newsfirstkannada.com

ರಾಮ ಮಂದಿರ ಉದ್ಘಾಟನೆಗೆ ಸಿದ್ದರಾಮಯ್ಯರನ್ನೇ ಕರೆದಿಲ್ಲ, ಇದು ಕನ್ನಡಿಗರಿಗೆ ಮಾಡಿದ ಅಪಮಾನ ಅಲ್ವಾ?; ಚಲುವರಾಯಸ್ವಾಮಿ 

Share :

Published January 21, 2024 at 8:16am

Update January 21, 2024 at 12:33pm

    ನಾಳೆ ಅಯೋಧ್ಯೆ ರಾಮಮಂದಿರ ಉದ್ಘಾಟನೆ

    ರಾಮಮಂದಿರ ಉದ್ಘಾಟನೆ ನಮಗೂ ಸಂತಸ ಎಂದ ಕೃಷಿ ಸಚಿವ

    ಬಿಜೆಪಿಯವರು ದೇವರು ಎಂದ ಕೃಷಿ ಸಚಿವ ಚಲುವರಾಯಸ್ವಾಮಿ

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಮೋದಿ ಅವರು ಮಾತ್ರ ಮಾಡ್ತಿದ್ದಾರೆ. ಸಚಿವ ಸಂಪುಟ ಸದಸ್ಯರನ್ನೇ ಕರೆದಿಲ್ಲ. ರಾಮಮಂದಿರ ಹೋರಾಟ ಮಾಡಿದ ಅಡ್ವಾನಿ ಅವ್ರನ್ನೆ ಬರಬೇಡಿ ಎಂದಿದ್ದಾರೆ. ಅಪೂರ್ಣ ಮಂದಿರ ಉದ್ಘಾಟನೆಗೆ ಮಠಗಳೇ ವಿರೋಧಿಸಿವೆ. ಇದು ಚುನಾವಣೆಗಾಗಿ ಉದ್ಘಾಟನೆ ನಡೆತಿರೋ ಕಾರ್ಯಕ್ರಮ. ಹೀಗಾಗಿ ನಾವು ಹೋಗವುದಿಲ್ಲ ಅಂತ ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ರಾಮಮಂದಿರ ಉದ್ಘಾಟನೆ ನಮಗೂ ಸಂತಸ, ನಾವೂ ರಾಮಭಕ್ತರೇ ಆದರೆ ಚುನಾವಣೆ ದೃಷ್ಟಿಯಿಂದ ಮಾಡುವುದು ಸರಿಯಲ್ಲ, ಹೆಚ್ಚು ದಿನ ನಡೆಯಲ್ಲ. ಬಿಜೆಪಿಯವರು ದೇವರು, ದೇವಸ್ಥಾನ ಇಟ್ಟುಕೊಂಡು ಚುನಾವಣೆ ನಡೆಸಲು ಹೊರಟಿದ್ದಾರೆ ಅಂತ ವಾಗ್ದಾಳಿ ನಡೆಸಿದ್ದಾರೆ.

ರಾಮಮಂದಿರ ಉದ್ಘಾಟನೆಗೆ ರಾಜ್ಯದ ಸಿಎಂ ಸಿದ್ದರಾಮಯ್ಯರನ್ನೆ ಕರೆದಿಲ್ಲ. ಇದು ಕನ್ನಡಿಗರಿಗೆ ಮಾಡಿದ ಅಪಮಾನ ಅಲ್ವಾ? ಕೇಂದ್ರದಲ್ಲಿ ರಜೆ ಘೋಷಣೆ ಮಾಡಿ, ದೇಶಕ್ಕೆ ರಜೆ ಕೊಡಿಸಲಿ. ಅಪರೂಪಕ್ಕೆ ಯುಪಿ ಸಿಎಂರನ್ನ ಪಕ್ಕಕ್ಕೆ ಕರೆದುಕೊಳ್ತಾರೆ. ಅಮಿತ್ ಶಾ ಕೂಡ ಇಲ್ಲ. ಕಾರ್ಯಕ್ರಮ ಎಲ್ಲ ಮೋದಿಯವರದೇ ದೊಡ್ಡ ದೊಡ್ಡ ಫೋಟೊಗಳು, ರಾಮನದ್ದು ಚಿಕ್ಕ ಫೋಟೊಗಳು. ದೇವರನ್ನು ಮುಂದಿಟ್ಟು ರಾಜಕೀಯ ಮಾಡುತ್ತಿರುವ ಬಿಜೆಪಿಯವರಿಗೆ ಜನ ಉತ್ತರ ಕೊಡುವ ದಿನ ಬರುತ್ತದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಮ ಮಂದಿರ ಉದ್ಘಾಟನೆಗೆ ಸಿದ್ದರಾಮಯ್ಯರನ್ನೇ ಕರೆದಿಲ್ಲ, ಇದು ಕನ್ನಡಿಗರಿಗೆ ಮಾಡಿದ ಅಪಮಾನ ಅಲ್ವಾ?; ಚಲುವರಾಯಸ್ವಾಮಿ 

https://newsfirstlive.com/wp-content/uploads/2024/01/Cheluvanarayana-swamy.jpg

    ನಾಳೆ ಅಯೋಧ್ಯೆ ರಾಮಮಂದಿರ ಉದ್ಘಾಟನೆ

    ರಾಮಮಂದಿರ ಉದ್ಘಾಟನೆ ನಮಗೂ ಸಂತಸ ಎಂದ ಕೃಷಿ ಸಚಿವ

    ಬಿಜೆಪಿಯವರು ದೇವರು ಎಂದ ಕೃಷಿ ಸಚಿವ ಚಲುವರಾಯಸ್ವಾಮಿ

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಮೋದಿ ಅವರು ಮಾತ್ರ ಮಾಡ್ತಿದ್ದಾರೆ. ಸಚಿವ ಸಂಪುಟ ಸದಸ್ಯರನ್ನೇ ಕರೆದಿಲ್ಲ. ರಾಮಮಂದಿರ ಹೋರಾಟ ಮಾಡಿದ ಅಡ್ವಾನಿ ಅವ್ರನ್ನೆ ಬರಬೇಡಿ ಎಂದಿದ್ದಾರೆ. ಅಪೂರ್ಣ ಮಂದಿರ ಉದ್ಘಾಟನೆಗೆ ಮಠಗಳೇ ವಿರೋಧಿಸಿವೆ. ಇದು ಚುನಾವಣೆಗಾಗಿ ಉದ್ಘಾಟನೆ ನಡೆತಿರೋ ಕಾರ್ಯಕ್ರಮ. ಹೀಗಾಗಿ ನಾವು ಹೋಗವುದಿಲ್ಲ ಅಂತ ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ರಾಮಮಂದಿರ ಉದ್ಘಾಟನೆ ನಮಗೂ ಸಂತಸ, ನಾವೂ ರಾಮಭಕ್ತರೇ ಆದರೆ ಚುನಾವಣೆ ದೃಷ್ಟಿಯಿಂದ ಮಾಡುವುದು ಸರಿಯಲ್ಲ, ಹೆಚ್ಚು ದಿನ ನಡೆಯಲ್ಲ. ಬಿಜೆಪಿಯವರು ದೇವರು, ದೇವಸ್ಥಾನ ಇಟ್ಟುಕೊಂಡು ಚುನಾವಣೆ ನಡೆಸಲು ಹೊರಟಿದ್ದಾರೆ ಅಂತ ವಾಗ್ದಾಳಿ ನಡೆಸಿದ್ದಾರೆ.

ರಾಮಮಂದಿರ ಉದ್ಘಾಟನೆಗೆ ರಾಜ್ಯದ ಸಿಎಂ ಸಿದ್ದರಾಮಯ್ಯರನ್ನೆ ಕರೆದಿಲ್ಲ. ಇದು ಕನ್ನಡಿಗರಿಗೆ ಮಾಡಿದ ಅಪಮಾನ ಅಲ್ವಾ? ಕೇಂದ್ರದಲ್ಲಿ ರಜೆ ಘೋಷಣೆ ಮಾಡಿ, ದೇಶಕ್ಕೆ ರಜೆ ಕೊಡಿಸಲಿ. ಅಪರೂಪಕ್ಕೆ ಯುಪಿ ಸಿಎಂರನ್ನ ಪಕ್ಕಕ್ಕೆ ಕರೆದುಕೊಳ್ತಾರೆ. ಅಮಿತ್ ಶಾ ಕೂಡ ಇಲ್ಲ. ಕಾರ್ಯಕ್ರಮ ಎಲ್ಲ ಮೋದಿಯವರದೇ ದೊಡ್ಡ ದೊಡ್ಡ ಫೋಟೊಗಳು, ರಾಮನದ್ದು ಚಿಕ್ಕ ಫೋಟೊಗಳು. ದೇವರನ್ನು ಮುಂದಿಟ್ಟು ರಾಜಕೀಯ ಮಾಡುತ್ತಿರುವ ಬಿಜೆಪಿಯವರಿಗೆ ಜನ ಉತ್ತರ ಕೊಡುವ ದಿನ ಬರುತ್ತದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More