Advertisment

ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸಂದ ಜಯ; ಗೌರವಧನ 10 ಸಾವಿರಕ್ಕೆ ಹೆಚ್ಚಿಸಿ ಸಿಎಂ ಆದೇಶ

author-image
Ganesh Nachikethu
Updated On
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸಂದ ಜಯ; ಗೌರವಧನ 10 ಸಾವಿರಕ್ಕೆ ಹೆಚ್ಚಿಸಿ ಸಿಎಂ ಆದೇಶ
Advertisment
  • ಆಶಾ ಕಾರ್ಯಕರ್ತೆಯರ ಹೋರಾಟ ಕೊನೆಗೂ ಯಶಸ್ವಿ
  • ಗೌರವಧನ 10,000 ಹೆಚ್ಚಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
  • ಸಿದ್ದರಾಮಯ್ಯ ಸೂಚನೆಗೆ ಆಶಾ ಕಾರ್ಯಕರ್ತೆಯರ ಒಪ್ಪಿಗೆ!

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸಿದ ಹೋರಾಟ ಕೊನೆಗೂ ಯಶಸ್ವಿಯಾಗಿದೆ. ಆಶಾ ಕಾರ್ಯಕರ್ತೆಯರ ನಿಯೋಗದ ಜತೆ ಮಾತುಕತೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ.

Advertisment

ಆಶಾ ಕಾರ್ಯಕರ್ತೆಯರು ತಮಗೆ ಪ್ರತಿ ತಿಂಗಳು 15,000 ರೂಪಾಯಿ ಗೌರವಧನ ನೀಡಬೇಕು ಎಂದು ಡಿಮ್ಯಾಂಡ್​ ಇಟ್ಟಿದ್ದರು. ಈಗ ಸರ್ಕಾರ ಇವರ ಬೇಡಿಕೆಯನ್ನು ಪರಿಗಣಿಸಿದ್ದು, ಕೂಡಲೇ ಗೌರವಧನ 10,000 ಹೆಚ್ಚಿಸಲು ಸಿಎಂ ಸೂಚನೆ ನೀಡಿದ್ದಾರೆ.

ಇನ್ನು, ಸಿಎಂ ಸಿದ್ದರಾಮಯ್ಯ ಸೂಚನೆಗೆ ಆಶಾ ಕಾರ್ಯಕರ್ತೆಯರು ಒಪ್ಪಿಗೆ ನೀಡಿದ್ದಾರೆ. ಇಷ್ಟೇ ಅಲ್ಲದೇ ಪ್ರತಿಯೊಂದು ಬೇಡಿಕೆಯನ್ನು ಪರಿಶೀಲನೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಕಳೆದ 4 ದಿನಗಳಿಂದ ಆಶಾ ಕಾರ್ಯಕರ್ತೆಯರು ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಧರಣಿ ನಡೆಸುತ್ತಿದ್ದರು. ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರದ ಪ್ರತಿನಿಧಿಗಳ ನಡುವೆ ಹಲವು ಸುತ್ತಿನ ಮಾತುಕತೆ ವಿಫಲವಾಗಿತ್ತು. ಸಿಎಂ ಸಿದ್ದರಾಮಯ್ಯ ಅವರೇ ಖುದ್ದು ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವ ನಿರ್ಧಾರಕ್ಕೆ ಬಂದಿದ್ದಾರೆ.

Advertisment

ಇದನ್ನೂ ಓದಿ:ಟೀಮ್​ ಇಂಡಿಯಾಗೆ ಜೂನಿಯರ್​ ಗಬ್ಬರ್​ ಎಂಟ್ರಿ; ಸ್ಟಾರ್​ ಆಟಗಾರನಿಗೆ ಜಾಕ್​ಪಾಟ್​​

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment