ತಾರಕಕ್ಕೇರಿದ ಪಾಕ್ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ವಿವಾದ
ಬಿಜೆಪಿ ವಿರುದ್ಧ ದೂರು ನೀಡಿದ ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್
ಕೂಡಲೇ ಕ್ರಮಕೈಗೊಳ್ಳಿ ಎಂದು ಕಮಿಷನರ್ಗೆ ನಲಪಾಡ್ ಒತ್ತಾಯ!
ಬೆಂಗಳೂರು: ಪಾಕ್ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆಗೆ ಮುಂದಾಗಿದೆ. ವಿಡಿಯೋವನ್ನ ಎಫ್ಎಸ್ಎಲ್ಗೆ ಕಳುಹಿಸಿ ಸತ್ಯಾಸತ್ಯತೆ ಪರಿಶೀಲನೆಗೆ ಕೈ ಹಾಕಿದೆ. ಒಂದು ವೇಳೆ ಪಾಕ್ ಪರ ಘೋಷಣೆ ಕೂಗಿದ್ದೂ ಸಾಬೀತಾದ್ರೆ ಕಠಿಣ ಕ್ರಮ ಎಂದು ಸಿಎಂ ಸಿದ್ದರಾಮಯ್ಯ ವಾರ್ನಿಂಗ್ ಕೊಟ್ಟಿದ್ದಾರೆ.
ರಾಜ್ಯಸಭೆ ಚುನಾವಣೆಗೆ ಗೆಲುವು ಸಾಧಿಸಿದ್ದ ಕಾಂಗ್ರೆಸ್ನ ನಾಸೀರ್ ಹುಸೇನ್ ಸಂಭ್ರಮಾಚರಣೆ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ದೇಶದ್ರೋಹಿ ಘೋಷಣೆ ಕೂಗಿದ್ದಾನೆ ಎಂದು ಹೇಳಲಾಗುತ್ತಿದೆ. ವಿಡಿಯೋ ಒಂದರಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅನ್ನೋ ಘೋಷಣೆಗಳು ಕೇಳಿ ಬಂದಿದೆ ಎಂದು ವರದಿಯಾಗಿದೆ. ಹೀಗಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕೆಂಡಕಾರಿದ್ದಾರೆ. ಈ ಮಧ್ಯೆ ಬಿಜೆಪಿ ನಾಯಕರ ವಿರುದ್ಧ ಯೂಥ್ ಕಾಂಗ್ರೆಸ್ ಪ್ರೆಸಿಡೆಂಟ್ ಮೊಹಮ್ಮದ್ ನಲಪಾಡ್ ದೂರು ನೀಡಿದ್ದಾರೆ.
ಕಮಿಷನರ್ಗೆ ದೂರು ನೀಡಿದ ಬಳಿಕ ಮಾತಾಡಿದ ಮೊಹಮ್ಮದ್ ನಲಪಾಡ್, ಬಿಜೆಪಿ ನಾಯಕರು ಪ್ರಚೋದಾನಕಾರಿ ಹೇಳಿಕೆ ನೀಡಿ ಸಮಾಜವನ್ನು ಒಡೆಯಲು ಮುಂದಾಗಿದ್ದಾರೆ. ಸತ್ಯ ಹೊರ ಬರೋ ಮುನ್ನವೇ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಹೀಗಾಗಿ ಕೂಡಲೇ ಬಿಜೆಪಿ ನಾಯಕರ ಮೇಲೆ ಕ್ರಮ ತೆಗೆದುಕೊಳ್ಳಿ ಎಂದು ದೂರು ನೀಡಿರುವುದಾಗಿ ಹೇಳಿದರು.
ರಾಜೀವ್ ಚಂದ್ರಶೇಖರ್, ಆರ್. ಅಶೋಕ್, ಅಶ್ವತ್ಥ್ ನಾರಾಯಣ್, ವಿಜಯೇಂದ್ರ ವಿರುದ್ಧ ದೂರು ನೀಡಿದ್ದೇವೆ. ನಾಸೀರ್ ಹುಸೇನ್ ಸಾಬ್ ಜಿಂದಾಬಾದ್ ಅನ್ನೋದನ್ನು ತಿರುಚಲಾಗಿದೆ. ಕೋಮು ಗಲಭೆ ಹಚ್ಚಲು ಮುಂದಾಗಿದ್ದಾರೆ. ನಾವೆಲ್ಲರೂ ಭಾರತೀಯರು, ಕನ್ನಡಿಗರು. ಒಂದು ಸಮಾಜವನ್ನು ಟಾರ್ಗೆಟ್ ಮಾಡಬಾರದು. ಕಾಂಗ್ರೆಸ್ ಮೂರು ಸೀಟು ಗೆದ್ದಿದ್ದಕ್ಕೆ ಬಿಜೆಪಿಗೆ ಉರಿ. ಹೀಗಾಗಿ ಈ ವಿವಾದ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ತಾರಕಕ್ಕೇರಿದ ಪಾಕ್ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ವಿವಾದ
ಬಿಜೆಪಿ ವಿರುದ್ಧ ದೂರು ನೀಡಿದ ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್
ಕೂಡಲೇ ಕ್ರಮಕೈಗೊಳ್ಳಿ ಎಂದು ಕಮಿಷನರ್ಗೆ ನಲಪಾಡ್ ಒತ್ತಾಯ!
ಬೆಂಗಳೂರು: ಪಾಕ್ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆಗೆ ಮುಂದಾಗಿದೆ. ವಿಡಿಯೋವನ್ನ ಎಫ್ಎಸ್ಎಲ್ಗೆ ಕಳುಹಿಸಿ ಸತ್ಯಾಸತ್ಯತೆ ಪರಿಶೀಲನೆಗೆ ಕೈ ಹಾಕಿದೆ. ಒಂದು ವೇಳೆ ಪಾಕ್ ಪರ ಘೋಷಣೆ ಕೂಗಿದ್ದೂ ಸಾಬೀತಾದ್ರೆ ಕಠಿಣ ಕ್ರಮ ಎಂದು ಸಿಎಂ ಸಿದ್ದರಾಮಯ್ಯ ವಾರ್ನಿಂಗ್ ಕೊಟ್ಟಿದ್ದಾರೆ.
ರಾಜ್ಯಸಭೆ ಚುನಾವಣೆಗೆ ಗೆಲುವು ಸಾಧಿಸಿದ್ದ ಕಾಂಗ್ರೆಸ್ನ ನಾಸೀರ್ ಹುಸೇನ್ ಸಂಭ್ರಮಾಚರಣೆ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ದೇಶದ್ರೋಹಿ ಘೋಷಣೆ ಕೂಗಿದ್ದಾನೆ ಎಂದು ಹೇಳಲಾಗುತ್ತಿದೆ. ವಿಡಿಯೋ ಒಂದರಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅನ್ನೋ ಘೋಷಣೆಗಳು ಕೇಳಿ ಬಂದಿದೆ ಎಂದು ವರದಿಯಾಗಿದೆ. ಹೀಗಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕೆಂಡಕಾರಿದ್ದಾರೆ. ಈ ಮಧ್ಯೆ ಬಿಜೆಪಿ ನಾಯಕರ ವಿರುದ್ಧ ಯೂಥ್ ಕಾಂಗ್ರೆಸ್ ಪ್ರೆಸಿಡೆಂಟ್ ಮೊಹಮ್ಮದ್ ನಲಪಾಡ್ ದೂರು ನೀಡಿದ್ದಾರೆ.
ಕಮಿಷನರ್ಗೆ ದೂರು ನೀಡಿದ ಬಳಿಕ ಮಾತಾಡಿದ ಮೊಹಮ್ಮದ್ ನಲಪಾಡ್, ಬಿಜೆಪಿ ನಾಯಕರು ಪ್ರಚೋದಾನಕಾರಿ ಹೇಳಿಕೆ ನೀಡಿ ಸಮಾಜವನ್ನು ಒಡೆಯಲು ಮುಂದಾಗಿದ್ದಾರೆ. ಸತ್ಯ ಹೊರ ಬರೋ ಮುನ್ನವೇ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಹೀಗಾಗಿ ಕೂಡಲೇ ಬಿಜೆಪಿ ನಾಯಕರ ಮೇಲೆ ಕ್ರಮ ತೆಗೆದುಕೊಳ್ಳಿ ಎಂದು ದೂರು ನೀಡಿರುವುದಾಗಿ ಹೇಳಿದರು.
ರಾಜೀವ್ ಚಂದ್ರಶೇಖರ್, ಆರ್. ಅಶೋಕ್, ಅಶ್ವತ್ಥ್ ನಾರಾಯಣ್, ವಿಜಯೇಂದ್ರ ವಿರುದ್ಧ ದೂರು ನೀಡಿದ್ದೇವೆ. ನಾಸೀರ್ ಹುಸೇನ್ ಸಾಬ್ ಜಿಂದಾಬಾದ್ ಅನ್ನೋದನ್ನು ತಿರುಚಲಾಗಿದೆ. ಕೋಮು ಗಲಭೆ ಹಚ್ಚಲು ಮುಂದಾಗಿದ್ದಾರೆ. ನಾವೆಲ್ಲರೂ ಭಾರತೀಯರು, ಕನ್ನಡಿಗರು. ಒಂದು ಸಮಾಜವನ್ನು ಟಾರ್ಗೆಟ್ ಮಾಡಬಾರದು. ಕಾಂಗ್ರೆಸ್ ಮೂರು ಸೀಟು ಗೆದ್ದಿದ್ದಕ್ಕೆ ಬಿಜೆಪಿಗೆ ಉರಿ. ಹೀಗಾಗಿ ಈ ವಿವಾದ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದ್ದಾರೆ.