/newsfirstlive-kannada/media/post_attachments/wp-content/uploads/2024/08/Siddaramaiah-8.jpg)
ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಆರೋಪಿ ದರ್ಶನ್​ಗೆ​​ ನೀಡುವ ರಾಜಾತಿಥ್ಯ ವಿಚಾರ ಸುದ್ದಿ ತಿಳಿದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದಾರೆ. ದರ್ಶನ್ ಮತ್ತು ಇತರರನ್ನ ಬೇರೆ ಜೈಲುಗಳಿಗೆ ಶಿಫ್ಟ್ ಮಾಡಿ ಎಂದು ಹೇಳಿದ್ದಾರೆ.
ರಾಜಾತಿಥ್ಯ ಸಿಕ್ಕಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಿಎಂ ಸಿದ್ದರಾಮಯ್ಯನವರು ದರ್ಶನ್​ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡಿ ಎಂದು DGIGP ಅಲೋಕ್ ಮೋಹನ್​ಗೆ ಸೂಚನೆ ನೀಡಿದ್ದಾರೆ. ಮಾತ್ರವಲ್ಲದೆ, ಪ್ರಕರಣದ ಸಂಪೂರ್ಣ ವರದಿ ನೀಡುವಂತೆ ಸೂಚಿಸಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್​​ ಅವರು ದರ್ಶನ್​ಗೆ ಜೈಲಿನಲ್ಲಿ ಆತಿಥ್ಯ ನೀಡಿದ್ದಕ್ಕೆ 7 ಅಧಿಕಾರಿಗಳನ್ನು ಅಮಾನತು ಮಾಡಲು ಸೂಚಿಸಿದ್ದಾರೆ. ಈ ಬಗ್ಗೆ ವಿಚಾರ ನಿನ್ನೆ ಗೊತ್ತಾಯಿತು. ಹಿರಿಯ ಅಧಿಕಾರಿಗಳು ಭಾಗಿಯಾಗಿದ್ರೂ ಅವರ ಮೇಲೂ ಕ್ರಮ ಕೈಗೊಳ್ಳುತ್ತೇವೆ. ಜೈಲಿನ ಸಿಬ್ಬಂದಿ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us