newsfirstkannada.com

ಕಪ್ ಗೆದ್ದುಕೊಟ್ಟ ಮಂದಾನ ಪಡೆಯ ಸಾಹಸಕ್ಕೆ CM ಮೆಚ್ಚುಗೆ; ಹುಡುಗರೂ ಕಪ್ ಗೆಲ್ಲಲಿ ಎಂದ ಸಿದ್ದರಾಮಯ್ಯ

Share :

Published March 18, 2024 at 6:38am

    ‘ಈ ಸಲ ಕಪ್ ಗೆದ್ದಿದ್ದು ನಾವೇ’ RCB ಫ್ಯಾನ್ಸ್​ ಫುಲ್ ಖುಷ್

    ಸತತ 16 ವರ್ಷಗಳ ನಂತರ ಆರ್​​ಸಿಬಿಗೆ ಒಲಿದ ಕಪ್

    ನಮ್ಮ ಹುಡುಗಿಯರ ಆಟ ಅಭಿನಂದನಾರ್ಹ ಎಂದು ಸಿಎಂ ಪ್ರಶಂಸೆ

ಕೋಟ್ಯಾಂತರ ಆರ್​ಸಿಬಿ ಅಭಿಮಾನಿಗಳ ಆಸೆ ಬರೋಬ್ಬರಿ 16 ವರ್ಷಗಳ ಬಳಿಕ ಈಡೇರಿದೆ. ನಿನ್ನೆ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2024ರ ಫೈನಲ್‌ ಕದನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಗೆದ್ದು ಬೀಗಿದೆ. ಈ ಮೂಲಕ ಐಪಿಎಲ್​​ ಕಪ್​ ಗೆಲ್ಲೋ ಆರ್​​ಸಿಬಿ ಕನಸು ಕೊನೆಗೂ ನನಸಾಗಿದೆ.

ಸ್ಮೃತಿ ಮಂದಾನ ಪಡೆ ಆರ್​ಸಿಬಿಗೆ ಕಪ್ ಗೆದ್ದು ಕೊಡ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ. TATAWPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್‌ಶಿಪ್ ಅನ್ನು ಮುಡಿಗೇರಿಸಿಕೊಂಡಿದೆ. ಇಡೀ ಪಂದ್ಯಾಕೂಟದುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ನಮ್ಮ ಹುಡುಗಿಯರ ಆಟ ಅಭಿನಂದನಾರ್ಹ. ಕ್ರಿಕೆಟ್ ಪ್ರೇಮಿಯಾದ ನನಗೆ ಈ ಗೆಲುವು ಅತ್ಯಂತ ಖುಷಿಕೊಟ್ಟಿದೆ.

ಆರ್.ಸಿ.ಬಿ ಅಭಿಮಾನಿಗಳ ದಶಕಗಳ ಕನಸು ಇಂದು ಈಡೇರಿದೆ. ಐಪಿಎಲ್​ನಲ್ಲಿಯೂ ನಮ್ಮ ಹುಡುಗರು ಕಪ್ ಗೆಲ್ಲಲಿ ಎಂಬ ಹಾರೈಕೆ ನನ್ನದು ಎಂದು ಶುಭ ಹಾರೈಸಿದ್ದಾರೆ.

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ಕಪ್ ಗೆದ್ದುಕೊಟ್ಟ ಮಂದಾನ ಪಡೆಯ ಸಾಹಸಕ್ಕೆ CM ಮೆಚ್ಚುಗೆ; ಹುಡುಗರೂ ಕಪ್ ಗೆಲ್ಲಲಿ ಎಂದ ಸಿದ್ದರಾಮಯ್ಯ

https://newsfirstlive.com/wp-content/uploads/2024/03/SIDDU-RCB.jpg

    ‘ಈ ಸಲ ಕಪ್ ಗೆದ್ದಿದ್ದು ನಾವೇ’ RCB ಫ್ಯಾನ್ಸ್​ ಫುಲ್ ಖುಷ್

    ಸತತ 16 ವರ್ಷಗಳ ನಂತರ ಆರ್​​ಸಿಬಿಗೆ ಒಲಿದ ಕಪ್

    ನಮ್ಮ ಹುಡುಗಿಯರ ಆಟ ಅಭಿನಂದನಾರ್ಹ ಎಂದು ಸಿಎಂ ಪ್ರಶಂಸೆ

ಕೋಟ್ಯಾಂತರ ಆರ್​ಸಿಬಿ ಅಭಿಮಾನಿಗಳ ಆಸೆ ಬರೋಬ್ಬರಿ 16 ವರ್ಷಗಳ ಬಳಿಕ ಈಡೇರಿದೆ. ನಿನ್ನೆ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2024ರ ಫೈನಲ್‌ ಕದನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಗೆದ್ದು ಬೀಗಿದೆ. ಈ ಮೂಲಕ ಐಪಿಎಲ್​​ ಕಪ್​ ಗೆಲ್ಲೋ ಆರ್​​ಸಿಬಿ ಕನಸು ಕೊನೆಗೂ ನನಸಾಗಿದೆ.

ಸ್ಮೃತಿ ಮಂದಾನ ಪಡೆ ಆರ್​ಸಿಬಿಗೆ ಕಪ್ ಗೆದ್ದು ಕೊಡ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ. TATAWPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್‌ಶಿಪ್ ಅನ್ನು ಮುಡಿಗೇರಿಸಿಕೊಂಡಿದೆ. ಇಡೀ ಪಂದ್ಯಾಕೂಟದುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ನಮ್ಮ ಹುಡುಗಿಯರ ಆಟ ಅಭಿನಂದನಾರ್ಹ. ಕ್ರಿಕೆಟ್ ಪ್ರೇಮಿಯಾದ ನನಗೆ ಈ ಗೆಲುವು ಅತ್ಯಂತ ಖುಷಿಕೊಟ್ಟಿದೆ.

ಆರ್.ಸಿ.ಬಿ ಅಭಿಮಾನಿಗಳ ದಶಕಗಳ ಕನಸು ಇಂದು ಈಡೇರಿದೆ. ಐಪಿಎಲ್​ನಲ್ಲಿಯೂ ನಮ್ಮ ಹುಡುಗರು ಕಪ್ ಗೆಲ್ಲಲಿ ಎಂಬ ಹಾರೈಕೆ ನನ್ನದು ಎಂದು ಶುಭ ಹಾರೈಸಿದ್ದಾರೆ.

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

Load More