/newsfirstlive-kannada/media/post_attachments/wp-content/uploads/2025/07/B-SAROJA-DEVI-2.jpg)
ಸ್ಯಾಂಡಲ್​​ವುಡ್​ನ ಅಭಿನಯ ಸರಸ್ವತಿ, ಹಿರಿಯ ನಟಿ ಬಿ.ಸರೋಜಾ ದೇವಿ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇಂದು ಬೆಳಗ್ಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಹಿರಿಯ ನಟಿಯ ಅಗಲಿಕೆಗೆ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಂಬನಿ ಮಿಡಿದಿದ್ದಾರೆ. ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕನ್ನಡ ಚಿತ್ರರಂಗವು ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ ನಟಿಸಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದರು.
ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ್ಮ, ಬಬ್ರುವಾಹನ, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯ ಕಣ್ಣಮುಂದೆ ಬರುತ್ತದೆ. ಸದಭಿರುಚಿಯ ಚಿತ್ರಗಳ ಮೂಲಕ ಹಲವು ದಶಕಗಳ ಕಾಲ ಸಿನಿಪ್ರಿಯರನ್ನು ರಂಜಿಸಿದ್ದ ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕಾದ ಬಹುದೊಡ್ಡ ನಷ್ಟ. ಸರೋಜಾದೇವಿಯವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುವೆ. ಅವರ ದುಃಖತಪ್ತ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕನ್ನಡ ಚಿತ್ರರಂಗವು ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ ನಟಿಸಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದರು.
ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ್ಮ, ಬಬ್ರುವಾಹನ, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯ… pic.twitter.com/ZOVdrXGqlp— Siddaramaiah (@siddaramaiah) July 14, 2025
ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿ.. ಅಭಿನಯ ಸರಸ್ವತಿಗೆ ಪ್ರೀತಿಯ ವಿದಾಯ. ಕನ್ನಡದ ಹಿರಿಯ ನಟಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಬಿ. ಸರೋಜಾ ದೇವಿ ಅವರ ನಿಧನದ ಸುದ್ದಿ ನೋವು ತಂದಿದೆ. ಕನ್ನಡ ಸೇರಿದಂತೆ ಪಂಚ ಭಾಷೆಗಳಲ್ಲಿ ನಟಿಸಿ, 6 ದಶಕಗಳ ಕಾಲ ಚಿತ್ರರಂಗಕ್ಕೆ ಸೇವೆ ಸಲ್ಲಿಸಿ, ಸೈ ಎನಿಸಿಕೊಂಡಿದ್ದರು. ಅಗಲಿದ ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ನೀಡಲಿ. ಅಪಾರ ಅಭಿಮಾನಿಗಳಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಓಂ ಶಾಂತಿ​ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: Breaking: ಸ್ಯಾಂಡಲ್​​ವುಡ್​ನ ಅಭಿನಯ ಸರಸ್ವತಿ ಬಿ.ಸರೋಜಾದೇವಿ ಇನ್ನಿಲ್ಲ
ಅಭಿನಯ ಸರಸ್ವತಿಗೆ ಪ್ರೀತಿಯ ವಿದಾಯ..
ಕನ್ನಡದ ಹಿರಿಯ ನಟಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಬಿ. ಸರೋಜಾ ದೇವಿ ಅವರ ನಿಧನದ ಸುದ್ದಿ ನೋವು ತಂದಿದೆ. ಕನ್ನಡ ಸೇರಿದಂತೆ ಪಂಚ ಭಾಷೆಗಳಲ್ಲಿ ನಟಿಸಿ, 6 ದಶಕಗಳ ಕಾಲ ಚಿತ್ರರಂಗಕ್ಕೆ ಸೇವೆ ಸಲ್ಲಿಸಿ, ಸೈ ಎನಿಸಿಕೊಂಡಿದ್ದರು.
ಅಗಲಿದ ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ನೀಡಲಿ. ಅಪಾರ… pic.twitter.com/ea7LP77N2q— DK Shivakumar (@DKShivakumar) July 14, 2025
ಭಾರತೀಯ ಚಿತ್ರರಂಗದ ಅಮರ ನಟಿ ಶ್ರೀಮತಿ ಬಿ. ಸರೋಜಾ ದೇವಿ ಅವರ ಅಗಲಿಕೆಯ ಸುದ್ದಿ ಅತ್ಯಂತ ದುಃಖದಾಯಕ.
ಅವರು ಕನ್ನಡ ಚಿತ್ರರಂಗದ ಕಿರೀಟಮಣಿ. ಜೊತೆಗೆ ತಮಿಳು, ತೆಲುಗು, ಹಿಂದಿ ಚಿತ್ರರಂಗಗಳಲ್ಲಿಯೂ ಅಪಾರ ಪ್ರಶಂಸೆಯನ್ನು ಗಳಿಸಿದ್ದರು.
ಅವರ ಕಲಾ ಜೀವನವು ದೇಶದ ಸಾಂಸ್ಕೃತಿಕ ಪರಂಪರೆಯ ಹೆಮ್ಮೆಯ ಅಧ್ಯಾಯ. ಅವರ ಅಗಲಿಕೆಯಿಂದ ಕನ್ನಡ ಮಾತ್ರವಲ್ಲದೆ… pic.twitter.com/nedsCpuWcX— Dr. C.N. Ashwath Narayan (@drashwathcn) July 14, 2025
ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾದೇವಿ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಖವಾಗಿದೆ. "ಅಭಿನಯ ಸರಸ್ವತಿ" ಎಂದೇ ಖ್ಯಾತರಾಗಿ ಸುಮಾರು ಏಳು ದಶಕಗಳ ಕಾಲ ಕನ್ನಡ ಚಿತ್ರರಂಗವಷ್ಟೇ ಅಲ್ಲದೇ ಹಿಂದಿ, ತೆಲುಗು, ತಮಿಳು ಚಿತ್ರರಂಗದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿ ಭಾರತೀಯ ಚಿತ್ರ ರಂಗದ ಶ್ರೇಷ್ಠ ನಟಿಯರ ಸಾಲಿನಲ್ಲಿ ಗುರುತಿಸಿಕೊಂಡಿದ್ದರು.… pic.twitter.com/f30Zy83fUQ
— Basavaraj S Bommai (@BSBommai) July 14, 2025
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ