ರಾಜ್ಯದಲ್ಲಿ ಕೆಲ ಬೆಳೆವಣಿಗೆಗಳು ಗಂಭೀರ ಸ್ವರೂಪ ಪಡೆದುಕೊಂಡಿವೆ
ಮಾಧ್ಯಮದವ್ರಿಗೆ ಏನನ್ನು ಪ್ರತಿಕ್ರಿಯೆ ನೀಡದೇ ತೆರಳಿದ ಸಿದ್ದರಾಮಯ್ಯ
ಚುನಾವಣೆ ಮುಗಿದ ಬೆನ್ನಲ್ಲೇ ಸಿಎಂ ಊಟಿಗೆ ಹೋಗುತ್ತಿರುವುದೇಕೆ?
ಬೆಂಗಳೂರು: ಇಂದಿಗೆ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮತದಾನ ಅಂತ್ಯವಾಗಲಿದೆ. ನಿರಂತರ ಎಲೆಕ್ಷನ್ ಸಮಾವೇಶ, ರ್ಯಾಲಿ, ಕ್ಯಾಂಪೇನ್ಗಳಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ ಅವರು ವಿಶ್ರಾಂತಿಗೆಂದು 3 ದಿನ ತಮಿಳುನಾಡಿನ ಊಟಿಗೆ ತೆರಳುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯ ಜೊತೆಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಕೂಡ ಊಟಿಗೆ ಪ್ರಯಾಣ ಬೆಳೆಸಲಿದ್ದಾರೆ. ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದ ಮೂಲಕ ಮೈಸೂರಿಗೆ ತೆರಳಲಿದ್ದಾರೆ. ಬಳಿಕ ಮೈಸೂರಿನಿಂದ ಊಟಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಹೆಚ್.ಸಿ ಮಹದೇವಪ್ಪ ತೆರಳಲಿದ್ದಾರೆ.
ಇದನ್ನೂ ಓದಿ: ಗಂಡನ ಕೈ, ಕಾಲು ಕಟ್ಟಿ ಎದೆ ಮೇಲೆ ಕೂರುತ್ತಿದ್ದ ಹೆಂಡತಿ.. ಸಿಗರೇಟ್ನಿಂದ ಸುಟ್ಟು ಹೇಗೆಲ್ಲ ಟಾರ್ಚರ್ ಕೊಡ್ತಿದ್ದಳು?
ಇದನ್ನೂ ಓದಿ: ಆಸ್ಪತ್ರೆಯಲ್ಲಿ ಗಂಡ ಸಾವು.. ಸುದ್ದಿ ಗೊತ್ತಾದ್ರೂ ವೋಟ್ ಮಾಡಿದ ಮಹಿಳೆ; ಕಾರಣ ಇದೆ
ಸದ್ಯ ರಾಜ್ಯದಲ್ಲಿ ಲೋಕಸಭಾ ಮತದಾನ ಇಂದಿಗೆ ಅಂತ್ಯವಾಗುತ್ತಿದೆ. ಜೂನ್ 4 ರಂದು ಫಲಿತಾಂಶದ ಮೇಲೆ ಎಲ್ಲರ ಕಣ್ಣು ನೆಡಲಿದೆ. ಹಾಸನ ಅಶ್ಲೀಲ ವಿಡಿಯೋ ಪ್ರಕರಣ, ಮಹಿಳೆಯ ಕಿಡ್ನಾಪ್ ಕೇಸ್ನಲ್ಲಿ ಕಾಂಗ್ರೆಸ್- ಜೆಡಿಎಸ್ ಮಧ್ಯೆ ವಾಕ್ಸಮರ ನಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದಕ್ಕೆ ರಾಜ್ಯ ಸರ್ಕಾರದ ಮೇಲೆ ಬಿಜೆಪಿ ನಾಯಕರು ಆರೋಪ ಮಾಡುತ್ತಿದ್ದಾರೆ. ಇನ್ನು ವಿಡಿಯೋಗಳನ್ನ ರಿಲೀಸ್ ಮಾಡಿರೋದು ಡಿಸಿಎಂ ಡಿಕೆ ಶಿವಕುಮಾರ್ ಎಂದು ಗಂಭೀರ ಆರೋಪಗಳನ್ನು ಮಾಡಲಾಗಿದೆ. ಈ ಎಲ್ಲ ಬೆಳವಣಿಗೆ ರಾಜ್ಯದಲ್ಲಿ ನಡೆಯುತ್ತಿದ್ದರು ಸಿಎಂ ಸಿದ್ದರಾಮಯ್ಯ ಇವುಗಳಿಗೆ ಯಾವುದಕ್ಕೂ ಪ್ರತಿಕ್ರಿಯೆ ನೀಡದೇ ಸಚಿವ ಹೆಚ್.ಸಿ ಮಹದೇವಪ್ಪ ಜೊತೆ 3 ದಿನಗಳ ಕಾಲ ವಿಶ್ರಾಂತಿ ಪಡೆಯಲು ಊಟಿಗೆ ತೆರಳುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ರಾಜ್ಯದಲ್ಲಿ ಕೆಲ ಬೆಳೆವಣಿಗೆಗಳು ಗಂಭೀರ ಸ್ವರೂಪ ಪಡೆದುಕೊಂಡಿವೆ
ಮಾಧ್ಯಮದವ್ರಿಗೆ ಏನನ್ನು ಪ್ರತಿಕ್ರಿಯೆ ನೀಡದೇ ತೆರಳಿದ ಸಿದ್ದರಾಮಯ್ಯ
ಚುನಾವಣೆ ಮುಗಿದ ಬೆನ್ನಲ್ಲೇ ಸಿಎಂ ಊಟಿಗೆ ಹೋಗುತ್ತಿರುವುದೇಕೆ?
ಬೆಂಗಳೂರು: ಇಂದಿಗೆ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮತದಾನ ಅಂತ್ಯವಾಗಲಿದೆ. ನಿರಂತರ ಎಲೆಕ್ಷನ್ ಸಮಾವೇಶ, ರ್ಯಾಲಿ, ಕ್ಯಾಂಪೇನ್ಗಳಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ ಅವರು ವಿಶ್ರಾಂತಿಗೆಂದು 3 ದಿನ ತಮಿಳುನಾಡಿನ ಊಟಿಗೆ ತೆರಳುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯ ಜೊತೆಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಕೂಡ ಊಟಿಗೆ ಪ್ರಯಾಣ ಬೆಳೆಸಲಿದ್ದಾರೆ. ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದ ಮೂಲಕ ಮೈಸೂರಿಗೆ ತೆರಳಲಿದ್ದಾರೆ. ಬಳಿಕ ಮೈಸೂರಿನಿಂದ ಊಟಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಹೆಚ್.ಸಿ ಮಹದೇವಪ್ಪ ತೆರಳಲಿದ್ದಾರೆ.
ಇದನ್ನೂ ಓದಿ: ಗಂಡನ ಕೈ, ಕಾಲು ಕಟ್ಟಿ ಎದೆ ಮೇಲೆ ಕೂರುತ್ತಿದ್ದ ಹೆಂಡತಿ.. ಸಿಗರೇಟ್ನಿಂದ ಸುಟ್ಟು ಹೇಗೆಲ್ಲ ಟಾರ್ಚರ್ ಕೊಡ್ತಿದ್ದಳು?
ಇದನ್ನೂ ಓದಿ: ಆಸ್ಪತ್ರೆಯಲ್ಲಿ ಗಂಡ ಸಾವು.. ಸುದ್ದಿ ಗೊತ್ತಾದ್ರೂ ವೋಟ್ ಮಾಡಿದ ಮಹಿಳೆ; ಕಾರಣ ಇದೆ
ಸದ್ಯ ರಾಜ್ಯದಲ್ಲಿ ಲೋಕಸಭಾ ಮತದಾನ ಇಂದಿಗೆ ಅಂತ್ಯವಾಗುತ್ತಿದೆ. ಜೂನ್ 4 ರಂದು ಫಲಿತಾಂಶದ ಮೇಲೆ ಎಲ್ಲರ ಕಣ್ಣು ನೆಡಲಿದೆ. ಹಾಸನ ಅಶ್ಲೀಲ ವಿಡಿಯೋ ಪ್ರಕರಣ, ಮಹಿಳೆಯ ಕಿಡ್ನಾಪ್ ಕೇಸ್ನಲ್ಲಿ ಕಾಂಗ್ರೆಸ್- ಜೆಡಿಎಸ್ ಮಧ್ಯೆ ವಾಕ್ಸಮರ ನಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದಕ್ಕೆ ರಾಜ್ಯ ಸರ್ಕಾರದ ಮೇಲೆ ಬಿಜೆಪಿ ನಾಯಕರು ಆರೋಪ ಮಾಡುತ್ತಿದ್ದಾರೆ. ಇನ್ನು ವಿಡಿಯೋಗಳನ್ನ ರಿಲೀಸ್ ಮಾಡಿರೋದು ಡಿಸಿಎಂ ಡಿಕೆ ಶಿವಕುಮಾರ್ ಎಂದು ಗಂಭೀರ ಆರೋಪಗಳನ್ನು ಮಾಡಲಾಗಿದೆ. ಈ ಎಲ್ಲ ಬೆಳವಣಿಗೆ ರಾಜ್ಯದಲ್ಲಿ ನಡೆಯುತ್ತಿದ್ದರು ಸಿಎಂ ಸಿದ್ದರಾಮಯ್ಯ ಇವುಗಳಿಗೆ ಯಾವುದಕ್ಕೂ ಪ್ರತಿಕ್ರಿಯೆ ನೀಡದೇ ಸಚಿವ ಹೆಚ್.ಸಿ ಮಹದೇವಪ್ಪ ಜೊತೆ 3 ದಿನಗಳ ಕಾಲ ವಿಶ್ರಾಂತಿ ಪಡೆಯಲು ಊಟಿಗೆ ತೆರಳುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ