ಅನ್ನಭಾಗ್ಯ ಯೋಜನೆ ಬಗ್ಗೆ ಸಿಎಂ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ
'ದುಡ್ಡು ಕೊಟ್ರೂ ಕರ್ನಾಟಕಕ್ಕೆ ಅಕ್ಕಿ ಕೊಡಲ್ಲ ಎಂದು ಮೋದಿ ಸರ್ಕಾರ'
ಕರ್ನಾಟಕದ ಬಡವರಿಗೆ ಅಕ್ಕಿ ನೀಡದೆ ಕೇಂದ್ರ ಷಡ್ಯಂತ್ರ ಎಂದ ಸಿದ್ದು!
ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ನೀಡಿದ್ದ ಭರವಸೆಯಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಅಧಿಕೃತವಾಗಿ ಜಾರಿ ಮಾಡಿದೆ. ಜುಲೈ 1ನೇ ತಾರೀಕಿನಿಂದಲೇ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿರುವ ಎಲ್ಲಾ ಕುಟುಂಬಗಳಿಗೂ ತಲಾ 10 ಕೆಜಿ ಆಹಾರ ಧಾನ್ಯ ಪೂರೈಕೆ ಮಾಡಲಾಗುವುದು ಎಂದು ಘೋಷಿಸಿತ್ತು. ಹೀಗಿರುವಾಗಲೇ ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆ ಕುರಿತು ತುರ್ತು ಸುದ್ದಿಗೋಷ್ಠಿ ನಡೆಸಿದ್ದಾರೆ.
ಶಕ್ತಿ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಸಿಎಂ ಸಿದ್ದರಾಮಯ್ಯ, ಈ ಹಿಂದಿನ ಬಿಜೆಪಿ ಸರ್ಕಾರ 7 ಕೆಜಿ ಅಕ್ಕಿ ಕೊಡುವ ಕಡೆ 5 ಕೆಜಿ ಕೊಡುತ್ತಿತ್ತು. ಚುನಾವಣೆ ಸಂದರ್ಭದಲ್ಲಿ ನಾವು ಅಧಿಕಾರಕ್ಕೆ ಬಂದರೆ 10 ಕೆಜಿ ಕೊಡುವುದಾಗಿ ಭರವಸೆ ನೀಡಿದ್ದೆವು. ಅಕ್ಕಿ ಸಂಗ್ರಹ ಇಲ್ಲದ ಕಾರಣ ಮುಂದಿನ ತಿಂಗಳಿನಿಂದ ಅನ್ನ ಭಾಗ್ಯ ಯೋಜನೆಯಡಿ ಬಿಪಿಎಲ್, ಅಂತ್ಯೋದಯ ಕಾರ್ಡ್ದಾರರಿಗೆ ತಲಾ 10 ಕೆಜಿ ಆಹಾರ ಧಾನ್ಯ ವಿತರಿಸಲು ಸರ್ಕಾರ ಮಾಡಿದ್ದೆವು ಎಂದರು.
ಈಗಾಗಲೇ ರಾಜ್ಯ ಸರ್ಕಾರ ಐದು ಕೆಜಿ ಅಕ್ಕಿ ಕೊಡುತ್ತಿದೆ. ಅದಕ್ಕೆ ಹೆಚ್ಚುವರಿಯಾಗಿ ಇನ್ನೂ ಐದು ಕೆಜಿ ಎಂದರೆ ಒಟ್ಟು 10 ಕೆಜಿ ನೀಡುವ ಭರವಸೆ ಕೊಟ್ಟಿದ್ದೇವೆ. ಹೀಗಾಗಿ ನಮಗೆ ತಿಂಗಳಿಗೆ 2,28,000 ಮೆಟ್ರಿಕ್ ಟನ್ ಬೇಕಾಗುತ್ತದೆ. 5ಕ್ಕೆ ಐದು ಕೆಜಿ ಸೇರಿಸಿ ಒಟ್ಟು 10 ಕೆಜಿ ಕೊಡಬೇಕಾದರೆ ನಮಗೆ ಇಷ್ಟು ಅಕ್ಕಿ ಅಗತ್ಯ ಇದೆ. ಇದಕ್ಕೆ ತಿಂಗಳಿಗೆ 840 ಕೋಟಿ, ವರ್ಷಕ್ಕೆ 10,092 ಕೋಟಿ ಖರ್ಚು ಆಗಲಿದೆ. ಇದಕ್ಕೆ ಸಂಪುಟದಲ್ಲಿ ತೀರ್ಮಾನವು ಆಗಿದೆ. ನಾವು ಕೇಳಿದಷ್ಟು ಅಕ್ಕಿಯನ್ನು ಕೇಂದ್ರೀಯ ಆಹಾರ ನಿಗಮದ ಡೆಪ್ಯುಟಿ ಜನರಲ್ ಮ್ಯಾನೇಜರ್ ಒಪ್ಪಿಕೊಂಡಿದ್ದರು. ಈಗ ಅಕ್ಕಿ ಕೊಡಕ್ಕೆ ಆಗುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದರು.
ದುಡ್ಡು ಕೊಟ್ರೂ ಅಕ್ಕಿ ಕೊಡಲ್ಲ ಎಂದ ಮೋದಿ ಸರ್ಕಾರ- ಸಿದ್ದರಾಮಯ್ಯ
ನಮ್ಮ ಬಳಿ ಸ್ಟಾಕ್ ಇಲ್ಲದ ಕಾರಣ ಮುಂದಿನ ತಿಂಗಳಿನಿಂದ ಕೊಡುತ್ತೇವೆ ಎಂದಿದ್ದೆವು. ನಮಗೆ 7 ಲಕ್ಷ ಟನ್ ಅಕ್ಕಿ ಎಂದು ಕೇಂದ್ರೀಯ ಆಹಾರ ನಿಗಮದ ಡೆಪ್ಯುಟಿ ಜನರಲ್ ಮ್ಯಾನೇಜರ್ ಹೇಳಿದ್ದರು. ಈಗ ದಿಢೀರ್ ನಾವು ರಾಜ್ಯಗಳಿಗೆ ಕೊಡಲ್ಲ ಎಂದಿದ್ದಾರೆ. ಇದು ನೇರವಾಗಿ ಕೇಂದ್ರ ಸರ್ಕಾರದ ನಿರ್ಣಯ. ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅಕ್ಕಿ ಕೊಡಲ್ಲ ಎನ್ನುತ್ತಿದೆ ಎಂದು ಆರೋಪ ಮಾಡಿದ್ದಾರೆ.
ಬಡವರಿಗೆ ಅಕ್ಕಿ ಕೊಟ್ಟರೆ ಕಾಂಗ್ರೆಸ್ಗೆ ಒಳ್ಳೇ ಹೆಸರು ಬಂದು ಬಿಡುತ್ತದೆ ಎಂದು ಬಿಜೆಪಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಅಕ್ಕಿ ಇಟ್ಟುಕೊಂಡು ಬಿಜೆಪಿ ಕೊಡಲ್ಲ ಎನ್ನುತ್ತಿದೆ. ನಾವು ದುಡ್ಡು ಕೊಟ್ಟರೂ ಕೊಡಲ್ಲ ಎನ್ನುತ್ತಿದೆ. ಇದು ಪಕ್ಕಾ ರಾಜಕೀಯ ಎಂದು ವಾಗ್ದಾಳಿ ನಡೆಸಿದರು.
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ
ಅನ್ನಭಾಗ್ಯ ಯೋಜನೆ ಬಗ್ಗೆ ಸಿಎಂ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ
'ದುಡ್ಡು ಕೊಟ್ರೂ ಕರ್ನಾಟಕಕ್ಕೆ ಅಕ್ಕಿ ಕೊಡಲ್ಲ ಎಂದು ಮೋದಿ ಸರ್ಕಾರ'
ಕರ್ನಾಟಕದ ಬಡವರಿಗೆ ಅಕ್ಕಿ ನೀಡದೆ ಕೇಂದ್ರ ಷಡ್ಯಂತ್ರ ಎಂದ ಸಿದ್ದು!
ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ನೀಡಿದ್ದ ಭರವಸೆಯಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಅಧಿಕೃತವಾಗಿ ಜಾರಿ ಮಾಡಿದೆ. ಜುಲೈ 1ನೇ ತಾರೀಕಿನಿಂದಲೇ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿರುವ ಎಲ್ಲಾ ಕುಟುಂಬಗಳಿಗೂ ತಲಾ 10 ಕೆಜಿ ಆಹಾರ ಧಾನ್ಯ ಪೂರೈಕೆ ಮಾಡಲಾಗುವುದು ಎಂದು ಘೋಷಿಸಿತ್ತು. ಹೀಗಿರುವಾಗಲೇ ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆ ಕುರಿತು ತುರ್ತು ಸುದ್ದಿಗೋಷ್ಠಿ ನಡೆಸಿದ್ದಾರೆ.
ಶಕ್ತಿ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಸಿಎಂ ಸಿದ್ದರಾಮಯ್ಯ, ಈ ಹಿಂದಿನ ಬಿಜೆಪಿ ಸರ್ಕಾರ 7 ಕೆಜಿ ಅಕ್ಕಿ ಕೊಡುವ ಕಡೆ 5 ಕೆಜಿ ಕೊಡುತ್ತಿತ್ತು. ಚುನಾವಣೆ ಸಂದರ್ಭದಲ್ಲಿ ನಾವು ಅಧಿಕಾರಕ್ಕೆ ಬಂದರೆ 10 ಕೆಜಿ ಕೊಡುವುದಾಗಿ ಭರವಸೆ ನೀಡಿದ್ದೆವು. ಅಕ್ಕಿ ಸಂಗ್ರಹ ಇಲ್ಲದ ಕಾರಣ ಮುಂದಿನ ತಿಂಗಳಿನಿಂದ ಅನ್ನ ಭಾಗ್ಯ ಯೋಜನೆಯಡಿ ಬಿಪಿಎಲ್, ಅಂತ್ಯೋದಯ ಕಾರ್ಡ್ದಾರರಿಗೆ ತಲಾ 10 ಕೆಜಿ ಆಹಾರ ಧಾನ್ಯ ವಿತರಿಸಲು ಸರ್ಕಾರ ಮಾಡಿದ್ದೆವು ಎಂದರು.
ಈಗಾಗಲೇ ರಾಜ್ಯ ಸರ್ಕಾರ ಐದು ಕೆಜಿ ಅಕ್ಕಿ ಕೊಡುತ್ತಿದೆ. ಅದಕ್ಕೆ ಹೆಚ್ಚುವರಿಯಾಗಿ ಇನ್ನೂ ಐದು ಕೆಜಿ ಎಂದರೆ ಒಟ್ಟು 10 ಕೆಜಿ ನೀಡುವ ಭರವಸೆ ಕೊಟ್ಟಿದ್ದೇವೆ. ಹೀಗಾಗಿ ನಮಗೆ ತಿಂಗಳಿಗೆ 2,28,000 ಮೆಟ್ರಿಕ್ ಟನ್ ಬೇಕಾಗುತ್ತದೆ. 5ಕ್ಕೆ ಐದು ಕೆಜಿ ಸೇರಿಸಿ ಒಟ್ಟು 10 ಕೆಜಿ ಕೊಡಬೇಕಾದರೆ ನಮಗೆ ಇಷ್ಟು ಅಕ್ಕಿ ಅಗತ್ಯ ಇದೆ. ಇದಕ್ಕೆ ತಿಂಗಳಿಗೆ 840 ಕೋಟಿ, ವರ್ಷಕ್ಕೆ 10,092 ಕೋಟಿ ಖರ್ಚು ಆಗಲಿದೆ. ಇದಕ್ಕೆ ಸಂಪುಟದಲ್ಲಿ ತೀರ್ಮಾನವು ಆಗಿದೆ. ನಾವು ಕೇಳಿದಷ್ಟು ಅಕ್ಕಿಯನ್ನು ಕೇಂದ್ರೀಯ ಆಹಾರ ನಿಗಮದ ಡೆಪ್ಯುಟಿ ಜನರಲ್ ಮ್ಯಾನೇಜರ್ ಒಪ್ಪಿಕೊಂಡಿದ್ದರು. ಈಗ ಅಕ್ಕಿ ಕೊಡಕ್ಕೆ ಆಗುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದರು.
ದುಡ್ಡು ಕೊಟ್ರೂ ಅಕ್ಕಿ ಕೊಡಲ್ಲ ಎಂದ ಮೋದಿ ಸರ್ಕಾರ- ಸಿದ್ದರಾಮಯ್ಯ
ನಮ್ಮ ಬಳಿ ಸ್ಟಾಕ್ ಇಲ್ಲದ ಕಾರಣ ಮುಂದಿನ ತಿಂಗಳಿನಿಂದ ಕೊಡುತ್ತೇವೆ ಎಂದಿದ್ದೆವು. ನಮಗೆ 7 ಲಕ್ಷ ಟನ್ ಅಕ್ಕಿ ಎಂದು ಕೇಂದ್ರೀಯ ಆಹಾರ ನಿಗಮದ ಡೆಪ್ಯುಟಿ ಜನರಲ್ ಮ್ಯಾನೇಜರ್ ಹೇಳಿದ್ದರು. ಈಗ ದಿಢೀರ್ ನಾವು ರಾಜ್ಯಗಳಿಗೆ ಕೊಡಲ್ಲ ಎಂದಿದ್ದಾರೆ. ಇದು ನೇರವಾಗಿ ಕೇಂದ್ರ ಸರ್ಕಾರದ ನಿರ್ಣಯ. ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅಕ್ಕಿ ಕೊಡಲ್ಲ ಎನ್ನುತ್ತಿದೆ ಎಂದು ಆರೋಪ ಮಾಡಿದ್ದಾರೆ.
ಬಡವರಿಗೆ ಅಕ್ಕಿ ಕೊಟ್ಟರೆ ಕಾಂಗ್ರೆಸ್ಗೆ ಒಳ್ಳೇ ಹೆಸರು ಬಂದು ಬಿಡುತ್ತದೆ ಎಂದು ಬಿಜೆಪಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಅಕ್ಕಿ ಇಟ್ಟುಕೊಂಡು ಬಿಜೆಪಿ ಕೊಡಲ್ಲ ಎನ್ನುತ್ತಿದೆ. ನಾವು ದುಡ್ಡು ಕೊಟ್ಟರೂ ಕೊಡಲ್ಲ ಎನ್ನುತ್ತಿದೆ. ಇದು ಪಕ್ಕಾ ರಾಜಕೀಯ ಎಂದು ವಾಗ್ದಾಳಿ ನಡೆಸಿದರು.
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ