newsfirstkannada.com

ನಡುರಸ್ತೆಯಲ್ಲೇ ವಿದ್ಯಾರ್ಥಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಪುಡಿರೌಡಿಗಳು; ಅಸಲಿಗೆ ಆಗಿದ್ದೇನು..?

Share :

Published June 23, 2023 at 8:31pm

    ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಯ ಮೇಲೆ ಡೆಡ್ಲಿ ಅಟ್ಯಾಕ್

    ಹಾಡಹಗಲೇ ರಸ್ತೆಯಲ್ಲಿ ಯುವಕನ ಮೇಲೆ ಮಚ್ಚಿನಿಂದ ಹಲ್ಲೆ

    ಆರೋಪಿಗಾಗಿ ಅನ್ನಪೂರ್ಣೇಶ್ವರಿ ಪೊಲೀಸರಿಂದ ತೀವ್ರ ಹುಡುಕಾಟ

ಬೆಂಗಳೂರು: ನಡುರಸ್ತೆಯಲ್ಲೇ ಕಾಲೇಜು ಯುವಕರು ಮಚ್ಚು ಹಿಡಿದುಕೊಂಡು ಒಬ್ಬರಿಗೊಬ್ಬರು ಬಡಿದಾಡಿಕೊಂಡಿರೋ ಘಟನೆ ನಾಗರಬಾವಿ ಬಿಡಿಎ ಕಾಂಪ್ಲೆಕ್ಸ್​ ಕೆಎಲ್ಇ ಕಾಲೇಜಿನ ಮುಂಭಾಗದಲ್ಲಿ ನಡೆದಿದೆ.

ಬಿಬಿಎ ವ್ಯಾಸಂಗ ಮಾಡುತ್ತಿರುವ ದರ್ಶನ್ ಎಂಬಾತನ ಮೇಲೆ ಏಕಾಏಕಿ ಅಪರಿಚಿತ ಯುವಕರ ಗುಂಪೊಂದು ದಾಳಿ ಮಾಡಿದೆ. ಇನ್ನು ಕ್ಷುಲ್ಲಕ ಕಾರಣಕ್ಕೆ ಈ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ. ಈ ಘಟನೆ ಜೂನ್​​ 5ನೇ ತಾರೀಖಿನಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಸದ್ಯ ದಾಳಿಗೊಳಗಾದ ವಿದ್ಯಾರ್ಥಿ ದರ್ಶನ್ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ದೂರನ್ನು ದಾಖಲಿಸಿಕೊಂಡು ಪೊಲೀಸ್​​ ಅಧಿಕಾರಿಗಳು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್‌ ಫಸ್ಟ್‌ ಚಾನೆಲ್​​ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ

 

ನಡುರಸ್ತೆಯಲ್ಲೇ ವಿದ್ಯಾರ್ಥಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಪುಡಿರೌಡಿಗಳು; ಅಸಲಿಗೆ ಆಗಿದ್ದೇನು..?

https://newsfirstlive.com/wp-content/uploads/2023/06/bng-halle.jpg

    ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಯ ಮೇಲೆ ಡೆಡ್ಲಿ ಅಟ್ಯಾಕ್

    ಹಾಡಹಗಲೇ ರಸ್ತೆಯಲ್ಲಿ ಯುವಕನ ಮೇಲೆ ಮಚ್ಚಿನಿಂದ ಹಲ್ಲೆ

    ಆರೋಪಿಗಾಗಿ ಅನ್ನಪೂರ್ಣೇಶ್ವರಿ ಪೊಲೀಸರಿಂದ ತೀವ್ರ ಹುಡುಕಾಟ

ಬೆಂಗಳೂರು: ನಡುರಸ್ತೆಯಲ್ಲೇ ಕಾಲೇಜು ಯುವಕರು ಮಚ್ಚು ಹಿಡಿದುಕೊಂಡು ಒಬ್ಬರಿಗೊಬ್ಬರು ಬಡಿದಾಡಿಕೊಂಡಿರೋ ಘಟನೆ ನಾಗರಬಾವಿ ಬಿಡಿಎ ಕಾಂಪ್ಲೆಕ್ಸ್​ ಕೆಎಲ್ಇ ಕಾಲೇಜಿನ ಮುಂಭಾಗದಲ್ಲಿ ನಡೆದಿದೆ.

ಬಿಬಿಎ ವ್ಯಾಸಂಗ ಮಾಡುತ್ತಿರುವ ದರ್ಶನ್ ಎಂಬಾತನ ಮೇಲೆ ಏಕಾಏಕಿ ಅಪರಿಚಿತ ಯುವಕರ ಗುಂಪೊಂದು ದಾಳಿ ಮಾಡಿದೆ. ಇನ್ನು ಕ್ಷುಲ್ಲಕ ಕಾರಣಕ್ಕೆ ಈ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ. ಈ ಘಟನೆ ಜೂನ್​​ 5ನೇ ತಾರೀಖಿನಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಸದ್ಯ ದಾಳಿಗೊಳಗಾದ ವಿದ್ಯಾರ್ಥಿ ದರ್ಶನ್ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ದೂರನ್ನು ದಾಖಲಿಸಿಕೊಂಡು ಪೊಲೀಸ್​​ ಅಧಿಕಾರಿಗಳು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್‌ ಫಸ್ಟ್‌ ಚಾನೆಲ್​​ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ

 

Load More