/newsfirstlive-kannada/media/media_files/2025/08/27/kannada-actress-mayuri-2025-08-27-13-08-16.jpg)
ಇಂದು ನಾಡಿನೆಲ್ಲೆಡೆ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮನೆ ಮನಗಳಲ್ಲೂ ವಿಘ್ನ ನಿವಾರಕನ ಆರಾಧನೆ ಜೋರಾಗಿದ್ದು, ಬೆಂಗಳೂರಿನ ದೊಡ್ಡ ಗಣೇಶ ದೇಗುಲದಲ್ಲಿ ಹಬ್ಬರ ಸಡಗರ ಕಳೆಗಟ್ಟಿದೆ.
ಇದನ್ನೂ ಓದಿ: ನಾಡಿನೆಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ.. ವಿಘ್ನ ನಿವಾರಕನ ಪ್ರತಿಷ್ಠಾಪನೆ ಸಡಗರ ಜೋರು
ಮತ್ತೊಂದು ಕಡೆ ಸ್ಯಾಂಡಲ್ವುಡ್ ಸ್ಟಾರ್ ನಟಿ ಮಯೂರಿ ಕ್ಯಾತರಿ ತಮ್ಮ ಮುದ್ದು ಮಗನ ಜೊತೆಗೆ ಗೌರಿ ಗಣೇಶ ಹಬ್ಬವನ್ನು ಆಚರಿಸಿದ್ದಾರೆ. ಇದೇ ವಿಡಿಯೋವನ್ನು ನಟಿ ಮಯೂರಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಸುಂದರವಾದ ವಿಡಿಯೋ ಜೊತೆಗೆ ಶುಭ ಗಣೇಶ ಹಬ್ಬದ ಶುಭಾಶಯಗಳು. ವಿಘ್ನವಿನಾಶಕನ ಆಶೀರ್ವಾದ ನಿಮ್ಮೆಲ್ಲರ ಬದುಕಿಗೆ ಶಾಂತಿ, ಸಂತೋಷ ಮತ್ತು ಸಮೃದ್ಧಿ ತರಲಿ ಎಂದು ಬರೆದುಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ