/newsfirstlive-kannada/media/post_attachments/wp-content/uploads/2025/03/cm-siddu-1.jpg)
ಬೆಂಗಳೂರು: ಇತ್ತೀಚೆಗಷ್ಟೇ ಮಂಡಿನೋವು ಹಿನ್ನಲೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಸಿದ್ದರಾಮಯ್ಯ ಸತತ 2 ಗಂಟೆಗೂ ಹೆಚ್ಚು ಕಾಲ ಚಿಕಿತ್ಸೆ ಪಡೆದಿದ್ದರು. ಡಾ. ಸತ್ಯನಾರಾಯಣ ಅವರು ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯ ತಪಾಸಣೆ ಮಾಡಿ ನೀ ಪ್ಯಾಡ್ ಹಾಕಿದ್ದರು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಸಿಎಂ ಸಿದ್ದರಾಮಯ್ಯ ವೈದ್ಯರ ಸಲಹೆ ಮೇರೆಗೆ 2 ತಿಂಗಳು ರೆಸ್ಟ್ ಮಾಡಿದ್ರು.
ಸದ್ಯ 2 ತಿಂಗಳ ನಂತರ ಸಿಎಂ ಸಿದ್ದರಾಮಯ್ಯ ರೊಟಿನ್ ಚೆಕಪ್ಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಸಚಿವ ಜಮೀರ್ ಅಹ್ಮದ್ ಖಾನ್, ರಾಜಕೀಯ ಕಾರ್ಯದರ್ಶಿ ಗೋವಿಂದ್ ರಾಜ್ ಕೂಡ ಇದ್ದರು.
ಇನ್ನು, ಈಗ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ. ಹೀಗಾಗಿ ರೊಟಿನ್ ಚೆಕಪ್ ನಡೆಯುತ್ತಿದ್ದು, ವೈದ್ಯಕೀಯ ತಂಡದಿಂದಲೇ ಸಿದ್ದರಾಮಯ್ಯ ಅವರ ಆರೋಗ್ಯದ ಬಗ್ಗೆ ಅಧಿಕೃತ ಅಪ್ಡೇಟ್ ಸಿಗಲಿದೆ.
ಇದನ್ನೂ ಓದಿ:ಪೋಷಕರೇ ಮಕ್ಕಳಿಗೆ ಕೊಡೋ ಫುಡ್ ಬಗ್ಗೆ ಎಚ್ಚರ! ನೀವು ಓದಲೇಬೇಕಾದ ಸ್ಟೋರಿ ಇದು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ