newsfirstkannada.com

ಅಡ್ವಾಣಿಗೆ ‘ಭಾರತ ರತ್ನ’ ಘೋಷಣೆ; ಸಿದ್ದಗಂಗಾ ಶ್ರೀಗಳಿಗೆ ಯಾಕಿಲ್ಲ ಎಂದ ಸಿಎಂ ಸಿದ್ದರಾಮಯ್ಯ

Share :

Published February 3, 2024 at 3:16pm

    ಎಲ್​.ಕೆ ಅಡ್ವಾಣಿಯವರಿಗೆ ಭಾರತ ರತ್ನ ಘೋಷಿಸಿದ ಸರ್ಕಾರ

    ಸಿದ್ದಗಂಗಾ ಶ್ರೀಗೆ ಭಾರತ ರತ್ನ ನೀಡುವಂತೆ ಮನವಿ ಮಾಡಲಾಗಿದೆ

    ಪ್ರಶಸ್ತಿ ಏಕೆ ನೀಡುತ್ತಿಲ್ಲವೆಂದು ಪ್ರಶ್ನೆ ಮಾಡಿದ CM ಸಿದ್ದರಾಮಯ್ಯ

ದಾವಣಗೆರೆ: ಬಿಜೆಪಿಯ ಹಿರಿಯ ಮುತ್ಸದ್ದಿ ಎಲ್​.ಕೆ ಅಡ್ವಾಣಿಯವರಿಗೆ ಪ್ರತಿಷ್ಠಿತ ಭಾರತರತ್ನ ಪ್ರಶಸ್ತಿ ನೀಡಿದ ಬೆನ್ನಲ್ಲೇ ಸಿದ್ದಗಂಗಾ ಶ್ರೀ ಡಾ.ಶಿವಕುಮಾರ ಸ್ವಾಮೀಜಿಯವರಿಗೆ ಏಕೆ ನೀಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ದಾವಣಗೆರೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು, ಹಿರಿಯ ರಾಜಕಾರಣಿ ಎಲ್​.ಕೆ ಅಡ್ವಾಣಿಯವರಿಗೆ ಪ್ರಶಸ್ತಿ ಕೊಡಲಿ ಬಿಡಿ ಪಾಪಾ. ಅದು ಬೇರೆ ವಿಚಾರ. ಆದರೆ ಸಿದ್ದಗಂಗಾ ಶ್ರೀ ಡಾ.ಶಿವಕುಮಾರ ಸ್ವಾಮೀಜಿಯವರಿಗೆ ಭಾರತ ರತ್ನ ಕೊಡಬೇಕು ಎನ್ನುವುದು ಮೊದಲಿನಿಂದಲೂ ಒತ್ತಾಯವಿದೆ. ಇದಕ್ಕೆ ಸಂಬಂಧಿಸಿದಂತೆ ನಾವು ಕೂಡ ಶ್ರೀಗಳಿಗೆ ಭಾರತ ರತ್ನ ನೀಡಬೇಕು ಎಂದು ಪತ್ರ ಬರೆದು ಮನವಿ ಮಾಡಿದ್ದೇವೆ. ಆದರೂ ಏಕೆ ನೀಡುತ್ತಿಲ್ಲ ಎಂದು ಸಿಎಂ ಪ್ರಶ್ನೆ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅಡ್ವಾಣಿಗೆ ‘ಭಾರತ ರತ್ನ’ ಘೋಷಣೆ; ಸಿದ್ದಗಂಗಾ ಶ್ರೀಗಳಿಗೆ ಯಾಕಿಲ್ಲ ಎಂದ ಸಿಎಂ ಸಿದ್ದರಾಮಯ್ಯ

https://newsfirstlive.com/wp-content/uploads/2024/02/SIDDAGANGA_SHRI.jpg

    ಎಲ್​.ಕೆ ಅಡ್ವಾಣಿಯವರಿಗೆ ಭಾರತ ರತ್ನ ಘೋಷಿಸಿದ ಸರ್ಕಾರ

    ಸಿದ್ದಗಂಗಾ ಶ್ರೀಗೆ ಭಾರತ ರತ್ನ ನೀಡುವಂತೆ ಮನವಿ ಮಾಡಲಾಗಿದೆ

    ಪ್ರಶಸ್ತಿ ಏಕೆ ನೀಡುತ್ತಿಲ್ಲವೆಂದು ಪ್ರಶ್ನೆ ಮಾಡಿದ CM ಸಿದ್ದರಾಮಯ್ಯ

ದಾವಣಗೆರೆ: ಬಿಜೆಪಿಯ ಹಿರಿಯ ಮುತ್ಸದ್ದಿ ಎಲ್​.ಕೆ ಅಡ್ವಾಣಿಯವರಿಗೆ ಪ್ರತಿಷ್ಠಿತ ಭಾರತರತ್ನ ಪ್ರಶಸ್ತಿ ನೀಡಿದ ಬೆನ್ನಲ್ಲೇ ಸಿದ್ದಗಂಗಾ ಶ್ರೀ ಡಾ.ಶಿವಕುಮಾರ ಸ್ವಾಮೀಜಿಯವರಿಗೆ ಏಕೆ ನೀಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ದಾವಣಗೆರೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು, ಹಿರಿಯ ರಾಜಕಾರಣಿ ಎಲ್​.ಕೆ ಅಡ್ವಾಣಿಯವರಿಗೆ ಪ್ರಶಸ್ತಿ ಕೊಡಲಿ ಬಿಡಿ ಪಾಪಾ. ಅದು ಬೇರೆ ವಿಚಾರ. ಆದರೆ ಸಿದ್ದಗಂಗಾ ಶ್ರೀ ಡಾ.ಶಿವಕುಮಾರ ಸ್ವಾಮೀಜಿಯವರಿಗೆ ಭಾರತ ರತ್ನ ಕೊಡಬೇಕು ಎನ್ನುವುದು ಮೊದಲಿನಿಂದಲೂ ಒತ್ತಾಯವಿದೆ. ಇದಕ್ಕೆ ಸಂಬಂಧಿಸಿದಂತೆ ನಾವು ಕೂಡ ಶ್ರೀಗಳಿಗೆ ಭಾರತ ರತ್ನ ನೀಡಬೇಕು ಎಂದು ಪತ್ರ ಬರೆದು ಮನವಿ ಮಾಡಿದ್ದೇವೆ. ಆದರೂ ಏಕೆ ನೀಡುತ್ತಿಲ್ಲ ಎಂದು ಸಿಎಂ ಪ್ರಶ್ನೆ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More