ್ ರೋಡ್​​ನಲ್ಲಿರುವ ಅಭಿಮಾನ್ ಸ್ಟುಡಿಯೋದಲ್ಲಿ ಆಚರಣೆ ಮಾಡಲು ಅವರ ಅಭಿಮಾನಿಗಳು ತಯಾರಿಯಲ್ಲಿದ್ದರು. ಇದಕ್ಕಾಗಿ ಅವರ ಅಭಿಮಾನಿಗಳು ಸಂಘ, ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ಆದರೆ ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಅನುಮತಿಯನ್ನು ನಿರಾಕರಣೆ ಮಾಡಿದೆ. ಸಮಾಧಿ ಜಾಗದ ವಿವಾದ ವಿಚಾರಣೆ ಇನ್ನೂ ಬಾಕಿ ಇರುವ ಕಾರಣ ಸಂಭ್ರಮಾಚರಣೆ ಬೇಡ ಎಂದು ಹೇಳಿದೆ.

ಇದನ್ನೂ ಓದಿ: ಟೀಮ್ ಇಂಡಿಯಾಗೆ ಗುಡ್​​ನ್ಯೂಸ್​​.. 579 ಕೋಟಿ ರೂಪಾಯಿಗೆ ಸ್ಪಾನ್ಸರ್​ಶಿಪ್ ಪಡೆದ ಟೈರ್​ ಕಂಪನಿ

Vishnuvardhan

ಹೈಕೋರ್ಟ್​ ಅಭಿಮಾನ್ ಸ್ಟುಡಿಯೋದಲ್ಲಿ ಜಯಂತೋತ್ಸವ ಸಂಭ್ರಮಾಚರಣೆ ಬೇಡ ಎಂದಿದೆ. ಇನ್ನೇನು ಒಂದೇ ದಿನ ಕಳೆದರೆ ದಾದಾ ಅವರ ಹುಟ್ಟುಹಬ್ಬ ಇದೆ. ಇಷ್ಟರೊಳಗೆ ವಿಷ್ಣುವರ್ಧನ್ ಅವರ ಹುಟ್ಟುಹಬ್ಬ ಸಂಭ್ರಮಾಚರಣೆ ಎಲ್ಲಿ? ಹೇಗೆ? ಎನ್ನುವುದನ್ನ ತಿಳಿಸಬೇಕಿದೆ. ಹೀಗಾಗಿ ಹುಟ್ಟುಹಬ್ಬದ ಬಗ್ಗೆ ಸಾಹಸಸಿಂಹನ ಅಭಿಮಾನಿಗಳಲ್ಲಿ ಸದ್ಯಕ್ಕಂತೂ ಗೊಂದಲ ಅಂತೂ ಇದ್ದೇ ಇದೆ.

ನಾಳೆ ಬಿಟ್ಟು ನಾಡಿದ್ದು ಗುರುವಾರ ವಿಷ್ಣುವರ್ಧನ್ ಅವರ 75ನೇ ವರ್ಷದ ಜಯಂತೋತ್ಸವ ಆಚರಣೆಗೆ ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ಅಂದು ಎಲ್ಲಿಗೆ ಹೋಗಬೇಕು ಎನ್ನುವ ಗೊಂದಲವಿದೆ. 2 ವರ್ಷಗಳಿಂದ ಅಭಿಮಾನ್ ಸ್ಟುಡಿಯೋದಲ್ಲಿ ಸಂಭ್ರಮಾಚರನೆಗೆ ಬಾಲಕೃಷ್ಣ ಕುಟುಂಬಸ್ಥರು ಅಡ್ಡಿಪಡಿಸಿದ್ದರು. ಈ ವರ್ಷ ಸ್ಮಾರಕವನ್ನೇ ಧ್ವಂಸ ಮಾಡಲಾಗಿದೆ. ಇದೇ ನೋವಿನಲ್ಲಿರುವ ಅವರ ಅಭಿಮಾನಿಗಳಿಗೆ ಮತ್ತೊಂದು ಶಾಕ್ ಎದುರಾಗಿದೆ. 
   ​         ​
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Kannada Movies Vishnuvardhan Karnataka Ratna Vishnuvardhan
Advertisment