ಲೋಕ ಸಮರ ಗೆಲ್ಲಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ಕದನ ಗೆಲ್ಲಲು ಕೈ ಕಲಿಗಳಿಗೆ ನಾಯಕರಿಂದ ರಣವ್ಯೂಹದ ಪಾಠ
ಗ್ಯಾರಂಟಿಗಳ ಫಲಾನುಭವಿಯಾದ್ರೂ ವಿಪಕ್ಷಗಳ ಬೆಂಬಲಿಗರ ಟೀಕೆ
ಟಾರ್ಗೆಟ್ 20+.. ಇದು ಕಾಂಗ್ರೆಸ್ನ ಗುರಿ. ಲೋಕಸಭೆಯಲ್ಲಿ ರಾಜ್ಯದಿಂದ 20ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಬೇಕೆಂದು ಹಲವು ತಂತ್ರಗಳನ್ನು ಹೆಣೆಯುತ್ತಿದೆ. ಇದರ ಭಾಗವಾಗಿಯೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಿದ ನಾಯಕರು, ಶಾಸಕರಿಗೆ ಗೆಲುವಿನ ಪಾಠ ಮಾಡಿದ್ದಾರೆ.
ದೇಶಾದ್ಯಂತ ಲೋಕಸಭಾ ಚುನಾವಣಾ ಕಾವು ಜೋರಾಗತೊಡಗಿದೆ. ಪ್ರಧಾನಿ ಮೋದಿ ನೇತೃತ್ವದ ಎನ್ಡಿಎ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿಯಲು ಹವಣಿಸುತ್ತಿದೆ. ಈ ನಿಮಿತ್ತ ಮೋದಿ ಮತ್ತೊಮ್ಮೆ ಅಂತ ಕೇಸರಿ ಕಲಿಗಳು ಈಗಾಗಲೇ ಪ್ರಚಾರದ ಅಖಾಡಕ್ಕಿಳಿದಿದ್ದಾರೆ. ಇತ್ತ ಕಾಂಗ್ರೆಸ್ ಇಂಡಿಯಾ ಮೈತ್ರಿಕೂಟ ಕಟ್ಟಿಕೊಂಡು ತೆವಳಿಕೊಂಡೋ ಸ್ಪರ್ಧೆಯಲ್ಲಿ ಧುಮುಕಿದೆ. ಈ ನಡುವೆ ಟಾರ್ಗೆಟ್ 20+ ಗುರಿ ಇಟ್ಕೊಂಡು ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ ಮಿಂಚಿನ ಸಂಚಾರ ನಡೆಸಿ ತಂತ್ರ ಹೆಣೆಯುತ್ತಿದ್ದಾರೆ.
ಲೋಕ ಸಮರ ಗೆಲ್ಲಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ಲೋಕ ಸಮರ ಗೆಲ್ಲಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ-ಲೋಕಸಭಾ ಚುನಾವಣೆಗೆ ಸಿದ್ಧರಾಗಲು ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೇವಾಲ ಸಲಹೆ-ಸೂಚನೆ
ಕದನ ಗೆಲ್ಲಲು ಕೈ ಕಲಿಗಳಿಗೆ ನಾಯಕರಿಂದ ರಣವ್ಯೂಹದ ಪಾಠ
ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 20ಕ್ಕೂ ಅಧಿಕ ಕ್ಷೇತ್ರಗಳನ್ನು ಗೆಲ್ಲಲೇಬೇಕೆಂದು ಜಿದ್ದಿಗೆ ಬಿದ್ದು ಕಾಂಗ್ರೆಸ್ ನಾಯಕರು ಅಖಾಡಕ್ಕಿಳಿದಿದ್ದಾರೆ. ಈ ಹಿನ್ನೆಲೆ ನಿನ್ನೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದಿದೆ. ಈ ವೇಳೆ ಲೋಕಸಭಾ ಚುನಾವಣೆಗೆ ಸಿದ್ಧರಾಗಲು ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೇವಾಲ ಸಲಹೆ-ಸೂಚನೆ ನೀಡಿದ್ದಾರೆ.
ಶಾಸಕರಿಗೆ ‘ಲೋಕ’ ತಂತ್ರ
ಇದೇ ವೇಳೆ ಲೋಕಸಭಾ ಚುನಾವಣೆಗೆ ರಾಜ್ಯ ಪ್ರವಾಸ ಮಾಡುವ ಕುರಿತೂ ಸಮಾಲೋಚನೆ ಮಾಡಲಾಗಿದೆ. ಅಧಿವೇಶನ ಮುಗಿಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ ಪ್ರತ್ಯೇಕವಾಗಿ ಪ್ರವಾಸ ಕೈಗೊಳ್ಳುವ ಬಗ್ಗೆ ಚರ್ಚೆಯಾಗಿದೆ. ವಿಧಾನಸಭಾ ಚುನಾವಣೆಯಂತೆ ಲೋಕಸಭಾ ಕ್ಷೇತ್ರಾವಾರು ಹಂಚಿಕೆ ಮಾಡಿಕೊಂಡು ಪ್ರವಾಸ ಕೈಗೊಳ್ಳುವ ಕುರಿತು ಮಾತುಕತೆಯಾಗಿದೆ. ಇನ್ನೂ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ನೀಡದಿರುವ ಕುರಿತು ವಿಷಯ ಪ್ರಸ್ತಾಪವಾಗಿದ್ದು ಆದಷ್ಟು ಬೇಗ ಸಂಭವನೀಯರ ಪಟ್ಟಿ ನೀಡುವಂತೆ ನಾಯಕರು ಸೂಚಿಸಿದ್ದಾರೆ.
‘ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳು ಜನರ ಹಕ್ಕು’
ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳು ಜನರ ಹಕ್ಕು. ಇದನ್ನು ನಾವು ಗಟ್ಟಿ ಧ್ವನಿಯಲ್ಲಿ ಹೇಳಬೇಕು ಅಂತ ಸಿಎಂ ಸಿದ್ದರಾಮಯ್ಯ ಶಾಸಕರಿಗೆ ಸೂಚಿಸಿದ್ದಾರೆ. ಬಿಜೆಪಿ – ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು, ಬೆಂಬಲಿಗರು ಗ್ಯಾರಂಟಿಗಳ ಫಲಾನುಭವಿಗಳಾಗಿದ್ರೂ ಟೀಕಿಸುತ್ತಿದ್ದಾರೆ. ಅಲ್ಲದೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ನಿರಂತರವಾಗಿ ಅವಮಾನಿಸುತ್ತಿದ್ದಾರೆ. ಈ ಬಗ್ಗೆ ಸದನದಲ್ಲಿ ಹೆಮ್ಮೆಯಿಂದ ಮಾತನಾಡಬೇಕು ಅಂತ ಸಿಎಂ ಹೇಳಿದರು.
ಒಟ್ಟಾರೆ ಹಸ್ತಪಡೆ ಲೋಕಸಮರದಲ್ಲಿ ಟಾರ್ಗೆಟ್ 20+ ಇಟ್ಕೊಂಡು ಮುನ್ನುಗ್ಗುತ್ತಿದೆ. ವಿಧಾನಸಭೆ ಚುನಾವಣೆ ಗೆಲುವಿನ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್ ಇದೇ ಚಾರ್ಜ್ನೊಂದಿಗೆ ಲೋಕಸಭೆಯಲ್ಲೂ ಗೆಲ್ಲಲು ತಯಾರಿ ನಡೆಸಿದೆ.
ವಿಶೇಷ ವರದಿ: ಶಿವಪ್ರಸಾದ ನ್ಯೂಸ್ ಫಸ್ಟ್ ಬೆಂಗಳೂರು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಲೋಕ ಸಮರ ಗೆಲ್ಲಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ಕದನ ಗೆಲ್ಲಲು ಕೈ ಕಲಿಗಳಿಗೆ ನಾಯಕರಿಂದ ರಣವ್ಯೂಹದ ಪಾಠ
ಗ್ಯಾರಂಟಿಗಳ ಫಲಾನುಭವಿಯಾದ್ರೂ ವಿಪಕ್ಷಗಳ ಬೆಂಬಲಿಗರ ಟೀಕೆ
ಟಾರ್ಗೆಟ್ 20+.. ಇದು ಕಾಂಗ್ರೆಸ್ನ ಗುರಿ. ಲೋಕಸಭೆಯಲ್ಲಿ ರಾಜ್ಯದಿಂದ 20ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಬೇಕೆಂದು ಹಲವು ತಂತ್ರಗಳನ್ನು ಹೆಣೆಯುತ್ತಿದೆ. ಇದರ ಭಾಗವಾಗಿಯೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಿದ ನಾಯಕರು, ಶಾಸಕರಿಗೆ ಗೆಲುವಿನ ಪಾಠ ಮಾಡಿದ್ದಾರೆ.
ದೇಶಾದ್ಯಂತ ಲೋಕಸಭಾ ಚುನಾವಣಾ ಕಾವು ಜೋರಾಗತೊಡಗಿದೆ. ಪ್ರಧಾನಿ ಮೋದಿ ನೇತೃತ್ವದ ಎನ್ಡಿಎ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿಯಲು ಹವಣಿಸುತ್ತಿದೆ. ಈ ನಿಮಿತ್ತ ಮೋದಿ ಮತ್ತೊಮ್ಮೆ ಅಂತ ಕೇಸರಿ ಕಲಿಗಳು ಈಗಾಗಲೇ ಪ್ರಚಾರದ ಅಖಾಡಕ್ಕಿಳಿದಿದ್ದಾರೆ. ಇತ್ತ ಕಾಂಗ್ರೆಸ್ ಇಂಡಿಯಾ ಮೈತ್ರಿಕೂಟ ಕಟ್ಟಿಕೊಂಡು ತೆವಳಿಕೊಂಡೋ ಸ್ಪರ್ಧೆಯಲ್ಲಿ ಧುಮುಕಿದೆ. ಈ ನಡುವೆ ಟಾರ್ಗೆಟ್ 20+ ಗುರಿ ಇಟ್ಕೊಂಡು ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ ಮಿಂಚಿನ ಸಂಚಾರ ನಡೆಸಿ ತಂತ್ರ ಹೆಣೆಯುತ್ತಿದ್ದಾರೆ.
ಲೋಕ ಸಮರ ಗೆಲ್ಲಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ಲೋಕ ಸಮರ ಗೆಲ್ಲಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ-ಲೋಕಸಭಾ ಚುನಾವಣೆಗೆ ಸಿದ್ಧರಾಗಲು ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೇವಾಲ ಸಲಹೆ-ಸೂಚನೆ
ಕದನ ಗೆಲ್ಲಲು ಕೈ ಕಲಿಗಳಿಗೆ ನಾಯಕರಿಂದ ರಣವ್ಯೂಹದ ಪಾಠ
ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 20ಕ್ಕೂ ಅಧಿಕ ಕ್ಷೇತ್ರಗಳನ್ನು ಗೆಲ್ಲಲೇಬೇಕೆಂದು ಜಿದ್ದಿಗೆ ಬಿದ್ದು ಕಾಂಗ್ರೆಸ್ ನಾಯಕರು ಅಖಾಡಕ್ಕಿಳಿದಿದ್ದಾರೆ. ಈ ಹಿನ್ನೆಲೆ ನಿನ್ನೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದಿದೆ. ಈ ವೇಳೆ ಲೋಕಸಭಾ ಚುನಾವಣೆಗೆ ಸಿದ್ಧರಾಗಲು ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೇವಾಲ ಸಲಹೆ-ಸೂಚನೆ ನೀಡಿದ್ದಾರೆ.
ಶಾಸಕರಿಗೆ ‘ಲೋಕ’ ತಂತ್ರ
ಇದೇ ವೇಳೆ ಲೋಕಸಭಾ ಚುನಾವಣೆಗೆ ರಾಜ್ಯ ಪ್ರವಾಸ ಮಾಡುವ ಕುರಿತೂ ಸಮಾಲೋಚನೆ ಮಾಡಲಾಗಿದೆ. ಅಧಿವೇಶನ ಮುಗಿಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ ಪ್ರತ್ಯೇಕವಾಗಿ ಪ್ರವಾಸ ಕೈಗೊಳ್ಳುವ ಬಗ್ಗೆ ಚರ್ಚೆಯಾಗಿದೆ. ವಿಧಾನಸಭಾ ಚುನಾವಣೆಯಂತೆ ಲೋಕಸಭಾ ಕ್ಷೇತ್ರಾವಾರು ಹಂಚಿಕೆ ಮಾಡಿಕೊಂಡು ಪ್ರವಾಸ ಕೈಗೊಳ್ಳುವ ಕುರಿತು ಮಾತುಕತೆಯಾಗಿದೆ. ಇನ್ನೂ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ನೀಡದಿರುವ ಕುರಿತು ವಿಷಯ ಪ್ರಸ್ತಾಪವಾಗಿದ್ದು ಆದಷ್ಟು ಬೇಗ ಸಂಭವನೀಯರ ಪಟ್ಟಿ ನೀಡುವಂತೆ ನಾಯಕರು ಸೂಚಿಸಿದ್ದಾರೆ.
‘ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳು ಜನರ ಹಕ್ಕು’
ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳು ಜನರ ಹಕ್ಕು. ಇದನ್ನು ನಾವು ಗಟ್ಟಿ ಧ್ವನಿಯಲ್ಲಿ ಹೇಳಬೇಕು ಅಂತ ಸಿಎಂ ಸಿದ್ದರಾಮಯ್ಯ ಶಾಸಕರಿಗೆ ಸೂಚಿಸಿದ್ದಾರೆ. ಬಿಜೆಪಿ – ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು, ಬೆಂಬಲಿಗರು ಗ್ಯಾರಂಟಿಗಳ ಫಲಾನುಭವಿಗಳಾಗಿದ್ರೂ ಟೀಕಿಸುತ್ತಿದ್ದಾರೆ. ಅಲ್ಲದೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ನಿರಂತರವಾಗಿ ಅವಮಾನಿಸುತ್ತಿದ್ದಾರೆ. ಈ ಬಗ್ಗೆ ಸದನದಲ್ಲಿ ಹೆಮ್ಮೆಯಿಂದ ಮಾತನಾಡಬೇಕು ಅಂತ ಸಿಎಂ ಹೇಳಿದರು.
ಒಟ್ಟಾರೆ ಹಸ್ತಪಡೆ ಲೋಕಸಮರದಲ್ಲಿ ಟಾರ್ಗೆಟ್ 20+ ಇಟ್ಕೊಂಡು ಮುನ್ನುಗ್ಗುತ್ತಿದೆ. ವಿಧಾನಸಭೆ ಚುನಾವಣೆ ಗೆಲುವಿನ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್ ಇದೇ ಚಾರ್ಜ್ನೊಂದಿಗೆ ಲೋಕಸಭೆಯಲ್ಲೂ ಗೆಲ್ಲಲು ತಯಾರಿ ನಡೆಸಿದೆ.
ವಿಶೇಷ ವರದಿ: ಶಿವಪ್ರಸಾದ ನ್ಯೂಸ್ ಫಸ್ಟ್ ಬೆಂಗಳೂರು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ