newsfirstkannada.com

MLC Election: ಸಿಎಂ ಪುತ್ರನಿಗೆ ಬಂಪರ್‌.. S.R ಪಾಟೀಲ್‌ಗೆ ಬಿಗ್ ಶಾಕ್‌; ಕಾಂಗ್ರೆಸ್ ಅಸಲಿ ಲೆಕ್ಕಾಚಾರವೇನು?

Share :

Published June 2, 2024 at 5:48pm

Update June 2, 2024 at 5:53pm

    ಕಲ್ಯಾಣ ಕರ್ನಾಟಕಕ್ಕೆ ಬಂಪರ್‌, ಅಚ್ಚರಿಯಾಗಿ ಆಯ್ಕೆಯಾದ ಅಭ್ಯರ್ಥಿ ಯಾರು?

    ವಿಧಾನಪರಿಷತ್‌ಗೆ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದ ಎಸ್‌.ಆರ್. ಪಾಟೀಲ್

    ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಓರ್ವ ಲಿಂಗಾಯತ ನಾಯಕನಿಗೆ ಸ್ಥಾನ

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಗೆ ಇಂದು ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದೇ ಜೂನ್ 13ರಂದು ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನೂತನ ಸದಸ್ಯರ ಆಯ್ಕೆ ನಡೆಯಲಿದೆ.

ಕಾಂಗ್ರೆಸ್‌ ಪಕ್ಷ ಹೊಂದಿರುವ ಸಂಖ್ಯಾಬಲದ ಆಧಾರದಲ್ಲಿ ವಿಧಾನಸಭೆಯಿಂದ 7 ಸದಸ್ಯರನ್ನು ವಿಧಾನಪರಿಷತ್‌ಗೆ ಸುಲಭವಾಗಿ ಆಯ್ಕೆ ಮಾಡಲು ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಇಂದು 7 ಕಾಂಗ್ರೆಸ್‌ ನಾಯಕರಿಗೆ ಟಿಕೆಟ್‌ ಘೋಷಣೆ ಮಾಡಿದೆ.

ಇದನ್ನೂ ಓದಿ: ವಿಧಾನಪರಿಷತ್​ ಕದನಕ್ಕೆ ಕಲಿಗಳ ಆಯ್ಕೆಯೇ ದೊಡ್ಡ ಟೆನ್ಷನ್; ಟಿಕೆಟ್​ ವಿಚಾರದಲ್ಲಿ ಸಿಎಂ ಎಚ್ಚರಿಕೆ.. ಏನದು? 

ಎಂಎಲ್‌ಸಿ ಚುನಾವಣೆಗೆ ಟಿಕೆಟ್ ಪಡೆಯಲು ಕಾಂಗ್ರೆಸ್‌ನ ನೂರಾರು ನಾಯಕರು ಸಾಕಷ್ಟು ಸರ್ಕಸ್ ಮಾಡಿದ್ದರು. ಎಲ್ಲಾ ಮಾನದಂಡಗಳನ್ನು ತಾಳೆ ಮಾಡಿರುವ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಅಭ್ಯರ್ಥಿಗಳ ಅಂತಿಮಗೊಳಿಸಿ ಇಂದು ಪ್ರಕಟ ಮಾಡಿದೆ.

ಇದನ್ನೂ ಓದಿ: BREAKING: ವಿಧಾನಪರಿಷತ್ ಚುನಾವಣೆ: ಮೂರು ಸ್ಥಾನಕ್ಕೆ BJP ಟಿಕೆಟ್ ಘೋಷಣೆ; ಯಾರಿಗೆ ಬಂಪರ್‌? 

ಕಾಂಗ್ರೆಸ್‌ ಜಾತಿವಾರು ಲೆಕ್ಕಾಚಾರ

  1. ಯತೀಂದ್ರ ಸಿದ್ದರಾಮಯ್ಯ (ಕುರುಬ)
  2. ಗೋವಿಂದರಾಜು (ಒಕ್ಕಲಿಗ)
  3. ಐವಾನ್ ಡಿಸೋಜ (ಕ್ರಿಶ್ಚಿಯನ್)
  4. ಬಿಲ್ಕಿಸ್ ಬಾನು (ಮುಸ್ಲಿಂ)
  5. ಬೋಸರಾಜು (ಕ್ಷತ್ರಿಯ)
  6. ಜಗದೇವ ಗುತ್ತೇದಾರ್ (ಈಡಿಗ)
  7. ವಸಂತ ಕುಮಾರ್ (ಎಸ್‌ಸಿ)

ಈ ಜಾತಿವಾರು ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ಹಿಂದುಳಿದ ವರ್ಗಕ್ಕೆ ಆದ್ಯತೆ ನೀಡಿದೆ. 7 ಸ್ಥಾನಗಳ ಪೈಕಿ ಹಿಂದುಳಿದ ವರ್ಗದ ಮೂವರಿಗೆ ಕಾಂಗ್ರೆಸ್ ಹೈಕಮಾಂಡ್‌ ಮಣೆ ಹಾಕಿದೆ. ಯತೀಂದ್ರ ಸಿದ್ದರಾಮಯ್ಯ (ಕುರುಬ), ಭೋಸ್ ರಾಜ್ (ಕ್ಷತ್ರಿಯ) ಹಾಗೂ ಜಗದೇವ್ ಗುತ್ತೇದಾರ್‌ಗೆ (ಈಡಿಗ) ಅವಕಾಶ ನೀಡಲಾಗಿದೆ.

ಕಾಂಗ್ರೆಸ್‌ ಹೈಕಮಾಂಡ್ ಪಾರುಪತ್ಯ!
ವಿಧಾನ ಪರಿಷತ್ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಪಾರುಪತ್ಯ ಮೆರೆದಿದ್ದು, ಕಲ್ಯಾಣ ಕರ್ನಾಟಕಕ್ಕೆ ಈ ಬಾರಿ ಬಂಪರ್ ಲಾಟರಿ ಎನ್ನಬಹುದು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೋಟಾದಡಿಯಲ್ಲಿ ವಸಂತ ಕುಮಾರ್, ಜಗದೇವ್ ಗುತ್ತೇದಾರ್ ಅವರು ಆಯ್ಕೆಯಾಗಿದ್ದಾರೆ.

ಹೈಕಮಾಂಡ್ ಕೋಟಾದಲ್ಲಿ ಎನ್.ಎಸ್ ಬೋಸರಾಜು ಅವರಿಗೆ ಟಿಕೆಟ್ ನೀಡಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ಕೋಟಾದಲ್ಲಿ ಯತೀಂದ್ರ ಸಿದ್ದರಾಮಯ್ಯ, ಗೋವಿಂದರಾಜು, ಐವಾನ್ ಡಿಸೋಜ ಅವರ ಹೆಸರು ಪ್ರಕಟವಾಗಿದೆ.

ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಕೋಟಾದಲ್ಲಿ ಬಸವನಗೌಡ ಬಾದರ್ಲಿ ಅವರನ್ನು ಆಯ್ಕೆ ಮಾಡಲಾಗಿದೆ.

ಮಹಿಳಾ ಕೋಟಾದಲ್ಲಿ ಈ ಬಾರಿ ಅಚ್ಚರಿ ಅಭ್ಯರ್ಥಿಯಾಗಿ ಶಿವಮೊಗ್ಗ ಜಿಲ್ಲೆಯವರಾದ ಬಲ್ಕಿಸ್ ಬಾನು ಅವರಿಗೆ ಟಿಕೆಟ್ ನೀಡಲಾಗಿದೆ.

ಪರಿಷತ್ ಚುನಾವಣೆಗೆ ಆಯ್ಕೆಯಾದ ಬಿಲ್ಕಿಸ್ ಬಾನು ಹಾಗೂ ಜಗದೇವ ಗುತ್ತೇದಾರ್

ಎಸ್.ಆರ್ ಪಾಟೀಲ್‌ಗೆ ಬಿಗ್‌ ಶಾಕ್‌!
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಎಸ್‌.ಆರ್ ಪಾಟೀಲ್ ಅವರು ಈ ಬಾರಿ ವಿಧಾನಪರಿಷತ್ ಚುನಾವಣೆಗೆ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಮತ್ತೆ ಎಸ್.ಆರ್ ಪಾಟೀಲ್‌ ಅವರಿಗೆ ಕೈ ಕೊಟ್ಟು ಬಿಗ್ ಶಾಕ್ ಕೊಟ್ಟಿದೆ. ಪರಿಷತ್ ಚುನಾವಣೆಗಾಗಿ ಎಸ್‌.ಆರ್. ಪಾಟೀಲ್ ಅವರು ಸ್ವಾಮೀಜಿ ‌ಮೂಲಕ‌ ಲಾಬಿ ಮಾಡಿದ್ದರು. ಆದರೂ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಅವಕಾಶ ನೀಡಿಲ್ಲ.
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಒಬ್ಬ ಲಿಂಗಾಯತ ನಾಯಕರಿಗೆ ಸ್ಥಾನ ನೀಡಲಾಗಿದೆ. ಎಸ್.ಆರ್ ಪಾಟೀಲ್ ಬದಲಿಗೆ ಬಸವನಗೌಡ ಬಾದರ್ಲಿ ಅವಕಾಶ ನೀಡಿದೆ.

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು ಲಿಂಗಾಯತ ಸಮುದಾಯ ಬಸವನಗೌಡ ಬಾದರ್ಲಿ ಅವರನ್ನು ಕಾಂಗ್ರೆಸ್ ಆಯ್ಕೆ ಮಾಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

MLC Election: ಸಿಎಂ ಪುತ್ರನಿಗೆ ಬಂಪರ್‌.. S.R ಪಾಟೀಲ್‌ಗೆ ಬಿಗ್ ಶಾಕ್‌; ಕಾಂಗ್ರೆಸ್ ಅಸಲಿ ಲೆಕ್ಕಾಚಾರವೇನು?

https://newsfirstlive.com/wp-content/uploads/2024/06/Yathindra-Siddaramaiah-MLC.jpg

    ಕಲ್ಯಾಣ ಕರ್ನಾಟಕಕ್ಕೆ ಬಂಪರ್‌, ಅಚ್ಚರಿಯಾಗಿ ಆಯ್ಕೆಯಾದ ಅಭ್ಯರ್ಥಿ ಯಾರು?

    ವಿಧಾನಪರಿಷತ್‌ಗೆ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದ ಎಸ್‌.ಆರ್. ಪಾಟೀಲ್

    ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಓರ್ವ ಲಿಂಗಾಯತ ನಾಯಕನಿಗೆ ಸ್ಥಾನ

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಗೆ ಇಂದು ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದೇ ಜೂನ್ 13ರಂದು ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನೂತನ ಸದಸ್ಯರ ಆಯ್ಕೆ ನಡೆಯಲಿದೆ.

ಕಾಂಗ್ರೆಸ್‌ ಪಕ್ಷ ಹೊಂದಿರುವ ಸಂಖ್ಯಾಬಲದ ಆಧಾರದಲ್ಲಿ ವಿಧಾನಸಭೆಯಿಂದ 7 ಸದಸ್ಯರನ್ನು ವಿಧಾನಪರಿಷತ್‌ಗೆ ಸುಲಭವಾಗಿ ಆಯ್ಕೆ ಮಾಡಲು ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಇಂದು 7 ಕಾಂಗ್ರೆಸ್‌ ನಾಯಕರಿಗೆ ಟಿಕೆಟ್‌ ಘೋಷಣೆ ಮಾಡಿದೆ.

ಇದನ್ನೂ ಓದಿ: ವಿಧಾನಪರಿಷತ್​ ಕದನಕ್ಕೆ ಕಲಿಗಳ ಆಯ್ಕೆಯೇ ದೊಡ್ಡ ಟೆನ್ಷನ್; ಟಿಕೆಟ್​ ವಿಚಾರದಲ್ಲಿ ಸಿಎಂ ಎಚ್ಚರಿಕೆ.. ಏನದು? 

ಎಂಎಲ್‌ಸಿ ಚುನಾವಣೆಗೆ ಟಿಕೆಟ್ ಪಡೆಯಲು ಕಾಂಗ್ರೆಸ್‌ನ ನೂರಾರು ನಾಯಕರು ಸಾಕಷ್ಟು ಸರ್ಕಸ್ ಮಾಡಿದ್ದರು. ಎಲ್ಲಾ ಮಾನದಂಡಗಳನ್ನು ತಾಳೆ ಮಾಡಿರುವ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಅಭ್ಯರ್ಥಿಗಳ ಅಂತಿಮಗೊಳಿಸಿ ಇಂದು ಪ್ರಕಟ ಮಾಡಿದೆ.

ಇದನ್ನೂ ಓದಿ: BREAKING: ವಿಧಾನಪರಿಷತ್ ಚುನಾವಣೆ: ಮೂರು ಸ್ಥಾನಕ್ಕೆ BJP ಟಿಕೆಟ್ ಘೋಷಣೆ; ಯಾರಿಗೆ ಬಂಪರ್‌? 

ಕಾಂಗ್ರೆಸ್‌ ಜಾತಿವಾರು ಲೆಕ್ಕಾಚಾರ

  1. ಯತೀಂದ್ರ ಸಿದ್ದರಾಮಯ್ಯ (ಕುರುಬ)
  2. ಗೋವಿಂದರಾಜು (ಒಕ್ಕಲಿಗ)
  3. ಐವಾನ್ ಡಿಸೋಜ (ಕ್ರಿಶ್ಚಿಯನ್)
  4. ಬಿಲ್ಕಿಸ್ ಬಾನು (ಮುಸ್ಲಿಂ)
  5. ಬೋಸರಾಜು (ಕ್ಷತ್ರಿಯ)
  6. ಜಗದೇವ ಗುತ್ತೇದಾರ್ (ಈಡಿಗ)
  7. ವಸಂತ ಕುಮಾರ್ (ಎಸ್‌ಸಿ)

ಈ ಜಾತಿವಾರು ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ಹಿಂದುಳಿದ ವರ್ಗಕ್ಕೆ ಆದ್ಯತೆ ನೀಡಿದೆ. 7 ಸ್ಥಾನಗಳ ಪೈಕಿ ಹಿಂದುಳಿದ ವರ್ಗದ ಮೂವರಿಗೆ ಕಾಂಗ್ರೆಸ್ ಹೈಕಮಾಂಡ್‌ ಮಣೆ ಹಾಕಿದೆ. ಯತೀಂದ್ರ ಸಿದ್ದರಾಮಯ್ಯ (ಕುರುಬ), ಭೋಸ್ ರಾಜ್ (ಕ್ಷತ್ರಿಯ) ಹಾಗೂ ಜಗದೇವ್ ಗುತ್ತೇದಾರ್‌ಗೆ (ಈಡಿಗ) ಅವಕಾಶ ನೀಡಲಾಗಿದೆ.

ಕಾಂಗ್ರೆಸ್‌ ಹೈಕಮಾಂಡ್ ಪಾರುಪತ್ಯ!
ವಿಧಾನ ಪರಿಷತ್ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಪಾರುಪತ್ಯ ಮೆರೆದಿದ್ದು, ಕಲ್ಯಾಣ ಕರ್ನಾಟಕಕ್ಕೆ ಈ ಬಾರಿ ಬಂಪರ್ ಲಾಟರಿ ಎನ್ನಬಹುದು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೋಟಾದಡಿಯಲ್ಲಿ ವಸಂತ ಕುಮಾರ್, ಜಗದೇವ್ ಗುತ್ತೇದಾರ್ ಅವರು ಆಯ್ಕೆಯಾಗಿದ್ದಾರೆ.

ಹೈಕಮಾಂಡ್ ಕೋಟಾದಲ್ಲಿ ಎನ್.ಎಸ್ ಬೋಸರಾಜು ಅವರಿಗೆ ಟಿಕೆಟ್ ನೀಡಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ಕೋಟಾದಲ್ಲಿ ಯತೀಂದ್ರ ಸಿದ್ದರಾಮಯ್ಯ, ಗೋವಿಂದರಾಜು, ಐವಾನ್ ಡಿಸೋಜ ಅವರ ಹೆಸರು ಪ್ರಕಟವಾಗಿದೆ.

ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಕೋಟಾದಲ್ಲಿ ಬಸವನಗೌಡ ಬಾದರ್ಲಿ ಅವರನ್ನು ಆಯ್ಕೆ ಮಾಡಲಾಗಿದೆ.

ಮಹಿಳಾ ಕೋಟಾದಲ್ಲಿ ಈ ಬಾರಿ ಅಚ್ಚರಿ ಅಭ್ಯರ್ಥಿಯಾಗಿ ಶಿವಮೊಗ್ಗ ಜಿಲ್ಲೆಯವರಾದ ಬಲ್ಕಿಸ್ ಬಾನು ಅವರಿಗೆ ಟಿಕೆಟ್ ನೀಡಲಾಗಿದೆ.

ಪರಿಷತ್ ಚುನಾವಣೆಗೆ ಆಯ್ಕೆಯಾದ ಬಿಲ್ಕಿಸ್ ಬಾನು ಹಾಗೂ ಜಗದೇವ ಗುತ್ತೇದಾರ್

ಎಸ್.ಆರ್ ಪಾಟೀಲ್‌ಗೆ ಬಿಗ್‌ ಶಾಕ್‌!
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಎಸ್‌.ಆರ್ ಪಾಟೀಲ್ ಅವರು ಈ ಬಾರಿ ವಿಧಾನಪರಿಷತ್ ಚುನಾವಣೆಗೆ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಮತ್ತೆ ಎಸ್.ಆರ್ ಪಾಟೀಲ್‌ ಅವರಿಗೆ ಕೈ ಕೊಟ್ಟು ಬಿಗ್ ಶಾಕ್ ಕೊಟ್ಟಿದೆ. ಪರಿಷತ್ ಚುನಾವಣೆಗಾಗಿ ಎಸ್‌.ಆರ್. ಪಾಟೀಲ್ ಅವರು ಸ್ವಾಮೀಜಿ ‌ಮೂಲಕ‌ ಲಾಬಿ ಮಾಡಿದ್ದರು. ಆದರೂ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಅವಕಾಶ ನೀಡಿಲ್ಲ.
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಒಬ್ಬ ಲಿಂಗಾಯತ ನಾಯಕರಿಗೆ ಸ್ಥಾನ ನೀಡಲಾಗಿದೆ. ಎಸ್.ಆರ್ ಪಾಟೀಲ್ ಬದಲಿಗೆ ಬಸವನಗೌಡ ಬಾದರ್ಲಿ ಅವಕಾಶ ನೀಡಿದೆ.

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು ಲಿಂಗಾಯತ ಸಮುದಾಯ ಬಸವನಗೌಡ ಬಾದರ್ಲಿ ಅವರನ್ನು ಕಾಂಗ್ರೆಸ್ ಆಯ್ಕೆ ಮಾಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More