newsfirstkannada.com

ವಿದ್ಯುತ್ ಕದ್ದಿರುವ ಕುಮಾರಸ್ವಾಮಿಗೆ ಮಾತಾಡುವ ಯಾವ ನೈತಿಕತೆಯೂ ಇಲ್ಲ -ಸಿದ್ದರಾಮಯ್ಯ ವಾಗ್ದಾಳಿ

Share :

21-11-2023

    ಏನಿದು ಕುಮಾರಸ್ವಾಮಿ ವಿರುದ್ಧ ವಿದ್ಯುತ್ ಕದ್ದ ಆರೋಪ

    ಕೊಪ್ಪಳದಲ್ಲಿ ಸಿದ್ದರಾಮಯ್ಯ ಹೆಚ್​​ಡಿಕೆ ವಿರುದ್ಧ ಗುಡುಗು

    ನಾವು ಮಾಡಿದ್ರೆ ದಿವಾಳಿ, ಬಿಜೆಪಿ ಮಾಡಿದ್ರೆ ಉದ್ದಾರನಾ? -CM

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ವಿರೋಧಿಸಿದವರೇ ಈಗ ಬೇರೆ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಜನರಿಗೆ ಗ್ಯಾರಂಟಿ ನೀಡಲು ಮುಂದಾಗಿದ್ದಾರೆ. ಇದು ವಿಪರ್ಯಾಸ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ನುಡಿದಂತೆ ನಡೆಯದವರು. ನಾವು ಯಾವುದೇ ಯೋಜನೆ ಮಾಡಿದರೆ ರಾಜ್ಯ, ದೇಶ ದಿವಾಳಿಯಾಗುತ್ತದೆ. ಅದೇ ಬಿಜೆಪಿಯವರು ಮಾಡಿದರೆ ಅದು ಹೇಗೆ ಉದ್ದಾರ ಮಾಡುವ ಕೆಲಸವಾಗುತ್ತದೆ ಎಂದು ಪ್ರಶ್ನಿಸಿದ್ರು. ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತ್ರಿಕ್ರಿಯಿಸಿದ ಸಿಎಂ, ವಿದ್ಯುತ್ ಕದ್ದಿರುವ ಕುಮಾರಸ್ವಾಮಿಗೆ ನಮ್ಮ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ ಅಂತ ತಿರುಗೇಟು ನೀಡಿದ್ದಾರೆ. ನವೆಂಬರ್ 14 ರಂದು ಕುಮಾರಸ್ವಾಮಿ ವಿರುದ್ಧ ವಿದ್ಯುತ್ ಕದ್ದ ಕಳ್ಳ ಎಂದು ಆರೋಪಿಸಿತ್ತು.

ಏನಿದು ಆರೋಪ..?

ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ.ಪಿ.ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ!

ಕುಮಾರಸ್ವಾಮಿ ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ! ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ, ಒಹ್, ತಿಳಿದಿರಲಿಲ್ಲ ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದೇ ಮೀಟರ್​ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್ ಗಳಿವೆಯಲ್ಲವೇ!

ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತಾನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು ಬರ ಎದುರಿಸುತ್ತಿದ್ದೀರಾ? ಅದೇನೋ ಪತ್ರಿಕಾಗೋಷ್ಠಿ ನಡೆಸಿ ಕರ್ನಾಟಕ ಕತ್ತಲಲ್ಲಿದೆ ಎನ್ನುತ್ತಾ ಬಡಬಡಿಸಿದ್ದಿರಲ್ಲವೇ, ಈಗ ಕದ್ದ ವಿದ್ಯುತ್ತಿನಲ್ಲಿ ನಿಮ್ಮ ಮನೆಗೆ ಬೆಳಕು ಮಾಡಿಕೊಂಡಿದ್ದೀರಿ. ನಿಮ್ಮ ಮನೆ ಹೀಗೆ ಜಗಮಗ ಹೊಳೆಯುತ್ತಿರುವಾಗ ಅದ್ಯಾವ ಬಾಯಲ್ಲಿ ಕರ್ನಾಟಕ ಕತ್ತಲಲ್ಲಿದೆ ಎನ್ನುವಿರಿ ಸ್ವಾಮಿ?!

ನಿಮ್ಮದೇ ಶೈಲಿಯ ಪ್ರಶ್ನೆ ಕೇಳಬೇಕೆಂದರೆ ರಾಜ್ಯ ಬರ ಎದುರಿಸುತ್ತಿರುವಾಗ ನಿಮ್ಮ ಮನೆ ಮಾತ್ರ ಜಗಮಗಿಸಬೇಕೆ? ರೈತರ ಪಾಲಿನ ವಿದ್ಯುತ್ ಕಳ್ಳತನ ಮಾಡಿ ಮೋಜು ಮಾಡಬೇಕೆ? ನಿಮ್ಮ ಮನೆಯ ದೀಪಾವಳಿಗೆ ರಾಜ್ಯದ ಜನರ ದಿವಾಳಿಯನ್ನು ಬಯಸುತ್ತಿದ್ದೀರಾ? ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು? ಎಂದು ಕಾಂಗ್ರೆಸ್​ ಪ್ರಶ್ನೆ ಮಾಡಿತ್ತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ವಿದ್ಯುತ್ ಕದ್ದಿರುವ ಕುಮಾರಸ್ವಾಮಿಗೆ ಮಾತಾಡುವ ಯಾವ ನೈತಿಕತೆಯೂ ಇಲ್ಲ -ಸಿದ್ದರಾಮಯ್ಯ ವಾಗ್ದಾಳಿ

https://newsfirstlive.com/wp-content/uploads/2023/11/HDK-8.jpg

    ಏನಿದು ಕುಮಾರಸ್ವಾಮಿ ವಿರುದ್ಧ ವಿದ್ಯುತ್ ಕದ್ದ ಆರೋಪ

    ಕೊಪ್ಪಳದಲ್ಲಿ ಸಿದ್ದರಾಮಯ್ಯ ಹೆಚ್​​ಡಿಕೆ ವಿರುದ್ಧ ಗುಡುಗು

    ನಾವು ಮಾಡಿದ್ರೆ ದಿವಾಳಿ, ಬಿಜೆಪಿ ಮಾಡಿದ್ರೆ ಉದ್ದಾರನಾ? -CM

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ವಿರೋಧಿಸಿದವರೇ ಈಗ ಬೇರೆ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಜನರಿಗೆ ಗ್ಯಾರಂಟಿ ನೀಡಲು ಮುಂದಾಗಿದ್ದಾರೆ. ಇದು ವಿಪರ್ಯಾಸ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ನುಡಿದಂತೆ ನಡೆಯದವರು. ನಾವು ಯಾವುದೇ ಯೋಜನೆ ಮಾಡಿದರೆ ರಾಜ್ಯ, ದೇಶ ದಿವಾಳಿಯಾಗುತ್ತದೆ. ಅದೇ ಬಿಜೆಪಿಯವರು ಮಾಡಿದರೆ ಅದು ಹೇಗೆ ಉದ್ದಾರ ಮಾಡುವ ಕೆಲಸವಾಗುತ್ತದೆ ಎಂದು ಪ್ರಶ್ನಿಸಿದ್ರು. ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತ್ರಿಕ್ರಿಯಿಸಿದ ಸಿಎಂ, ವಿದ್ಯುತ್ ಕದ್ದಿರುವ ಕುಮಾರಸ್ವಾಮಿಗೆ ನಮ್ಮ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ ಅಂತ ತಿರುಗೇಟು ನೀಡಿದ್ದಾರೆ. ನವೆಂಬರ್ 14 ರಂದು ಕುಮಾರಸ್ವಾಮಿ ವಿರುದ್ಧ ವಿದ್ಯುತ್ ಕದ್ದ ಕಳ್ಳ ಎಂದು ಆರೋಪಿಸಿತ್ತು.

ಏನಿದು ಆರೋಪ..?

ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ.ಪಿ.ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ!

ಕುಮಾರಸ್ವಾಮಿ ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ! ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ, ಒಹ್, ತಿಳಿದಿರಲಿಲ್ಲ ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದೇ ಮೀಟರ್​ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್ ಗಳಿವೆಯಲ್ಲವೇ!

ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತಾನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು ಬರ ಎದುರಿಸುತ್ತಿದ್ದೀರಾ? ಅದೇನೋ ಪತ್ರಿಕಾಗೋಷ್ಠಿ ನಡೆಸಿ ಕರ್ನಾಟಕ ಕತ್ತಲಲ್ಲಿದೆ ಎನ್ನುತ್ತಾ ಬಡಬಡಿಸಿದ್ದಿರಲ್ಲವೇ, ಈಗ ಕದ್ದ ವಿದ್ಯುತ್ತಿನಲ್ಲಿ ನಿಮ್ಮ ಮನೆಗೆ ಬೆಳಕು ಮಾಡಿಕೊಂಡಿದ್ದೀರಿ. ನಿಮ್ಮ ಮನೆ ಹೀಗೆ ಜಗಮಗ ಹೊಳೆಯುತ್ತಿರುವಾಗ ಅದ್ಯಾವ ಬಾಯಲ್ಲಿ ಕರ್ನಾಟಕ ಕತ್ತಲಲ್ಲಿದೆ ಎನ್ನುವಿರಿ ಸ್ವಾಮಿ?!

ನಿಮ್ಮದೇ ಶೈಲಿಯ ಪ್ರಶ್ನೆ ಕೇಳಬೇಕೆಂದರೆ ರಾಜ್ಯ ಬರ ಎದುರಿಸುತ್ತಿರುವಾಗ ನಿಮ್ಮ ಮನೆ ಮಾತ್ರ ಜಗಮಗಿಸಬೇಕೆ? ರೈತರ ಪಾಲಿನ ವಿದ್ಯುತ್ ಕಳ್ಳತನ ಮಾಡಿ ಮೋಜು ಮಾಡಬೇಕೆ? ನಿಮ್ಮ ಮನೆಯ ದೀಪಾವಳಿಗೆ ರಾಜ್ಯದ ಜನರ ದಿವಾಳಿಯನ್ನು ಬಯಸುತ್ತಿದ್ದೀರಾ? ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು? ಎಂದು ಕಾಂಗ್ರೆಸ್​ ಪ್ರಶ್ನೆ ಮಾಡಿತ್ತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More