/newsfirstlive-kannada/media/post_attachments/wp-content/uploads/2024/08/cm-siddu-1.jpg)
ರಾಜ್ಯ ಸರ್ಕಾರ ಪೊಲೀಸ್​ ಕಾನ್​ಸ್ಟೆಬಲ್ ಹುದ್ದೆಗಳಿಗೆ ಅರ್ಜಿಗಳನ್ನ ಆಹ್ವಾನ ಮಾಡಬೇಕಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಪೊಲೀಸ್​ ಕಾನ್​ಸ್ಟೆಬಲ್​ ಆಕಾಂಕ್ಷಿಗಳಿಗೆ ಶುಭ ಸುದ್ದಿ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಕಾನ್ಸ್ಟೇಬಲ್ ನೇಮಕಾತಿ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಹೆಚ್ಚಳ ಮಾಡುವ ಕುರಿತು ಈ ಒಂದು ಬಾರಿ ನಿರ್ಧಾರ ತೆಗೆದುಕೊಳ್ಳುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರಿಗೆ ಸೂಚಿಸಿದ್ದಾರೆ. ಆದರೆ ಈ ಬಗ್ಗೆ ಗೃಹ ಸಚಿವರಿಂದ ಅಂತಿಮ ನಿರ್ಧಾರ ಹೊರ ಬೀಳಬೇಕಿದೆ. ಅವಾಗಿನವರೆಗೆ ಮೊದಲಿನಿಂತೆ ನಿಯಮ ಇರಲಿದೆ. ಒಂದು ವೇಳೆ ರಾಜ್ಯ ಸರ್ಕಾರ ವಯೋಮಿತಿಯನ್ನು ಹೆಚ್ಚಳ ಮಾಡಿದರೆ ಕಾನ್​ಸ್ಟೆಬಲ್ ಹುದ್ದೆಗಳಿಗೆ ಭಾರೀ ಸಂಖ್ಯೆಯಲ್ಲಿ ಅರ್ಜಿಗಳು ಹರಿದು ಬರಲಿವೆ. ಇದರಿಂದ ರಾಜ್ಯ ಸರ್ಕಾರದ ಬೊಕ್ಕಸವು ತುಂಬಲಿದೆ.
ಇದನ್ನೂ ಓದಿ: ಕರ್ನಾಟಕದ ರೆವಿನ್ಯೂ ಇಲಾಖೆಯಲ್ಲಿ ಬೃಹತ್ ಹುದ್ದೆಗಳ ನೇಮಕಾತಿ.. ಅರ್ಜಿ ಆರಂಭ, ಕೊನೆ ದಿನಾಂಕ?
/newsfirstlive-kannada/media/post_attachments/wp-content/uploads/2024/09/JOB_POLICE_NEW.jpg)
ಕಾನ್ಸ್ಟೇಬಲ್ ನೇಮಕಾತಿ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಹೆಚ್ಚಳ ಮಾಡುವಂತೆ ಬೇಡಿಕೆ ಈಗಾಗಲೇ ಬಂದಿದೆ. ಒಂದು ಬಾರಿ ನಿರ್ಧಾರ ತೆಗೆದುಕೊಳ್ಳುವಂತೆ ಗೃಹ ಸಚಿವರಿಗೆ ಸೂಚನೆ ನೀಡಲಾಗಿದೆ. ಗೆಜೆಟೆಡ್​ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟು ಶೀಘ್ರದಲ್ಲೇ ನಡೆಸಬೇಕು ಎಂದು ಕೆಪಿಎಸ್​​ಸಿ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us