Advertisment

ಕೆಜಿಎಫ್ ಶೆಟ್ಟಿ ಭಾಯ್​​ ಖ್ಯಾತಿಯ ನಟ ದಿನೇಶ್ ಮಂಗಳೂರಿಗೆ ಏನಾಗಿತ್ತು..?

ಪುನೀತ್ ರಾಜ್​ಕುಮಾರ್ ಅಭಿನಯದ ರಣವಿಕ್ರಮ, ರಕ್ಷಿತ್​ ಶೆಟ್ಟಿಯವರ ಉಳಿದವರು ಕಂಡಂತೆ, ಕಿರಿಕ್ ಪಾರ್ಟಿ, ಕೆಜಿಎಫ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದ ನಟ ದಿನೇಶ್ ಮಂಗಳೂರು ನಿಧನರಾಗಿದ್ದಾರೆ.

author-image
NewsFirst Digital
what happened to kgf shetty bhai fame dinesh mangalore
Advertisment

ಪುನೀತ್ ರಾಜ್​ಕುಮಾರ್ ಅಭಿನಯದ ರಣವಿಕ್ರಮ, ಯಶ್ ಅಭಿನಯದ ಕೆಜಿಎಫ್, ರಕ್ಷಿತ್​ ಶೆಟ್ಟಿಯವರ ಉಳಿದವರು ಕಂಡಂತೆ, ಕಿರಿಕ್ ಪಾರ್ಟಿ, ಕೆಜಿಎಫ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದ ನಟ ದಿನೇಶ್ ಮಂಗಳೂರು ನಿಧನರಾಗಿದ್ದಾರೆ.

Advertisment

ಇದನ್ನೂ ಓದಿ: ಮಹಿಳೆಯರೇ ಗಮನಿಸಿ.. ಕಪಾಟಿನಲ್ಲಿಟ್ಟ ಸೀರೆಗಳು ಹಾಳಾಗಬಾರದಾ? ಸೇಫ್​ ಆಗಿರಿಸಲು ಹೀಗೆ ಮಾಡಿ..

DINESH_MNG

ಹಿರಿಯ ನಟ ಹಾಗೂ ಕಲಾ ನಿರ್ದೇಶಕ ದಿನೇಶ್ ಮಂಗಳೂರು ಅವರು 55 ವಯಸ್ಸಿಗೆ ಕೊನೆಯುಸಿರೆಳೆದಿದ್ದಾರೆ. ಕಲಾ ನಿರ್ದೇಶಕ ದಿನೇಶ್ ಮಂಗಳೂರು ಅವರು ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಕುಂದಾಪುರದಲ್ಲಿ ನಿಧನರಾಗಿದ್ದಾರೆ.

DINESH_MNG_1

ದಿನೇಶ್ ಮಂಗಳೂರು ರಂಗಭೂಮಿ ಹಾಗೂ ಸಿನಿಮಾ ಎರಡು ಕ್ಷೇತ್ರದಲ್ಲೂ ಜನಪ್ರಿಯತೆ ಪಡೆದುಕೊಂಡಿದ್ದರು. ಆದ್ರೆ, ಸ್ಯಾಂಡಲ್​ವುಡ್​ನ ದೊಡ್ಡ ಬಜೆಟ್ ಸಿನಿಮಾವೊಂದರ ಭಾಗ-1ರ ಶೂಟಿಂಗ್ ಸಮಯದಲ್ಲಿ ದಿನೇಶ್ ಮಂಗಳೂರು ಪಾರ್ಶ್ವ ವಾಯುವಿಗೆ ಒಳಗಾಗಿದ್ದರು. ಈ ಸಂಬಂಧ ಅವರು ಕುಂದಾಪುರ ಕೋಟೇಶ್ವರದ ಸರ್ಜನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅಲ್ಲಿಂದ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಮೇಲೆ ಕುಂದಾಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

Advertisment

what happened to kgf shetty bhai fame dinesh mangalore(1)

ಆದರೆ ಮತ್ತೆ ಕಳೆದ ವಾರ ತೀವ್ರ ಅಸ್ವಸ್ಥರಾಗಿದ್ದ ದಿನೇಶ್ ಮಂಗಳೂರು ಅವರನ್ನ ಸರ್ಜನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಮುಂಜಾನೆ ಸರ್ಜನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸಿದೆ ನಿಧನ ಹೊಂದಿದ್ದಾರೆ. 1970 ಜನವರಿ 01 ರಂದು ಜನಿಸಿದ್ದರು. ಕೊಲ್ಲೂರಿನ ಸರ್ಕಾರಿ ಶಾಲೆಯಲ್ಲಿ ಇವರು ವಿದ್ಯಾಭ್ಯಾಸ ಮಾಡಿದ್ದರು. ನಂತರದ ಜೀವನದಲ್ಲಿ ಭಾರತಿ ಪೈ ಅವರನ್ನು ವಿವಾಹವಾಗಿದ್ದರು. ಈ ದಂಪತಿಗೆ ಸೂರ್ಯ ಸಿದ್ಧಾರ್ಥ್, ಸಾಜನ್ ಪೈ ಎನ್ನುವ ಇಬ್ಬರು ಗಂಡು ಮಕ್ಕಳಿದ್ದಾರೆ. ಸದ್ಯ ಪತ್ನಿ ಹಾಗೂ ಮಕ್ಕಳನ್ನು ದಿನೇಶ್ ಮಂಗಳೂರು ಅವರು ಅಗಲಿದ್ದಾರೆ.  

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

KGF
Advertisment
Advertisment
Advertisment