ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿ ಶುರು
ಸ್ವಾತಂತ್ರ್ಯ ಹೋರಾಟಗಾರರ ಬಂಧನಕ್ಕೆ ಸಾಕ್ಷಿಯಾಗಿದ್ದ ಜೈಲು
ಸಿಎಂ ಸಿದ್ದರಾಮಯ್ಯಗೆ ಮಾಹಿತಿ ಕೊರತೆ ಎಂದ ಬಿ.ವೈ.ರಾಘವೇಂದ್ರ
ಸ್ವಾತಂತ್ರ್ಯ ಹೋರಾಟಗಾರರ ಬಂಧನ ಮತ್ತು ಸೆರೆವಾಸಕ್ಕೆ ಸಾಕ್ಷಿಯಾಗಿರುವ ಶಿವಮೊಗ್ಗದ ಹಳೇ ಜೈಲಿನ ಆವರಣಕ್ಕೆ ಹೆಸರನ್ನಿಡುವ ನಿಟ್ಟಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿ ಶುರುವಾಗಿದೆ.
ಹಳೆಯ ಜೈಲಿನ ಜಾಗವನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಂದ್ರಶೇಖರ್ ಆಜಾದ್ ಫ್ರೀಡಂ ಪಾರ್ಕ್ ಎಂದು ಕರೆಯಲಾಗುತ್ತಿತ್ತು. ಆದರೆ ಇದೀಗ ಚಂದ್ರಶೇಖರ್ ಆಜಾದ್ ಫ್ರೀಡಂ ಪಾರ್ಕ್ ಬದಲು ಶಿವಮೊಗ್ಗದವರೇ ಆದ ವಚನಕಾರ ಅಲ್ಲಮಪ್ರಭು ಫ್ರೀಡಂ ಪಾರ್ಕ್ ಹೆಸರಿಡಬೇಕೆಂಬ ಕೂಗು ಜೋರಾಗಿದೆ.
ಇನ್ನು ಈ ಜೈಲು ಸಿಎಂ ಆಗಿದ್ದಾಗ ಸ್ಥಳಾಂತರಗೊಂಡಿತು ಎಂದಿದ್ದ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನ ಸಂಸದ ಬಿ.ವೈ.ರಾಘವೇಂದ್ರ ಅಲ್ಲಗಳೆದಿದ್ದಾರೆ. 2019ರಲ್ಲಿ ಮತ್ತೆ ಯಡಿಯೂರಪ್ಪ ಸಿಎಂ ಆದಾಗ ಕಾರಾಗೃಹ ಇಲಾಖೆಯಿಂದ ಹಳೆ ಜೈಲಿನ ಜಾಗವನ್ನು ಸಾರ್ವಜನಿಕರ ಬಳಕೆಗೆ ನೀಡುವಂತೆ ಆದೇಶಿಸಿದ್ದರು. ಆದರೆ ಮಾಹಿತಿ ಕೊರತೆಯಿಂದ ಸಿದ್ದರಾಮಯ್ಯ ಆ ರೀತಿ ಹೇಳಿದ್ದಾರೆ ಅಂತ ವ್ಯಂಗ್ಯವಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿ ಶುರು
ಸ್ವಾತಂತ್ರ್ಯ ಹೋರಾಟಗಾರರ ಬಂಧನಕ್ಕೆ ಸಾಕ್ಷಿಯಾಗಿದ್ದ ಜೈಲು
ಸಿಎಂ ಸಿದ್ದರಾಮಯ್ಯಗೆ ಮಾಹಿತಿ ಕೊರತೆ ಎಂದ ಬಿ.ವೈ.ರಾಘವೇಂದ್ರ
ಸ್ವಾತಂತ್ರ್ಯ ಹೋರಾಟಗಾರರ ಬಂಧನ ಮತ್ತು ಸೆರೆವಾಸಕ್ಕೆ ಸಾಕ್ಷಿಯಾಗಿರುವ ಶಿವಮೊಗ್ಗದ ಹಳೇ ಜೈಲಿನ ಆವರಣಕ್ಕೆ ಹೆಸರನ್ನಿಡುವ ನಿಟ್ಟಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿ ಶುರುವಾಗಿದೆ.
ಹಳೆಯ ಜೈಲಿನ ಜಾಗವನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಂದ್ರಶೇಖರ್ ಆಜಾದ್ ಫ್ರೀಡಂ ಪಾರ್ಕ್ ಎಂದು ಕರೆಯಲಾಗುತ್ತಿತ್ತು. ಆದರೆ ಇದೀಗ ಚಂದ್ರಶೇಖರ್ ಆಜಾದ್ ಫ್ರೀಡಂ ಪಾರ್ಕ್ ಬದಲು ಶಿವಮೊಗ್ಗದವರೇ ಆದ ವಚನಕಾರ ಅಲ್ಲಮಪ್ರಭು ಫ್ರೀಡಂ ಪಾರ್ಕ್ ಹೆಸರಿಡಬೇಕೆಂಬ ಕೂಗು ಜೋರಾಗಿದೆ.
ಇನ್ನು ಈ ಜೈಲು ಸಿಎಂ ಆಗಿದ್ದಾಗ ಸ್ಥಳಾಂತರಗೊಂಡಿತು ಎಂದಿದ್ದ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನ ಸಂಸದ ಬಿ.ವೈ.ರಾಘವೇಂದ್ರ ಅಲ್ಲಗಳೆದಿದ್ದಾರೆ. 2019ರಲ್ಲಿ ಮತ್ತೆ ಯಡಿಯೂರಪ್ಪ ಸಿಎಂ ಆದಾಗ ಕಾರಾಗೃಹ ಇಲಾಖೆಯಿಂದ ಹಳೆ ಜೈಲಿನ ಜಾಗವನ್ನು ಸಾರ್ವಜನಿಕರ ಬಳಕೆಗೆ ನೀಡುವಂತೆ ಆದೇಶಿಸಿದ್ದರು. ಆದರೆ ಮಾಹಿತಿ ಕೊರತೆಯಿಂದ ಸಿದ್ದರಾಮಯ್ಯ ಆ ರೀತಿ ಹೇಳಿದ್ದಾರೆ ಅಂತ ವ್ಯಂಗ್ಯವಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ